ಶಿಥಿಲಾವಸ್ಥೆಯಲ್ಲಿ ಕಟ್ಟಡ; ಮರದ ನೆರಳಲ್ಲೇ ಪಾಠ


Team Udayavani, Jun 11, 2022, 9:38 AM IST

1school

ವಾಡಿ: ಸಮೀಪದ ಸನ್ನತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿರುವ ಕಾರಣ ಬಡ ಮಕ್ಕಳ ಅಕ್ಷರ ಭವಿಷ್ಯ ಬೀದಿಗೆ ಬಿದ್ದಿದ್ದು, ಮರದ ಕೆಳಗೆ ಪಾಠ ಬೋಧನೆ ನಡೆಯುತ್ತಿದೆ.

ಬೀಳುವ ಹಂತಕ್ಕೆ ತಲುಪಿ ಸೋರುತ್ತಿರುವ ಸನ್ನತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯನ್ನು ಜನರೇ “ಉದಯವಾಣಿ’ ಗಮನಕ್ಕೆ ತಂದಿದ್ದಾರೆ.

ಅಗತ್ಯಕ್ಕಿಂತ ಹೆಚ್ಚು ತರಗತಿ ಕೋಣೆಗಳಿರುವ ಈ ಶಾಲೆಯ ವಿದ್ಯಾರ್ಥಿಗಳ ಪಾಠ ಬೋಧನೆ ಮರದ ಕೆಳಗೆ ನಡೆಯುತ್ತಿದೆ. ಹತ್ತಾರು ಹಳೆ ಕಟ್ಟಡಗಳ ನಡುವೆ ಇತ್ತೀಚೆಗೆ ಎರಡು ಹೊಸ ಕೋಣೆಗಳು ಸೇರ್ಪಡೆಯಾಗಿವೆ. ಮುರುಕು ಮಾಳಿಗೆ, ಹರಕು ಗೋಡೆಗಳ ಆಸರೆಯಲ್ಲಿ ಪಾಠ ಕೇಳಲು ಹೆದರುತ್ತಿರುವ ವಿದ್ಯಾರ್ಥಿಗಳು ಶಾಲಾ ಅಂಗಳದ ಮರದ ನೆರಳಿನಾಸರೆಗೆ ಅಕ್ಷರ ಕಲಿಕೆಗೆ ಮುಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ಒಂದನೇ ತರಗತಿಯಿಂದ ಎಂಟನೇ ತರಗತಿ ವರೆಗೆ ಶಾಲೆ ನಡೆಯುತ್ತಿದ್ದು, ಸುಮಾರು 300 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಿಕ್ಷಕರ ಕೊರತೆಯಿಲ್ಲ. ಶಾಲಾ ಕಚೇರಿ ಮತ್ತು ಬಿಸಿಯೂಟ ಕೋಣೆ ಹೊರತುಪಡಿಸಿ ಒಟ್ಟು 13 ಕೋಣೆಗಳಿವೆ. ಇವುಗಳ ಮೇಲ್ಛಾವಣಿ ಕಳಪೆಯಾಗಿದ್ದು, ಮಳೆಯಾದರೆ ನೀರುಂಡು ಸೋರುತ್ತವೆ. ಮಕ್ಕಳ ಕಲಿಕೆಗೆ ಇದು ಅಡ್ಡಿಯಾಗುತ್ತಿದೆ. ಇನ್ನು ಹೊಸ ಕೋಣೆಗಳ ದುಸ್ಥಿತಿಯೇ ಬೇರೆ. ಗುತ್ತಿಗೆದಾರ ಮೇಲ್ಛಾವಳಿಗೆ ಹಚ್ಚಿದ ಸಿಮೆಂಟ್‌ ತೇಪೆ ಕಳಚಿ ಬೀಳುತ್ತಿದೆ. ಗೋಡೆಗಳು ಬಿರುಕು ಬಿಟ್ಟಿವೆ. ತೀರಾ ಹಳೆಯದಾದ ಕೋಣೆಗಳು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದರೂ ಅವುಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಈ ಕುರಿತು ಆಸಕ್ತಿ ವಹಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಕೋರಿದ್ದಾರೆ.

ಶಾಲೆಯ ಕಟ್ಟಡ ಬಹಳ ಹಳೆಯದಾಗಿದ್ದರಿಂದ ಗೋಡೆಗಳಲ್ಲಿ ಬಿರುಕು ಕಾಣಿಸಿವೆ. ಕಾಂಕ್ರೀಟ್‌ ಮಾಳಿಗೆಯಿಂದ ನೀರು ಸೋರಿಕೆಯಾಗುತ್ತಿದೆ. ಸಿಮೆಂಟ್‌ ತುಂಡುಗಳು ಕಳಚಿ ಮಕ್ಕಳ ತಲೆಯಮೇಲೆ ಬೀಳುತ್ತಿವೆ. ಹೀಗಾಗಿ ಶಿಕ್ಷಕರು ಮರದ ಕೆಳಗೆ ತರಗತಿಗಳನ್ನು ನಡೆಸುವ ಪರಿಸ್ಥಿತಿ ಬಂದಿದೆ. ಕ್ಷೇತ್ರಕ್ಕೆ ಹರಿದುಬಂದ ಸಾವಿರಾರು ಕೋಟಿ ರೂ. ಅನುದಾನದಲ್ಲಿ ತುಸು ಹಣವಾದರೂ ಶಿಥಿಲ ಸರ್ಕಾರಿ ಶಾಲೆಗಳ ಪ್ರಗತಿಗೆ ಬಳಸಿದ್ದರೆ ಗ್ರಾಮೀಣ ವಿದ್ಯಾರ್ಥಿಗಳ ಗೋಳು ತಪ್ಪಿಸಬಹುದಿತ್ತು. ಶಿವುಕುಮಾರ ನಾಟೀಕಾರ, ತಾಲೂಕು ಉಪಾಧ್ಯಕ್ಷ, ಕೋಲಿ ಯುವ ಘಟಕ, ಚಿತ್ತಾಪುರ

ಮಕ್ಕಳ ಪಾಠ ಬೋಧಿಸಲು ಕೋಣೆಗಳ ಕೊರತೆಯಿಲ್ಲ. ಆದರೆ ಕೆಲವು ಹಳೆಯ ಕಟ್ಟಡಗಳಿದ್ದು ಅವು ಬಳಕೆಗೆ ಬಾರದಷ್ಟು ಶಿಥಿಲವಾಗಿವೆ. ಇಂಥಹ ಕೋಣೆಗಳಲ್ಲಿ ಪಾಠ ಬೋಧನೆ ನಿಲ್ಲಿಸಲಾಗಿದ್ದು, ಕಟ್ಟಡ ತೆರವು ಮಾಡಲು ಕ್ಷೇತ್ರಶಿಕ್ಷಣಾ ಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಕೆಲವು ಕೋಣೆಗಳ ಮಾಳಿಗೆ ಸೋರುತ್ತಿವೆ. ಕೆಲವೆಡೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿವೆ. ಹೊಸ ಕಟ್ಟಡಗಳ ಮಾಳಿಗೆಯ ಒಳಭಾಗದಲ್ಲಿ ತೇಪೆ ಹಚ್ಚಲಾದ ಕಾಂಕ್ರೀಟ್‌ ಕಳಚಿ ಬೀಳುತ್ತಿದೆ. ಆದ್ದರಿಂದ ಕೋಣೆಗಳನ್ನು ಬಳಸುತ್ತಿಲ್ಲ. ಕಿಟಕಿ, ಬಾಗಿಲು, ಬಿರುಕು ಬಿಟ್ಟಿದ್ದು ದುರಸ್ತಿ ಮಾಡಬೇಕಿದೆ. ಬಿಸಿಲು ಅಧಿಕವಿರುವ ಪರಿಣಾಮ ಮತ್ತು ಕೋಣೆಗಳಲ್ಲಿ ಫ್ಯಾನ್‌ ವ್ಯವಸ್ಥೆ ಇಲ್ಲದ ಕಾರಣ ಮಕ್ಕಳಿಗೆ ಮದ್ಯಾಹ್ನ ವೇಳೆ ಮಾತ್ರ ಮರದ ಕೆಳಗೆ ತಂಪು ಪರಿಸರದಲ್ಲಿ ಪಾಠ ಮಾಡುತ್ತಿದ್ದೇವೆ. ರೋಮಣ್ಣ ಕಳಸದ್‌, ಮುಖ್ಯಶಿಕ್ಷಕ, .ಹಿ.ಪ್ರಾ.ಶಾಲೆ, ಸನ್ನತಿ

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.