ಕಲಬುರಗಿಗೆ ‘ಕೋವಿಡ್’ ಸಿಹಿ-ಕಹಿ: 14 ಜನ ಆಸ್ಪತ್ರೆಗೆ, 10 ಜನ ಆಸ್ಪತ್ರೆಯಿಂದ ಮನೆಗೆ!


Team Udayavani, May 25, 2020, 2:35 PM IST

ಕಲಬುರಗಿಗೆ ‘ಕೋವಿಡ್’ ಸಿಹಿ-ಕಹಿ: 14 ಜನ ಆಸ್ಪತ್ರೆಗೆ, 10 ಜನ ಆಸ್ಪತ್ರೆಯಿಂದ ಮನೆಗೆ!

ಕಲಬುರಗಿ: ರಂಜಾನ್ ಹಬ್ಬದ ದಿನವಾದ ಸೋಮವಾರ ಮಹಾಮಾರಿ‌ ಕೋವಿಡ್-19 ಸೋಂಕು ಕಲಬುರಗಿಗೆ ಸಿಹಿ-ಕಹಿ ಎರಡನ್ನೂ ನೀಡಿದೆ.‌

ಒಂದೇ ದಿನದಲ್ಲಿ 14 ಜನರಿಗೆ ಮಹಾಮಾರಿ‌ ದೃಢಪಟ್ಟಿದ್ದರೆ, 10 ಮಂದಿ ಸೋಂಕಿತರು ಕೋವಿಡ್ ‌ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದಾರೆ. ವಿಶೇಷವೆಂದರೆ ಕಳೆದ 73 ದಿನಗಳಲ್ಲಿ ಒಂದೇ ದಿನ ಅತಿ ಹೆಚ್ಚು ಜನರಿಗೆ ಸೋಂಕು ಪತ್ತೆಯಾಗಿದೆ. ‌ಹಾಗೆ ಆಸ್ಪತ್ರೆಯಿಂದ ಅತ್ಯಧಿಕ ಸೋಂಕಿತರು ಬಿಡುಗಡೆಯಾಗಿದ್ದಾರೆ.

14 ಜನ ಸೋಂಕಿತರು ಮಹಾರಾಷ್ಟ್ರದಿಂದ ಮರಳಿದ ವಲಸೆ ಕಾರ್ಮಿಕರಾಗಿದ್ದಾರೆ. 13 ಜನ ಚಿತ್ತಾಪುರ ತಾಲೂಕಿ‌ನವರಾಗಿದ್ದು, ಒಬ್ಬರು ಕಲಬುರಗಿ ನಗರದರವಾಗಿದ್ದಾರೆ. ಇವರಲ್ಲಿ 68 ವರ್ಷದ ಓರ್ವ ವೃದ್ಧ, 10 ವರ್ಷದ ಬಾಲಕ, 15 ವರ್ಷದ ಬಾಲಕಿ ಸೇರಿದ್ದಾರೆ.

ಉಳಿದಂತೆ ಮೂವರು ಮಹಿಳೆಯರು ಹಾಗೂ ಎಂಟು ಜನರಿಗೆ ಪುರುಷರಿಗೆ ಮಹಾಮಾರಿ‌ ರೋಗ ಅಂಟಿದೆ. ಇವರೆಲ್ಲರೂ ಕ್ವಾರಂಟೈನ್ ಕೇಂದ್ರಗಳಲ್ಲಿ ಕ್ವಾರಂಟೈನ್ ಆಗಿದ್ದರು. ಮೇ 12ರಂದು ಮಹಾರಾಷ್ಟ್ರದಿಂದ ಬಸ್ ಮೂಲಕ ಕಲಬುರಗಿಗೆ ಬಂದಿದ್ದರು.

ಮೋಮಿನಪುರ ನಿರಾಳ: ಜಿಲ್ಲೆಯಲ್ಲೇ ಅತಿ ಹೆಚ್ಚು ಕೋವಿಡ್ ಸೋಂಕಿತರು ಪತ್ತೆಯಾದ ಕಲಬುರಗಿ ನಗರದ ಮೋಮಿನಪುರ ಬಡಾವಣೆ ಸೋಮವಾರ ನಿರಾಳವಾಗಿದೆ‌. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ 10 ಜನರಲ್ಲಿ ಇದೇ ಬಡಾವಣೆಯ 9 ಜನರಿದ್ದಾರೆ. ಮಿಜಗುರಿ ಪ್ರದೇಶದ ಹಣ್ಣಿನ ವ್ಯಾಪಾರಿ (ಪಿ-849) ಸಹ ಸೋಂಕಿನಿಂದ ಮುಕ್ತವಾಗಿದ್ದಾರೆ.

ಮೋಮಿನಪುರದ 35 ವರ್ಷದ ಮಡಿಕಲ್ ರೆಪ್ರೆಸೆಂಟೇಟಿವ್ (ಪಿ-848) ಹಾಗೂ ಆತನ ಸಂಪರ್ಕಕ್ಕೆ ಬಂದಿದ್ದ 30 ವರ್ಷದ ಮಹಿಳೆ (ಪಿ-953), ಕುಟುಂಬ ಸದಸ್ಯರಾದ 33 ವರ್ಷದ ಮಹಿಳೆ (ಪಿ-1080), 15 ವರ್ಷದ ಬಾಲಕಿ (ಪಿ-1081), 14 ವರ್ಷದ ಬಾಲಕಿ (ಪಿ-1082), 55 ವರ್ಷದ ಮಹಿಳೆ (ಪಿ-1083), 60 ವರ್ಷದ ವೃದ್ಧ (ಪಿ-1086),10 ವರ್ಷದ ಬಾಲಕಿ (ಪಿ-1087) ಗುಣಮುಖರಾಗಿದ್ದಾರೆ. ಇದೇ ಪ್ರದೇಶದ 50 ವರ್ಷದ ಮಹಿಳೆ (ಪಿ-1085) ಸಹ ಸೋಂಕಿನಿಂದ ವಾಸಿಯಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ155 ಜನರಿಗೆ ಕೋವಿಡ್-19 ಪತ್ತೆಯಾಗಿದ್ದು, ಇದರಲ್ಲಿ 72 ಜನ ಗುಣಮುಖರಾಗಿದ್ದಾರೆ. 7 ಜನ‌ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಉಳಿದಂತೆ 76 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.