ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು KKRDB ಯಿಂದ 50 ಅಂಬ್ಯುಲೆನ್ಸ್: ಡಾ.ಅಜಯ ಸಿಂಗ್


Team Udayavani, Aug 28, 2024, 2:26 PM IST

ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು KKRDB ಯಿಂದ 50 ಅಂಬ್ಯುಲೆನ್ಸ್: ಡಾ.ಅಜಯ ಸಿಂಗ್

ಕಲಬುರಗಿ: ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಈಗಾಗಲೇ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆಗೆ 222 ಕೋ. ರೂ ಅನುದಾನ ನೀಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ( KKRDB) ಮಂಡಳಿಯು ಈಗ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಮಂಡಳಿಯಿಂದಲೇ 50 ಅಂಬ್ಯುಲೆನ್ಸ್ ಗಳನ್ನು ನೀಡಲು ನಿರ್ಧರಿಸಿದೆ.

ಹೃದ್ರೋಗಕ್ಕೆ ಒಳಗಾದವರನ್ನು ಒಂದು ಗಂಟೆಯೊಳಗೆ ಆಸ್ಪತ್ರೆಗೆ ಸೇರಿಸುವುದು ಮುಖ್ಯವಾಗಿರುತ್ತದೆ. ಗ್ರಾಮೀಣ ಭಾಗದ ಹೃದ್ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ದೊರಕುವಂತಾಗಲು ಅಂಬ್ಯುಲೆನ್ಸ್ ನೀಡಲಾಗುತ್ತಿದೆ ಎಂದು ಮಂಡಳಿ ಅಧ್ಯಕ್ಷರಾಗಿರುವ ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ಹೇಳಿದರು.

ನಗರದಲ್ಲಿ ಕೆಕೆಆರ್ ಡಿಬಿ ಸಂಪೂರ್ಣ 222.65 ಕೋ. ರೂ ಅನುದಾನ ದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆ ಯ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ ನಂತರ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದರು.

ಅಂಬ್ಯುಲೆನ್ಸ್ ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಂದು ಜಿಲ್ಲೆ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಇರಲಿದ್ದು, ಅಂಬ್ಯುಲೆನ್ಸ್ ಕಾರ್ಯನಿರ್ವಹಣೆಗಾಗಿ ಕೆಕೆಆರ್ ಡಿಬಿ ಯಿಂದಲೇ ಹಾಟ್ ಲೈನ್ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಿಸಿದರು.

ಕಲಬುರಗಿ ನಗರ ಹಾಗೂ ಸುತ್ತಮುತ್ತಲಿನ ಹೃದ್ರೋಗಿಗಳನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿದರೆ ಉಳಿದ ತಾಲೂಕುಗಳಲ್ಲಿ ಮೊದಲು ತಾಲೂಕಾ ಆಸ್ಪತ್ರೆಯಲ್ಲಿ ಮೊದಲ‌ ಹಂತದ ಚಿಕಿತ್ಸೆ ನೀಡಲಾಗಿ, ತದನಂತರ ಹೃದ್ರೋಗ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಒಟ್ಟಾರೆ ಹೃದಯ ರೋಗಿಗಳಿಗೆ ಬೇಗ ಚಿಕಿತ್ಸೆ ದೊರಕಲು ಅಂಬ್ಯುಲೆನ್ಸ್ ನೀಡಲಾಗುತ್ತಿದೆ.‌ ಕಲಬುರಗಿಯಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ನೂ ಹೆಚ್ಚುವರಿ ಹಣ ಕೇಳಿದರೆ ಇನ್ನಷ್ಟು ಹಣ ಮಂಡಳಿಯಿಂದ ನೀಡಲಾಗುವುದು ಎಂದು ಡಾ.‌ಅಜಯಸಿಂಗ್ ವಿವರಣೆ ನೀಡಿದರು.

ಸೆಪ್ಟೆಂಬರ್ ಮಾಸಾಂತ್ಯಕ್ಕೆ ಉದ್ಘಾಟನೆ: ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಸೆಪ್ಟೆಂಬರ್ ಮಾಸಾಂತ್ಯದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸೆ.‌17 ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಉದ್ಘಾಟನೆ ನೆರವೇರಿಸಬಹುದಿತ್ತು.ಆದರೆ ಆ ದಿನ ಕಕ ಭಾಗದ ಸಚಿವರು ಅವರವರ ಜಿಲ್ಲೆಯಲ್ಲಿ ಕಕ ಉತ್ಸವದಲ್ಲಿ ಭಾಗಿಯಾಗುವುದರಿಂದ ಬೇರೆ ದಿನದಂದೇ ಸಿಎಂ ಹಾಗೂ ಸಚಿವರೊಂದಿಗೆ ಸಮಾಲೋಚಿಸಿ ದಿನಾಂಕ ನಿರ್ಧರಿಸಲಾಗುವುದು ಎಂದರು.

ವಿವಿಗಳ ಅಭಿವೃದ್ಧಿ ಗೆ ರಾಜ್ಯಪಾಲರ ವಿವೇಚನಾ ನಿಧಿ: ಕಲ್ಯಾಣ ಕರ್ನಾಟಕದ 9 ಸರ್ಕಾರಿ , ಒಂದು ಸಿಯುಕೆ ಹಾಗೂ ಮೂರು ಖಾಸಗಿ ವಿವಿಗಳ ಅಭಿವೃದ್ಧಿ ಗೆಂದು ರಾಜ್ಯಪಾಲರ ವಿವೇಚನಾ ನಿಗದಿ ಎಂಬುದಾಗಿದೆ. ಆದರೆ ಒಂದೇ ಒಂದು ಪೈಸೆ ಕಕ ಹೊರ ಭಾಗದಲ್ಲಿ ವಿನಿಯೋಗವಾಗುವುದಿಲ್ಲ ಎಂದು ಡಾ. ಅಜಯಸಿಂಗ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ನಿಯಮಾನುಸಾರ ನಿವೇಶನ ಹಂಚಿಕೆ: ಹಿರಿಯ ನಾಯಕ ಖಗೆ೯ ಕುಟುಂಬ ಒಡೆತನದ ಸಿದ್ದಾರ್ಥ ಟ್ರಸ್ಟ್ ಗೆ ನಿಯಮಾನುಸಾರ ಸಿಎ ನಿವೇಶನ ಹಂಚಿಕೆಯಾಗಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವರಣೆ ನೀಡಿದ್ದಾರೆ. ಇದರಲ್ಲಿ ಪ್ರಭಾವ ಏನೂ ಇಲ್ಲ ಎಂದು ಡಾ. ಅಜಯಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಡಳಿ ಕಾರ್ಯದರ್ಶಿ ಸುಂದರೇಶ ಬಾಬು, ಮುಖಂಡರಾದ ನೀಲಕಂಠರಾವ ಮೂಲಗೆ, ಶರಣು ಭೂಸನೂರ ಹಾಗೂ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.