Dr. Umesh Jadhav; ಮಾರ್ಚ್ 9ಕ್ಕೆ ಕಲಬುರಗಿ – ಬೆಂಗಳೂರು ನಡುವೆ ನೂತನ ರೈಲು ಶುಭಾರಂಭ


Team Udayavani, Mar 4, 2024, 6:12 PM IST

Dr. Umesh Jadhav; A new train between Kalaburagi and Bangalore will start on March 9

ಕಲಬುರಗಿ: ಬೆಂಗಳೂರು – ಕಲಬುರಗಿ ನಡುವೆ ಪ್ರತ್ಯೇಕ ರೈಲು ಬೇಕೆಂಬ ದಶಕಗಳ ಬೇಡಿಕೆಯು ಕೊನೆಗೂ ಈಡೇರಿದಂತಾಗಿದೆ. ಇದೇ ಮಾರ್ಚ್ 9ರಂದು ಕಲಬುರಗಿಯಿಂದ ನೂತನ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಸಂಸದರಾದ ಡಾ. ಉಮೇಶ್ ಜಿ ಜಾಧವ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇಂದು (ಮಾರ್ಚ್  4ರಂದು) ರೈಲು ಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು ಮಾರ್ಚ್ 9ರಂದು ಶನಿವಾರ ಸಾಯಂಕಾಲ 5 ಗಂಟೆಗೆ ಕಲಬುರಗಿ- ಬೆಂಗಳೂರು ನೂತನ ರೈಲು ಸಂಚಾರ ಶುಭಾರಂಭಗೊಳ್ಳಲಿದೆ ಎಂದು ಜಾಧವ್ ತಿಳಿಸಿದ್ದಾರೆ.

ವಾರದಲ್ಲಿ ಒಂದು ದಿನ ಮಾತ್ರ ಸಂಚಾರಕ್ಕೆ ರೈಲು ಇಲಾಖೆ ಮೊದಲು ಅನುಮತಿ ನೀಡಿದ್ದು, ರೈಲ್ವೆ ಸಚಿವರ ಜೊತೆ ಮಾತುಕತೆಯ ನಂತರ ಈ ನಿರ್ಧಾರವನ್ನು ಬದಲಿಸಿ ಸದ್ಯ ವಾರಕ್ಕೆ ಮೂರು ದಿನ ಸಂಚರಿಸುವಂತೆ ರೈಲ್ವೆ ಸಚಿವರು ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿರುವುದಾಗಿ ಜಾಧವ್ ಹೇಳಿದರು.

ಕಳೆದ ಹಲವಾರು ದಶಕಗಳಿಂದ ಈ ಬೇಡಿಕೆ ಜೀವಂತವಾಗಿದ್ದು ರೈಲ್ವೆ ಇಲಾಖೆಯ ಅಧಿಕಾರಿಗಳ ಜೊತೆಗೆ ನಿರಂತರ ಮಾತುಕತೆ ಮತ್ತು ಒತ್ತಡ ಹಾಕಿದ ಪರಿಣಾಮವಾಗಿ ಕಲಬುರಗಿ ಜನತೆಯ ಸುದೀರ್ಘ ಕಾಲದ ಬೇಡಿಕೆ ಈಡೇರಿದೆ. ಇದೇ ಮೊಟ್ಟ ಮೊದಲ ಬಾರಿಗೆ ಕಲಬುರಗಿಯಿಂದ ಬೆಂಗಳೂರಿಗೆ ನೇರವಾಗಿ ರೈಲು ಸಂಚಾರ ಪ್ರಾರಂಭಗೊಳ್ಳುತ್ತಿರುವುದು ಇತಿಹಾಸ ಮತ್ತು ಈ ಭಾಗದ ಅಭಿವೃದ್ಧಿಯಲ್ಲಿ ಒಂದು ಮೈಲಿಗಲ್ಲು ಎಂದು ವಿವರಣೆ ನೀಡಿದ್ದಾರೆ.

ಈ ರೈಲು ಗಾಡಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನಿಸಿಕೊಂಡು ರೈಲ್ವೆ ಇಲಾಖೆಯು ಏಪ್ರಿಲ್ 5ರಿಂದ ವಾರಕ್ಕೆ ಮೂರು ದಿನ ಸಂಚಾರ ನಡೆಸಲು ಒಪ್ಪಿಕೊಂಡಿದೆ. ಈ ಭಾಗದ ಪ್ರಯಾಣಿಕರು ಈ ರೈಲುಗಾಡಿಯಲ್ಲಿ ಸಂಚರಿಸಿ ನಿತ್ಯ ಸಂಚಾರ ನಡೆಸುವಂತಾಗಲು ಸಹಕರಿಸಬೇಕು ಎಂದು ಜಾಧವ್ ಮನವಿ ಮಾಡಿದರು.

ಕಲಬುರಗಿ –  ಬೈಯ್ಯಪ್ಪನಹಳ್ಳಿ ಮಧ್ಯೆ ಓಡಾಟ: ನೂತನ ಕಲಬುರ್ಗಿ – ಬೆಂಗಳೂರು ರೈಲು ಗಾಡಿಯು ಕಲಬುರ್ಗಿಯಿಂದ ಸಾಯಂಕಾಲ 5 ಗಂಟೆಗೆ ಹೊರಟು ಮರುದಿನ ಮುಂಜಾನೆ 4:15 ಗಂಟೆಗೆ ಬೆಂಗಳೂರು ಸಮೀಪದ ಬೈಯ್ಯಪ್ಪನಹಳ್ಳಿ ಅತ್ಯಾಧುನಿಕ ಮತ್ತು ಸುಸಜ್ಜಿತವಾಗಿ ನಿರ್ಮಾಣಗೊಂದಿರುವ ಸರ್.ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣಕ್ಕೆ ತಲುಪಲಿದೆ.

ಮಾರ್ಚ್ 9ರಂದು ಸಾಯಂಕಾಲ 5 ಗಂಟೆಗೆ ಕಲಬುರ್ಗಿಯಲ್ಲಿ ರೈಲು ಸಂಚಾರದ ಉದ್ಘಾಟನೆಯಾಗಲಿದ್ದು ಕಲಬುರಗಿ ವಿಭಾಗದ ಜನರು ಈ ಶುಭಾರಂಭ ಕಾರ್ಯಕ್ರಮವನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಜಾಧವ್ ಕರೆ ನೀಡಿದ್ದಾರೆ.

ವಚನ ಪಾಲನೆ -: ಸುಧೀರ್ಘ ಪ್ರಯತ್ನದ ಫಲವಾಗಿ ಕಲಬುರಗಿ ಲೋಕಸಭಾ ಕ್ಷೇತ್ರದ ಜನತೆಯ ದಶಕಗಳ ಕನಸು ಸಾಕಾರಗೊಳ್ಳುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಪ್ರಾಮಾಣಿಕವಾಗಿ ಒಂದೊಂದಾಗಿ ಈಡೇರಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಕ್ಷೇತ್ರದ ಜನರಿಗೆ ಕೊಟ್ಟ ಮಾತು ಉಳಿಸಿ ವಿಶ್ವಾಸವನ್ನು ಗಳಿಸಿರುವುದಕ್ಕೆ ಸಂತಸವಾಗುತ್ತಿದೆ. ಈ ಭಾಗದ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ  ಪ್ರಧಾನಿ  ನರೇಂದ್ರ ಮೋದಿ ಮತ್ತು ರೈಲ್ವೆ ಖಾತೆಯ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಕ್ಷೇತ್ರದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಸಂಸದ ಜಾಧವ್ ಹೇಳಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.