ಪ್ರಿಯಾಂಕ್ ಖರ್ಗೆ ಚಿತ್ತಾಪುರ ಶಾಸಕರಾ ಅಥವಾ ಸದಾಶಿವ ನಗರ ಶಾಸಕರಾ?: ಅರವಿಂದ ಚವ್ಹಾಣ ಪ್ರಶ್ನೆ
Team Udayavani, Feb 14, 2023, 5:37 PM IST
ಕಲಬುರಗಿ: ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆಯಲ್ಲ. ಬದಲಾಗಿ ಹಲವರು ಶಾಸಕ ಸ್ಥಾನ ನಿಭಾಯಿಸುತ್ತಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ಅರವಿಂದ ಚವ್ಹಾಣ ಆರೋಪಿಸಿದರು.
ಸರ್ಕಾರ ಹಾಗೂ ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿ, ಶಿಷ್ಟಾಚಾರ ಬದಿಗೊತ್ತಿ ಚಿತ್ತಾಪುರ ಕ್ಚೇತ್ರದಲ್ಲಿ ನಡೆಯುವ ಸರ್ಕಾರಿ ಯೋಜನೆಗಳ ಶಂಕು ಸ್ಥಾಪನೆ, ಉದ್ಘಾಟನೆಗಳ ಅಧಿಕಾರವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಪಂ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಿಗೆ ನೀಡಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಸರ್ಕಾರದ ನಿಯಮಾವಳಿ ಪ್ರಕಾರ ಆಯಾ ಕ್ಷೇತ್ರದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕರೇ ವಹಿಸಬೇಕು. ಯಾವುದೇ ಸರ್ಕಾರಿ ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಖಾಸಗಿ ವ್ಯಕ್ತಿಗಳನ್ನು ಬಿಡಿ ಸರ್ಕಾರಿ ಅಧಿಕಾರಿಗಳೇ ಮಾಡುವಂತಿಲ್ಲ ಎಂದಿದ್ದರೂ ಶಾಸಕರು ಬಹುತೇಕ ಕಾರ್ಯಕ್ರಮಗಳಿಗೆ ಗೈರು ಹಾಜರಾಗಿರುತ್ತಾರೆ ಎಂದು ಹಲವು ಉದಾಹರಣೆಗಳ ಸಮೇತ ವಿವರಣೆ ನೀಡಿದರು.
ಶಾಸಕರು ಕ್ಷೇತ್ರವನ್ನು ಹಾಗೂ ಮತ ಹಾಕಿ ಗೆಲ್ಲಿಸಿದ ಜನರನ್ನು ಮರೆತು ಸದಾ ಬೆಂಗಳೂರಿನಲ್ಲೇ ಕುಳಿತು ಕಾಲ ಕಳೆಯುತ್ತಿದ್ದಾರೆ. ನಿಮಗೆ ಮತ ಹಾಕಿ ಶಾಸಕರನ್ನಾಗಿ ಮಾಡಿದ್ದು ಚಿತ್ತಾಪುರದ ಜನರೋ? ಸದಾಶಿವ ನಗರದ ಜನರೋ? ಎನ್ನುವಂತಾಗಿದೆ ಎಂದು ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದ ಪ್ರಭಾಕರ ಚಿಣಿ ಫೆ.15ರಂದು ಬಿಜೆಪಿ ಸೇರ್ಪಡೆ
ಮಾತೆತ್ತಿದ್ದರೆ ನಿಯಮ ಬಗ್ಗೆ ಮಾತನಾಡುವ ಶಾಸಕರು ಸರ್ಕಾರಿ ಕಾಮಗಾರಿಗಳ ಶಂಕು ಸ್ಥಾಪನೆ, ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯ ಅಧಿಕಾರವನ್ನು ಕಾಂಗ್ರೆಸ್ ಮುಖಂಡರಿಗೆ ಕೊಟ್ಟಿದ್ಯಾರು? ಪ್ರಜಾಪ್ರಭುತ್ವ, ಸಂವಿಧಾನದ ಕುರಿತು ಉದ್ದುದ್ದ ಭಾಷಣ ಬಿಗಿಯುವ ಶಾಸಕರಿಗೆ ಇದು ಶಿಷ್ಟಚಾರದ ಉಲ್ಲಂಘನೆ ಎಂಬುದು ಗೊತ್ತಿಲ್ಲವೇ ಎಂದು ಕುಟುಕಿದರು.
ಕೆಲವು ದಿನಗಳ ಹಿಂದೆ ಚಿತ್ತಾಪುರದಲ್ಲಿ ಯಾವೊಬ್ಬ ಬಿಜೆಪಿ ಮುಖಂಡನನ್ನೂ ಓಡಾಡಲು ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಅವರ ಈ ಹೇಳಿಕೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ವಿರುದ್ಧ ಅಲ್ಲವೇ? ಇವರೇನು ರಿಪಬ್ಲಿಕ್ ಆಪ್ ಚಿತ್ತಾಪುರ ಮಾಡಲು ಹೊರಟಿದ್ದಾರೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯುವ ಮುಖಂಡರಾದ ಭೀಮಣ್ಣಾ ಸೀಬಾ, ಅವಿನಾಶ ಅರಳಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.