ಕೈಗೆಟುಕದ ಅನ್ನಭಾಗ್ಯ: ಠಾಣೆಗೆ ಬಂದ ಬಡವರು
Team Udayavani, Feb 22, 2017, 2:41 PM IST
ವಾಡಿ: ನ್ಯಾಯಬೆಲೆ ಅಂಗಡಿಯವರು ಕಳೆದ ಎರಡು ತಿಂಗಳಿಂದ ಆಹಾರ ಧಾನ್ಯ ವಿತರಣೆ ಮಾಡಿಲ್ಲ ಎಂದು ಆರೋಪಿಸಿ, ಬಡ ಕುಟುಂಬಗಳು ಪೊಲೀಸ್ ಠಾಣೆಗೆ ಆಗಮಿಸಿ ಮೌಖೀಕವಾಗಿ ದೂರು ನೀಡಿದರು. ಪಟ್ಟಣದ ವಿವಿಧ ಬಡಾವಣೆಯಲ್ಲಿರುವ ನ್ಯಾಯಬೆಲೆ ಅಂಗಡಿಗಳ ಪಡಿತರ ವಿತರಕರು, ಸರಕಾರದ ಅನ್ನಭಾಗ್ಯ ಯೋಜನೆಗೆ ಕನ್ನ ಹಾಕುತ್ತಿದ್ದು, ಅನ್ನವಿಲ್ಲದೆ ನಾವು ಗೋಳಾಡುವಂತಾಗಿದೆ.
ಜನವರಿ ತಿಂಗಳಲ್ಲಿ ಪಡಿತರ ವಿತರಿಸುವುದಾಗಿ ಸುಳ್ಳು ಹೇಳಿ ಕೂಪನ್ ಪಡೆದುಕೊಂಡಿದ್ದಾರೆ. ಪಡಿತರ ವಿತರಕರ ಸಂಘ ಕಟ್ಟಿಕೊಂಡು ಸಾಮೂಹಿಕವಾಗಿ ಅನ್ಯಾಯ ಎಸಗುತ್ತಿದ್ದಾರೆ ಎಂದು ದೂರಿದರು. ಕಳೆದ ತಿಂಗಳು ಯಾರಿಗೂ ಪಡಿತರ ಧಾನ್ಯ ವಿತರಿಸಿಲ್ಲ. ಈ ಕುರಿತು ಪ್ರಶ್ನಿಸಿದರೆ ಮೇಲಿನಿಂದಲೇ ಆಹಾರ ಪೂರೈಕೆಯಾಗಿಲ್ಲ ಎನ್ನುತ್ತಾರೆ.
ಅಧಿಕಾರಿಗಳನ್ನು ವಿಚಾರಿಸಿದರೆ, ಜನವರಿ ತಿಂಗಳ ಆಹಾರ ಧಾನ್ಯ ವಿತರಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಒಬ್ಬರು ಇನ್ನೊಬ್ಬರತ್ತ ಬೊಟ್ಟು ಮಾಡಿ ತೋರಿಸುವ ಮೂಲಕ ನಮ್ಮ ಅನ್ನವನ್ನು ಕಸಿದುಕೊಂಡಿದ್ದಾರೆ ಎಂದು ಪಡಿತರ ವಂಚಿತರು ಆರೋಪಿಸಿದರು. ಫೆಬ್ರವರಿ ತಿಂಗಳು ಆರಂಭಗೊಂಡು 20 ದಿನಗಳಾದರೂ ಪಡಿತರ ವಿತರಣೆಗೆ ಮುಂದಾಗಿಲ್ಲ.
ಜನವರಿ ಧಾನ್ಯ ಕೇಳಬೇಡಿ. ಫೆಬ್ರವರಿ ತಿಂಗಳ ದಾನ್ಯ ಮಾತ್ರ ವಿತರಿಸುತ್ತೇವೆ ಎನ್ನುತ್ತಿದ್ದಾರೆ. ಸೀಮೆ ಎಣ್ಣೆಯನ್ನು ಸ್ಥಗಿತಗೊಳಿಸಿದ್ದಾರೆ. ನಾವು ಬದುಕುವುದಾದರೂ ಹೇಗೆ ಎಂದು ಪೊಲೀಸ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಎರಡು ತಿಂಗಳ ಪಡಿತರ ಸಿಗುವಂತೆ ಕ್ರಮಕೈಗೊಳ್ಳಿ ಎಂದು ಮನವಿ ಮಾಡಿದರು.
ಪಡಿತರ ಸಿಕ್ಕಿಲ್ಲ ಎಂದಾದರೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿರಿ. ಠಾಣೆಗೆ ಯಾಕೆ ಬಂದ್ರಿ ಹೋಗ್ರಿ ಎಂದು ಪೊಲೀಸರು ತಳ್ಳಿಹಾಕಿದ್ದಕ್ಕೆ ಮಹಿಳೆಯರು ಅತೃಪ್ತಿ ವ್ಯಕ್ತಪಡಿಸುತ್ತ ನಿರಾಸೆಯಿಂದ ಮನೆಗೆ ಮರಳಿದರು. ಆಮ್ ಆದಮಿ ಪಕ್ಷದ ಮಹಮದ್ ರμàಕ್, ರಾಜು ಕಧಂ, ಅಬ್ದುಲ ಸಲೀಮ, ಖದೀರ್ ಸೇರಿದಂತೆ ಅನೇಕ ಮಹಿಳೆಯರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.