![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 8, 2022, 2:51 PM IST
ವಾಡಿ: ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಸಚಿವ ಉಮೇಶ ಕತ್ತಿ ಅಗಲಿಕೆಗೆ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸ್ಥಳೀಯ ಭಾಜಪ ಮುಖಂಡರು, ಉಮೇಶ ಕತ್ತಿ ಅವರ ರಾಜಕೀಯ ಜೀವನವನ್ನು ಮೆಲುಕು ಹಾಕಿದರು.
ಈ ವೇಳೆ ಮಾತನಾಡಿದ ಬಿಜೆಪಿ ನಗರ ಶಕ್ತಿಕೇಂದ್ರದ ಅಧ್ಯಕ್ಷ ಶಿವರಾಮ ಪವಾರ, ಜನಪರ ರಾಜಕಾರಣಿಯಾಗಿದ್ದ ಸಚಿವ ಉಮೇಶ ಕತ್ತಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಶಕ್ತಿಯಾಗಿದ್ದರು. ಸತತ ಎಂಟು ಬಾರಿ ವಿಧಾಸಭೆಗೆ ಆಯ್ಕೆಯಾಗುವ ಮೂಲಕ ತಾವೊಬ್ಬ ಜನಪರ ಚಿಂತಕ ಎಂಬುದು ಸಾಬೀತು ಪಡಿಸಿದ್ದರು. ರಾಜ್ಯ ಸರ್ಕಾರದಲ್ಲಿ ಹಲವು ಖಾತೆಗಳನ್ನು ನಿಭಾಯಿಸುವ ಮೂಲಕ ಜನರ ಮನೆಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಿ ಜನಮನ್ನಣೆ ಗಳಿಸಿದ್ದರು. ರಾಜಕೀಯವಾಗಿ ಎತ್ತರಕ್ಕೆ ಬೆಳೆದಿದ್ದ ಕತ್ತಿಯವರಿಗೆ ಪಕ್ಷ ಗೌರವದಿಂದ ಕಂಡಿತ್ತು. ವಿಧಿ ಯಾಟ ನಮ್ಮನ್ನೆಲ್ಲ ಅವರಿಂದ ಅಗಲಿಸಿತು ಎಂದರು.
ಬಿಜೆಪಿ ತಾಲೂಕು ಉಪಾಧ್ಯಕ್ಷರಾದ ಗಿರಿಮಲ್ಲಪ್ಪ ಕಟ್ಟಿಮನಿ, ವೀರಣ್ಣ ಯಾರಿ, ಮುಖಂಡರಾದ ವಿಠ್ಠಲ ನಾಯಕ, ಅರ್ಜುನ ಕಾಳೇಕರ, ರವಿ ನಾಯಕ, ಹರಿ ಗಲಾಂಡೆ, ಅಂಬಾದಾಸ ಜಾಧವ, ದೌಲತರಾವ್ ಚಿತ್ತಾಪುರಕರ, ಸತೀಶ ಸಾವಳಗಿ, ಶಿವಶಂಕರ ಕಾಶೆಟ್ಟಿ, ರಾಜು ಕೋಲಿ, ಅರ್ಜುನ ದಹಿಹಂಡೆ, ಅಶೋಕ ತೇಲಕರ್, ಗಣಪತರಾವ್ ಸುತ್ರಾವೆ, ಹೀರಾ ನಾಯಕ, ಮಲ್ಲಿಕಾರ್ಜುನ ರೆಡ್ಡಿ ಪಾಲ್ಗೊಂಡಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.