![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 13, 2020, 2:29 PM IST
ಕಲಬುರಗಿ: ರಾಜ್ಯದ ಏಕೈಕ ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ದಲ್ಲಿ ಕೋವಿಡ್- 19 ಲ್ಯಾಬ್ ಗೆ ಜಿಲ್ಲಾಡಳಿತದಿಂದ 84 ಲಕ್ಷ ರೂ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಡಾ.ಉಮೇಶ ಜಾಧವ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣೆ ಸಮಿತಿ (ದಿಶಾ) ಸಭೆಯಲ್ಲಿ ಸಿಯುಕೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಐಸಿಎಂಆರ್ ಅನುಮತಿ ನೀಡಲಾಗಿದ್ದರೂ ಯಾಕೆ ಲ್ಯಾಬ್ ಕಾರ್ಯಾರಂಭಗೊಂಡಿಲ್ಲ ಎಂದು ಖಾರವಾಗಿ ಪ್ರಶ್ನಿಸಲಾಯಿತು.
ಇದಕ್ಕೆ ವಿವಿಯ ಸಮ ಕುಲಪತಿ ಡಾ. ಜಿ.ಆರ್. ನಾಯಕ ಅವರು ಲ್ಯಾಬ್ ಗೆ ವಿವಿಯಿಂದ 35 ಲಕ್ಷ ರೂ ಖರ್ಚು ಮಾಡಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಉಳಿದ ಹಣ ಕ್ರೋಢಿಕರಿಸಲಾಗುತ್ತಿದೆ ಎಂದರು. ಇದಕ್ಕೆ ಸಂಸದರು ಉಳಿದ 84 ಲಕ್ಷ ರೂ ಜಿಲ್ಲಾಡಳಿತ ದಿಂದ ನೀಡಲಾಗುವುದು ಎಂದು ಹೇಳಿ ಸಭೆಯಲ್ಲೆ ಚೆಕ್ ಬರೆಯಲು ಡಿಸಿ ಅವರಿಗೆ ಸೂಚಿಸಿದರು. 10 ನಿಮಿಷದಲ್ಲಿಯೇ ಚೆಕ್ ಸಿದ್ದಗೊಳಿಸಿ ಸಮ ಕುಲಪತಿಗಳಿಗೆ ಸಲ್ಲಿಸಲಾಯಿತು. ವಾರದೊಳಗೆ ಉದ್ಘಾಟನೆಯಾಗಬೇಕೆಂದು ಸಂಸದರು ಇದೇ ಸಂದರ್ಭದಲ್ಲಿ ಸೂಚಿಸಿದರು.
ಇದಕ್ಕೂಮುಂಚೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕೇಂದ್ರೀಯ ವಿ.ವಿ. ಕಲಬುರ್ಗಿಯಲ್ಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಲಾಯಿತು.
ಈ ಭಾಗದ ಜನಪ್ರತಿನಿಧಿಗಳ ಪ್ರಯತ್ನದ ಫಲವಾಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿ ಆರಂಭವಾದ ಕರ್ನಾಟಕ ಕೇಂದ್ರೀಯ ವಿ.ವಿ.ಯಲ್ಲಿ ನಡೆಯುವ ಯಾವ ಚಟುವಟಿಕೆಗಳ ಬಗ್ಗೆಯೂ ಜನಪ್ರತಿನಿಧಿಗಳಿಗೆ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವುದಿಲ್ಲ. ವಿ.ವಿ. ಕಲಬುರ್ಗಿಯಲ್ಲಿಲ್ಲವೇ ಎಂದು ಸಂಸದ ಡಾ.ಉಮೇಶ ಜಾಧವ ಪ್ರಶ್ನಿಸಿದರು.
ಫೆಬ್ರುವರಿಯಲ್ಲಿ ವಿ.ವಿ. ಆವರಣದಲ್ಲಿ ಕೋವಿಡ್ ತಪಾಸಣೆ ಕೇಂದ್ರ ಆರಂಭಿಸಲು ಅನುಮತಿ ಸಿಕ್ಕಿದೆ. ಎಲ್ಲ ಯಂತ್ರಗಳು ಬಂದಿವೆ ಎಂದು ವಿ.ವಿ. ಸಮ ಕುಲಪತಿ ಪ್ರೊ.ಜಿ.ಆರ್.ನಾಯಕ್ ಹೇಳಿದರು.
ಇದರಿಂದ ಗರಂ ಆದ ಜಾಧವ ಹಾಗೂ ಜಿಲ್ಲಾಧಿಕಾರಿ ಶರತ್ ಬಿ., ಕೋವಿಡ್ ಕೇಂದ್ರ ಇಲ್ಲವೆಂದು ನಾವು ಚಿಂತೆ ಮಾಡುತ್ತಿದ್ದೇವೆ. ನೀವು ಎಲ್ಲ ಸಿದ್ಧತೆ ಮಾಡಿಕೊಂಡರೂ ನಮಗೆ ತಿಳಿಸದಿದ್ದರೆ ಹೇಗೆ? ಮುಂಚೆಯೇ ತಿಳಿಸಿದ್ದರೆ ಅಲ್ಲಿ ಅಫಜಲಪುರ, ಅಳಂದ ಹಾಗೂ ಕಲಬುರ್ಗಿ ತಾಲ್ಲೂಕಿನ ಕೋವಿಡ್ ಶಂಕಿತರನ್ನು ತಪಾಸಣೆಗೆ ಕಳಿಸುತ್ತಿದ್ದೆವು. ಕೋವಿಡ್ ತಪಾಸಣೆ ಆರಂಭಿಸುವ ಬಗ್ಗೆ ಸರ್ಕಾರದ ಕಾರ್ಯದರ್ಶಿ ಅವರಿಂದ ಇಂದು ಪತ್ರ ಬಂದ ಬಳಿಕ ಗೊತ್ತಾಯಿತು ಎಂದರು.
ಸಾಕಷ್ಟು ಶ್ರಮ ಹಾಕಿ ವಿ.ವಿ.ಯನ್ನು ಕಲಬುರ್ಗಿಗೆ ತಂದಿದ್ದೇವೆ. ಯಾವುದಕ್ಕೂ ನಮ್ಮನ್ನು ಕರೆಯಲ್ಲ ಎಂದು ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ ಆಕ್ಷೇಪ ವ್ಯಕ್ತಪಡಿಸಿದರು.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯಿಂದ ಬರುವ ಎಲ್ಲ ಸುತ್ತೋಲೆ, ಪತ್ರಗಳ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ನನ್ನ ಕಚೇರಿ ಹಾಗೂ ಬೀದರ್ ಸಂಸದ (ಆಳಂದ ತಾಲ್ಲೂಕು ಬೀದರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ) ಭಗವಂತ ಖೂಬಾ ಅವರ ಕಚೇರಿಗೆ ಕಳಿಸಿಕೊಡಬೇಕು ಎಂದು ಸಂಸದ ಡಾ. ಜಾಧವ ವಿ.ವಿ. ಕುಲಸಚಿವ ಮುಷ್ತಾಕ್ ಅಹ್ಮದ್ ಐ. ಪಟೇಲ್ ಅವರಿಗೆ ತಾಕೀತು ಮಾಡಿದರು.
ಸಭೆಯಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಶಾಸಕರಾದ ಎಂ.ವೈ ಪಾಟೀಲ್, ರಾಜಕುಮಾರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾಧಿಕಾರಿ ಶರತ್ ಬಿ. ಜಿ.ಪಂ ಸಿಇಓ ಡಾ.ರಾಜಾ ಪಿ ಸೇರಿದಂತೆ ಮುಂತಾದವರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.