ಸಂವಿಧಾನದಿಂದಲೇ ಅಧಿಕಾರ ಲಭ್ಯ
Team Udayavani, Apr 15, 2017, 3:55 PM IST
ಚಿಂಚೋಳಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|ಬಿ.ಆರ್.ಅಂಬೇಡ್ಕರ್ ಯಾವುದೇ ಜಾತಿಗೆ ಸೀಮಿತವಾದ ನಾಯಕರಲ್ಲ. ಅವರು ದೇಶದ ಎಲ್ಲ ವರ್ಗದ ಮಹಾನ್ ನಾಯಕರು. ಅವರು ಬರೆದ ಸಂವಿಧಾನದಲ್ಲಿ ನೀಡಿರುವ ಮೀಸಲಾತಿ ಮತ್ತು ಶಿಕ್ಷಣದಿಂದಲೇ ನಮಗೆ ಅಧಿಧಿಕಾರದ ಶಕ್ತಿ ಸಿಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ|ಉಮೇಶ ಜಾಧವ್ ಅಭಿಪ್ರಾಯ ವ್ಯಕ್ತಪಡಿಸಿದರು.
ತಹಶೀಲ್ದಾರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಡಾ| ಬಾಬಾ ಸಾಹೇಬ ಅಂಬೇಡ್ಕರ್ ಅವರ 126ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಇರುವ ಪರಿಶಿಷ್ಟ ಜಾತಿ/ಪಂಗಡ ಜನರ ಅಭಿವೃದ್ಧಿಗೋಸ್ಕರ 2013-14ನೇ ಸಾಲಿನಲ್ಲಿ ಬೆಳಗಾವಿ ಅಧಿಧಿವೇಶನದಲ್ಲಿ ವಿಶೇಷ ಕಾನೂನು ಜಾರಿಗೊಳಿಸಲಾಯಿತು.
ಕಳೆದ ನಾಲ್ಕು ವರ್ಷಗಳಲ್ಲಿ ದಲಿತ ಕಲ್ಯಾಣಕ್ಕಾಗಿ 84 ಸಾವಿರ ಕೋಟಿ ರೂ.ಗಳನ್ನು ಮುಖ್ಯಮಂತ್ರಿ ನಿಗದಿಪಡಿಸಿದ್ದಾರೆ ಎಂದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಪರಿಶಿಷ್ಟ ಜಾತಿ ಮತ್ತು ಪಂಗಡ ಜನರ ಅಭಿವೃದ್ಧಿಗೆ 50 ಸಾವಿರ ಕೋಟಿ ರೂ.ಖರ್ಚು ಮಾಡಿದ್ದಾರೆ ಎಂದು ಹೇಳಿದರು.
ಅಂಬೇಡ್ಕರ್ ಜಯಂತಿ ಆಚರಣೆ ನಿಮಿತ್ತ ಕುಂಚಾವರಂ ಹೋಬಳಿಯಲ್ಲಿ ಅಂಬೇಡ್ಕರ್ ಆಂಗ್ಲ ಮಾಧ್ಯಮ ಶಾಲೆ ಮಂಜೂರಿಗೊಂಡಿದೆ ಎಂದು ಹೇಳಿದರು. ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮತಿ ಅಧ್ಯಕ್ಷ ಸಂಜೀವನ ರಮೇಶ ಯಾಕಾಪುರ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಗೆ ಮತದಾನ ಹಕ್ಕು ಮೀಸಲಾತಿ ನೀಡಿದ್ದು ಅಂಬೇಡ್ಕರ್ ಎಂದು ಹೇಳಿದರು.
ಕಮಲಾಪುರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಉಪನ್ಯಾಸಕ ಯಲ್ಲಪ್ಪ ತಳವಾರ ಉಪನ್ಯಾಸ ನೀಡಿದರು. ಗೌತಮ ಬೊಮ್ಮನಳ್ಳಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಇಂದುಮತಿ ಮನೋಹರ ದೇಗಲಮಡಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ,ಡಿವೈಎಸ್ಪಿ ಯು. ಶರಣಪ್ಪ, ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ್, ಜಿಪಂ ಸದಸ್ಯ ಗೌತಮ ಪಾಟೀಲ,
ದಲಿತ ಮುಖಂಡರಾದ ಶಿವಕುಮಾರ ಕೊಳ್ಳುರ, ಸುಶೀಲಮ್ಮ ಕೊರವಿ, ಆರ್. ಗಣಪತರಾವ್, ಜಗನ್ನಾಥ ಕಟ್ಟಿ, ಶರಣಪ್ಪ ತಳವಾರ, ಸಾರಿಗೆ ಅಧಿಧಿಕಾರಿ ಮಂಜುನಾಥ ಕೊರವಿ, ಬಿಇಒ ಜರ್ನಾಧನರೆಡ್ಡಿ ಮಾಲಿಪಾಟೀಲ, ವೆಂಕಟೇಶ ದುಗ್ಗನ್ ಇದ್ದರು. ತಹಶೀಲ್ದಾರ ಪ್ರಕಾಶ ಕುದುರೆ ಸ್ವಾಗತಿಸಿದರು. ಅಶೋಕ ಹೂವಿನಬಾವಿ ನಿರೂಪಿಸಿದರು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹ- ನಿರ್ದೇಶಕ ಎಂ.ಆರ್.ಪ್ರಭುಲಿಂಗ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.