ಗುಲಬರ್ಗಾ ವಿವಿಗೆ ಬಸವಣ್ಣ ಹೆಸರು: ಸಿದ್ದು


Team Udayavani, Jul 12, 2017, 12:04 PM IST

12-GUB-1.jpg

ಕಲಬುರಗಿ: ಬಹುದಿನಗಳ ಬೇಡಿಕೆಯಂತೆ ವಿಜಯಪುರದ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಶರಣೆ ಅಕ್ಕಮಹಾದೇವಿ ಹೆಸರು ಇಡಲಾಗಿದ್ದು, ಅದೇ ರೀತಿಯಾಗಿ ಗುಲಬರ್ಗಾ ವಿವಿಗೆ ಬಸವಣ್ಣ,  ಕೇಂದ್ರೀಯ ವಿಶ್ವ ವಿದ್ಯಾಲಯಕ್ಕೆ ಅಂಬೇಡ್ಕರ್‌ ಹೆಸರುಗಳನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಮಂಗಳವಾರ ಇಲ್ಲಿನ ಸಾರ್ವಜನಿಕ ಉದ್ಯಾನವನದ ಆವರಣದಲ್ಲಿರುವ ವೀರಶೈವ ಕಲ್ಯಾಣ ಮಂಟಪದ ಮುಂಭಾಗದಲ್ಲಿ
ಆಯೋಜಿಸಿದ್ದ ಕಲಬುರಗಿ ವಿಭಾಗೀಯ ಮಟ್ಟದ ಜನಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಜನರು ಬಯಸಿದಂತೆ ಸಾಮಾಜಿಕ ಚಳವಳಿಯಲ್ಲಿ ಕೈಂಕರ್ಯ ಮಾಡಿದ ದಾರ್ಶನೀಕರ ಹೆಸರುಗಳನ್ನು ನಾಡಿನ ಎಲ್ಲ ವಿವಿಗಳಿಗೆ ಹೆಸರಿಡಲು ಚಿಂತನೆ ಮಾಡಲಾಗುತ್ತಿದೆ. ಹೊಸದಾಗಿ ಆರಂಭಿಸುವ ರಾಯಚೂರು ವಿವಿಗೂ ಮಹರ್ಷಿ ವಾಲ್ಮೀಕಿ ಹೆಸರು
ಇಡಲು ಯೋಚನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇಂತಹದರಲ್ಲೂ ರಾಜಕೀಯ ಮಾಡುವ ಯಡಿಯೂರಪ್ಪನವರೇ ಮುಖ್ಯಮಂತ್ರಿ ಇದ್ದರೂ ಇದನ್ನು ಮಾಡಲು ಸಾಧ್ಯವಾಗಿಲ್ಲ ಎನ್ನುವುದನ್ನು ಕಲ್ಯಾಣ ನಾಡಿನ ಜನರು ಅರ್ಥ ಮಾಡಿಕೊಳ್ಳಬೇಕು. ಇವರಿಗೆ ಕಾಯಕಯೋಗಿ ಬಸವಣ್ಣ ಎಷ್ಟು ಮಹತ್ವದ
ವ್ಯಕ್ತಿ ಎನ್ನುವುದು ಇವರ ವಿಚಾರಗಳಿಂದಲೇ ತಿಳಿಯುತ್ತದೆ ಎಂದು ಕಟುಕಿದರು.

29 ಸ್ಥಾನ ಗೆಲ್ಲಿಸಿ: 2013ರಲ್ಲಿ ನಡೆದ ಚುನಾವಣೆಯಲ್ಲಿ ಹೈದ್ರಾಬಾದ ಕರ್ನಾಟಕದ 40 ಸ್ಥಾನಗಳಲ್ಲಿ 29 ಸ್ಥಾನಗಳನ್ನು ನೀವುಗಳು ಗೆಲ್ಲಿಸಿ ಕಳುಹಿಸಿದ್ದಿರಿ. ಅಷ್ಟು ಜನರನ್ನು ಶಾಸಕರನ್ನಾಗಿ ಮಾಡಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಮಾಡಿದ್ದಿರಿ. ಈ ಬಾರಿಯೂ ಅಷ್ಟೇ ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಪುನಃ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ಮೋಡಿ.. ಮೋದಿಗೆ ಅಂಜುವ ಅಗತ್ಯವಿಲ್ಲ: 
ಈ ಭಾಗದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗೆ ದೊಡ್ಡ ಶಕ್ತಿ ಇಲ್ಲ. ಆದ್ದರಿಂದ ನಮ್ಮ ಕಾರ್ಯಕರ್ತರು ಯಾವ ಮೋಡಿ, ಮೋದಿಗಳಿಗೆ ಅಂಜುವ ಅಗತ್ಯವಿಲ್ಲ. ಅವರದ್ದೇನು ನಡೆಯೋದಿಲ್ಲ. ಕರ್ನಾಟಕ ಪ್ರಜ್ಞಾವಂತ ನೆಲ. ನಮಗೆ ಆತ್ಮವಿಶ್ವಾಸವಿದೆ. ನಾವು ನುಡಿದಂತೆ
ನಡೆದಿದ್ದೇವೆ. ಚುನಾವಣೆ ಪ್ರಣಾಳಿಕೆಯಲ್ಲಿನ 165 ಭರವಸೆಗಳಲ್ಲಿ 155 ಈಡೇರಿಸಿದ್ದೇವೆ. ಜನರಿಗೆ ಉತ್ತಮ ಆಡಳಿತ ಹಾಗೂ ಸೌಕರ್ಯಗಳನ್ನು ನೀಡಿದ್ದೇವೆ. ಅದರ ಕೂಲಿಯನ್ನು ಜನರಿಂದ ಕೇಳಲಿಕ್ಕೆ ನಮಗೆ ಯಾವುದೇ ಅಂಜಿಕೆಯಾಗಲಿ, ಅಳುಕಾಗಲಿ
ಇಲ್ಲ. ನೇರವಾಗಿ ಮತದಾರರ ಮನೆಗಳಿಗೆ ಹೋಗಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಮತ್ತು ವಿಕಾಸವನ್ನು ತಿಳಿ ಹೇಳಿ ಮತ ಕೇಳಿ ಎಂದರು.

ಇವತ್ತು ಯಾರು ಬಸವಣ್ಣನ ಹೆಸರು ಹೇಳುತ್ತಾರೋ, ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುತ್ತಾರೋ, ಯಾರಿಗೆ ಜಾತ್ಯತೀತ
ಮನೋಭಾವ ಇದೆಯೋ ಅವರ್ಯಾರು ಬಿಜೆಪಿಯೊಂದಿಗೆ ಹೋಗುವುದಿಲ್ಲ. ಯಡಿಯೂರಪ್ಪ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಕೂಡಲೇ ಜಗತ್ತು ಬದಲಾಗುವುದಿಲ್ಲ. ಇವರೆಲ್ಲಾ ಚುನಾವಣೆಯ ಸಂದರ್ಭದಲ್ಲಿ ಜಾತಿಯತೆಯ ವಿಷ ಬೀಜಗಳನ್ನು ಬಿತ್ತಿ ಜನರನ್ನು ಮರಳು ಮಾಡಿ ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತಾರೆ. ಇವರಿಗೇನು ನೈತಿಕತೆ ಇದೆ. ಈ ಹಿಂದೆ ಅಧಿಕಾರಕ್ಕೆ 
ಬಂದಿರುವ ಮೋದಿ ಏನು ಮಾಡಿದ್ದಾರೆ. ಚುನಾವಣೆಯಲ್ಲಿ ನೀಡಿದರೆ ಭರವಸೆಗಳೆಲ್ಲೂ ಸುಳ್ಳಾಗಿವೆಯಲ್ಲ.. ಯಾವ ಮುಖ ಇಟ್ಟುಕೊಂಡು ಬಿಜೆಪಿಯವರು ಜನರ ಬಳಿಯಲ್ಲಿ ಹೋಗಿ ಮತ ಕೇಳುತ್ತಾರೋ ಎಂದು ಛೇಡಿಸಿದರು.

ನಾಟಕವಾಡಿದ್ರೆ ಜನ ನಂಬತಾರೇನ್ರಿ?:
ಸಂವಿಧಾನದ 73-74ಕೆ ವಿಧಿಯನ್ನು ತಿದ್ದುಪಡಿ ಮಾಡಿ ಮಹಿಳೆಯರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಮೀಸಲಾತಿ ದೊರಕಿಸಿಕೊಟ್ಟಿದ್ದು ಕಾಂಗ್ರೆಸ್‌ ಪಕ್ಷವೇ ಹೊರತು 1950ರಲ್ಲಿ ಕಣ್ಣು ತೆರೆದ ಜನಸಂಘವಲ್ಲ. ಅದಾದ ಬಳಿಕ ರೂಪಾಂತರ
ಹೊಂದಿದ ಬಿಜೆಪಿಯಲ್ಲ. ಮಂಡಲ ವರದಿ ಜಾರಿ ಮಾಡುವ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ರಾಮಾ ಜೋಯಿಸ್‌ ನ್ಯಾಯಾಲಯದಲ್ಲಿ ಪ್ರಕರಣ ಹೂಡಿ, ಮೀಸಲಾತಿ ಸಂವಿಧಾನ ವಿರೋಧಿಯಾಗಿದೆ ಎಂದು ಖುದ್ದು ನ್ಯಾಯಾಲಯದಲ್ಲಿ ಅವರೇ ವಾದಿಸಿದ್ದರು. ಆವತ್ತು ಒಂದೂ ಮಾತನ್ನಾಡದ ಯಡಿಯೂರಪ್ಪ, ಈಶ್ವರಪ್ಪ, ಅನಂತಕುಮಾರ, ಸದಾನಂದಗೌಡ, ಜಗದೀಶ
ಶೆಟ್ಟರ್‌ ಈಗ ದಲಿತರ ಪರ ನಾಟಕವಾಡಿದರೆ ಜನರು ನಂಬುತ್ತಾರೇನ್ರಿ ಎಂದು ಪ್ರಶ್ನಿಸಿದರು. 

ದಲಿತರಿಗಾಗಿ ಎಸ್‌ಇಪಿ/ಜೆಎಸ್‌ಪಿ ಯೋಜನೆ ಅಡಿಯಲ್ಲಿ 5 ವರ್ಷದಲ್ಲಿ ಬಿಜೆಪಿ 21ಸಾವಿರ ಕೋಟಿ ರೂ. ವ್ಯಯ ಮಾಡಿದರೆ, ಕಾಂಗ್ರೆಸ್‌ ಸರಕಾರ ನಾಲ್ಕು ವರ್ಷದಲ್ಲಿ 85ಸಾವಿರ ಕೋಟಿ ರೂ. ವ್ಯಯಿಸಿದೆ. ಎಸ್ಸಿ,ಎಸ್ಟಿ ನಿರುದ್ಯೋಗ ಗುತ್ತಿಗೆದಾರರಿಗೆ ಶೇ.ವಾರುಗುತ್ತಿಗೆ ಮೀಸಲಿಗೆ ಕಾನೂನು ಮಾಡಿದ್ದೇವೆ. ಕಳೆದ ನಾಲ್ಕು ವರ್ಷದಲ್ಲಿ ನೀರಾವರಿ ಯೋಜನೆಗಳಿಗಾಗಿ ನಾವು 58 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿದ್ದಾಗ 18ಸಾವಿರ ಕೋಟಿ ರೂ. ಖರ್ಚು ಮಾಡಿತ್ತು. ಸಾಲದ್ದಕ್ಕೆ
ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಮುಖ್ಯಮಂತ್ರಿಯಾಗಿದ್ದರು. ಸೈಕಲ್‌, ಸೀರೆ ಕೊಟ್ಟರೆ ರಾಜ್ಯದಲ್ಲಿ ಬಡತನ ನೀಗೀತೆ.. ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತದೇನ್ರಿ ಎಂದು ಪ್ರಶ್ನಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಕೆ.ಸಿ.ವೇಣುಗೋಪಾಲ, ಎಐಸಿಸಿ ಕಾರ್ಯದರ್ಶಿಗಳಾದ ಸತೀಶ
ಜಾರಕಿಹೊಳಿ, ಶೈಲೇಜ್‌ನಾಥ, ಕೆಪಿಸಿಸಿ ಅಧ್ಯಕ್ಷ ಹಾಗೂ ಸಚಿವ ಜಿ. ಪರಮೇಶ್ವರ, ಕಾರ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಸಚಿವ ಡಿ.ಕೆ. ಶಿವಕುಮಾರ, ಸಚಿವರಾದ ಬಸವರಾಜ ರಾಯರೆಡ್ಡಿ, ಈಶ್ವರ ಖಂಡ್ರೆ, ಶಿವರಾಜ ತಂಗಡಗಿ, ಪ್ರಿಯಾಂಕ್‌ ಖರ್ಗೆ, ಮಾಜಿ ಸಚಿವ ಬಾಬುರಾವ್‌ ಚಿಂಚನಸೂರು, ಶಾಸಕರಾದ ಅಜಯಸಿಂಗ್‌, ಉಮೇಶ ಜಾಧವ್‌, ಎನ್‌.ಎಸ್‌
.ಭೋಸರಾಜು, ಇಕ್ಬಾಲ್‌ ಅಹ್ಮದ್‌ ಸರಡಗಿ, ಅಲ್ಲಂ ವೀರಭದ್ರಪ್ಪ, ಅಲ್ಲಮಪ್ರಭು ಪಾಟೀಲ, ಮಾಲೀಕಯ್ಯ ಗುತ್ತೇದಾರ, ಬಿ.ಆರ್‌.ಪಾಟೀಲ, ರಾಜಶೇಖರ ಪಾಟೀಲ ಹುಮನಾಬಾದ, ಬಿ.ವಿ.ನಾಯಕ, ತೊಗರಿ  ಮಂಡಳಿ ಅಧ್ಯಕ್ಷ ಹಾಗೂ ಕಲಬುರಗಿ ಡಿಸಿಸಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರು, ಅಂಬಾರಾಯ ಅಷ್ಟಗಿ, ರಾಯಚೂರು, ಬೀದರ, ಯಾದಗಿರಿ, ಕೊಪ್ಪಳ, ಬಳ್ಳಾರಿ ಜಿಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳು ವಿವಿಧ ಬ್ಲಾಕ್‌, ಬೂತ್‌ ಮಟ್ಟದ ಅಧ್ಯಕ್ಷರು ಹಾಜರಿದ್ದರು. 

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿದರು. ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.