![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 27, 2022, 11:42 AM IST
ಕಲಬುರಗಿ: ರೌಡಿಶೀಟರ್ಗಳು ಮತ್ತು ಈಗ ತಾನೆ ತಲೆ ಎತ್ತಿ ರೌಡಿಗಳು ಎನ್ನಿಸಿಕೊಳ್ಳಲು ಹವಣಿಸುತ್ತಿರುವ ಮರಿ ರೌಡಿಗಳು ಸಮಾಜದಲ್ಲಿ ಅಪರಾಧಿಕ ಚಟುವಟಿಕೆ ನಡೆಸಲು ಮುಂದಾದರೆ, ಬಾಲ ಬಿಚ್ಚಿದರೆ ಹುಷಾರ್, ಬಾಲ ಕಟ್ ಮಾಡಬೇಕಾಗುತ್ತದೆ ಎಂದು ಉತ್ತರ ವಿಭಾಗದ ಎಸಿಪಿ ದೀಪನ್ ಎಂ.ಎನ್ ಎಚ್ಚರಿಕೆ ನೀಡಿದ್ದಾರೆ.
ನಗರದ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ಗುರುವಾರ ರೌಡಿಗಳ ಪರೇಡ್ ನಡೆಸಿದ ಅವರು, ಬಹುತೇಕ ರೌಡಿಗಳ ದಿನಚರಿ ಪ್ರಶ್ನಿಸಿದರು. ಅಲ್ಲದೇ, ಅಕ್ರಾಳ, ವಿಕ್ರಾಳ ಕಾಣಿಸುತ್ತಿದ್ದ ಎಲ್ಲರಿಗೂ ನೆಟ್ಟಗೆ ಶೇವ್ ಮಾಡಿಕೊಂಡು ಜನಸಾಮಾನ್ಯರಂತೆ ಇರಿ ಎಂದು ಎಚ್ಚರಿಸಿದರು.
ಉತ್ತರ ನಗರ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಂತೆ ಮತ್ತು ಬಡ್ಡಿ ವ್ಯವಹಾರ, ಲ್ಯಾಂಡ್ ಮಾಫಿಯಾ, ಹಪ್ತಾ ವಸೂಲಿ ಮಾಡೋದನ್ನು ನಿಲ್ಲಿಸಿ. ಇಲ್ಲದಿದ್ದರೆ ನಮ್ಮ ಕೈಗೆ ಸಿಕ್ಕಿ ಬಿದ್ದರೆ ಗಡಿಪಾರು ನಿಶ್ಚಿತ ಎಂದು ಎಚ್ಚರಿಸಿದರು.
ಪರೇಡ್ನಲ್ಲಿ ಠಾಣೆ ವ್ಯಾಪ್ತಿಯ 175 ಜನ ರೌಡಿಶೀಟರ್ಗಳ ಪೈಕಿ 89 ಜನ ಭಾಗವಹಿಸಿದ್ದರು. ಪರೇಡ್ ಗೆ ಗೈರು ಹಾಜರಾದ ರೌಡಿಶೀಟರ್ ಗಳ ಮೇಲೆ ನಿಗಾ ಇರಿಸಲಾಗಿದ್ದು, ಅವರು ಪ್ರತಿ ತಿಂಗಳು ರೌಡಿ ಪರೇಡ್ಗೆ ಹಾಜರಾಗಬೇಕು ಎಂದು ಸೂಚಿಸಿದರು. ಇತರೆ ಅಧಿಕಾರಿಗಳು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.