ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು KKRDB ಯಿಂದ 50 ಅಂಬ್ಯುಲೆನ್ಸ್: ಡಾ.ಅಜಯ ಸಿಂಗ್


Team Udayavani, Aug 28, 2024, 2:26 PM IST

ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು KKRDB ಯಿಂದ 50 ಅಂಬ್ಯುಲೆನ್ಸ್: ಡಾ.ಅಜಯ ಸಿಂಗ್

ಕಲಬುರಗಿ: ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಈಗಾಗಲೇ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆಗೆ 222 ಕೋ. ರೂ ಅನುದಾನ ನೀಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ( KKRDB) ಮಂಡಳಿಯು ಈಗ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಮಂಡಳಿಯಿಂದಲೇ 50 ಅಂಬ್ಯುಲೆನ್ಸ್ ಗಳನ್ನು ನೀಡಲು ನಿರ್ಧರಿಸಿದೆ.

ಹೃದ್ರೋಗಕ್ಕೆ ಒಳಗಾದವರನ್ನು ಒಂದು ಗಂಟೆಯೊಳಗೆ ಆಸ್ಪತ್ರೆಗೆ ಸೇರಿಸುವುದು ಮುಖ್ಯವಾಗಿರುತ್ತದೆ. ಗ್ರಾಮೀಣ ಭಾಗದ ಹೃದ್ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ದೊರಕುವಂತಾಗಲು ಅಂಬ್ಯುಲೆನ್ಸ್ ನೀಡಲಾಗುತ್ತಿದೆ ಎಂದು ಮಂಡಳಿ ಅಧ್ಯಕ್ಷರಾಗಿರುವ ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ಹೇಳಿದರು.

ನಗರದಲ್ಲಿ ಕೆಕೆಆರ್ ಡಿಬಿ ಸಂಪೂರ್ಣ 222.65 ಕೋ. ರೂ ಅನುದಾನ ದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆ ಯ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ ನಂತರ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದರು.

ಅಂಬ್ಯುಲೆನ್ಸ್ ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಂದು ಜಿಲ್ಲೆ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಇರಲಿದ್ದು, ಅಂಬ್ಯುಲೆನ್ಸ್ ಕಾರ್ಯನಿರ್ವಹಣೆಗಾಗಿ ಕೆಕೆಆರ್ ಡಿಬಿ ಯಿಂದಲೇ ಹಾಟ್ ಲೈನ್ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಿಸಿದರು.

ಕಲಬುರಗಿ ನಗರ ಹಾಗೂ ಸುತ್ತಮುತ್ತಲಿನ ಹೃದ್ರೋಗಿಗಳನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿದರೆ ಉಳಿದ ತಾಲೂಕುಗಳಲ್ಲಿ ಮೊದಲು ತಾಲೂಕಾ ಆಸ್ಪತ್ರೆಯಲ್ಲಿ ಮೊದಲ‌ ಹಂತದ ಚಿಕಿತ್ಸೆ ನೀಡಲಾಗಿ, ತದನಂತರ ಹೃದ್ರೋಗ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಒಟ್ಟಾರೆ ಹೃದಯ ರೋಗಿಗಳಿಗೆ ಬೇಗ ಚಿಕಿತ್ಸೆ ದೊರಕಲು ಅಂಬ್ಯುಲೆನ್ಸ್ ನೀಡಲಾಗುತ್ತಿದೆ.‌ ಕಲಬುರಗಿಯಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ನೂ ಹೆಚ್ಚುವರಿ ಹಣ ಕೇಳಿದರೆ ಇನ್ನಷ್ಟು ಹಣ ಮಂಡಳಿಯಿಂದ ನೀಡಲಾಗುವುದು ಎಂದು ಡಾ.‌ಅಜಯಸಿಂಗ್ ವಿವರಣೆ ನೀಡಿದರು.

ಸೆಪ್ಟೆಂಬರ್ ಮಾಸಾಂತ್ಯಕ್ಕೆ ಉದ್ಘಾಟನೆ: ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಸೆಪ್ಟೆಂಬರ್ ಮಾಸಾಂತ್ಯದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸೆ.‌17 ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಉದ್ಘಾಟನೆ ನೆರವೇರಿಸಬಹುದಿತ್ತು.ಆದರೆ ಆ ದಿನ ಕಕ ಭಾಗದ ಸಚಿವರು ಅವರವರ ಜಿಲ್ಲೆಯಲ್ಲಿ ಕಕ ಉತ್ಸವದಲ್ಲಿ ಭಾಗಿಯಾಗುವುದರಿಂದ ಬೇರೆ ದಿನದಂದೇ ಸಿಎಂ ಹಾಗೂ ಸಚಿವರೊಂದಿಗೆ ಸಮಾಲೋಚಿಸಿ ದಿನಾಂಕ ನಿರ್ಧರಿಸಲಾಗುವುದು ಎಂದರು.

ವಿವಿಗಳ ಅಭಿವೃದ್ಧಿ ಗೆ ರಾಜ್ಯಪಾಲರ ವಿವೇಚನಾ ನಿಧಿ: ಕಲ್ಯಾಣ ಕರ್ನಾಟಕದ 9 ಸರ್ಕಾರಿ , ಒಂದು ಸಿಯುಕೆ ಹಾಗೂ ಮೂರು ಖಾಸಗಿ ವಿವಿಗಳ ಅಭಿವೃದ್ಧಿ ಗೆಂದು ರಾಜ್ಯಪಾಲರ ವಿವೇಚನಾ ನಿಗದಿ ಎಂಬುದಾಗಿದೆ. ಆದರೆ ಒಂದೇ ಒಂದು ಪೈಸೆ ಕಕ ಹೊರ ಭಾಗದಲ್ಲಿ ವಿನಿಯೋಗವಾಗುವುದಿಲ್ಲ ಎಂದು ಡಾ. ಅಜಯಸಿಂಗ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ನಿಯಮಾನುಸಾರ ನಿವೇಶನ ಹಂಚಿಕೆ: ಹಿರಿಯ ನಾಯಕ ಖಗೆ೯ ಕುಟುಂಬ ಒಡೆತನದ ಸಿದ್ದಾರ್ಥ ಟ್ರಸ್ಟ್ ಗೆ ನಿಯಮಾನುಸಾರ ಸಿಎ ನಿವೇಶನ ಹಂಚಿಕೆಯಾಗಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವರಣೆ ನೀಡಿದ್ದಾರೆ. ಇದರಲ್ಲಿ ಪ್ರಭಾವ ಏನೂ ಇಲ್ಲ ಎಂದು ಡಾ. ಅಜಯಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಡಳಿ ಕಾರ್ಯದರ್ಶಿ ಸುಂದರೇಶ ಬಾಬು, ಮುಖಂಡರಾದ ನೀಲಕಂಠರಾವ ಮೂಲಗೆ, ಶರಣು ಭೂಸನೂರ ಹಾಗೂ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.