ಸ್ಯಾನಿಟರಿ ನ್ಯಾಪ್‌ಕಿನ್‌ ಬೇರೆ ರಾಜ್ಯದಿಂದ ಖರೀದಿ!


Team Udayavani, Oct 21, 2017, 10:25 AM IST

21-STATE-13.jpg

ಕಲಬುರಗಿ: ನೆರೆಯ ಮಹಾರಾಷ್ಟ್ರ ಸೇರಿ ಇತರೆ ರಾಜ್ಯಗಳಲ್ಲಿ ಮಹಿಳೆಯರಿಗೆ ಹಾಗೂ ಕಿಶೋರಿಯರಿಗೆ ಉಚಿತವಾಗಿ ವಿತರಿಸುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಸ್ಥಳೀಯ ಸ್ತ್ರೀಶಕ್ತಿ ಸ್ವ ಸ್ವಹಾಯ ಸಂಘಗಳಿಂದ ಖರೀದಿಸುತ್ತಿದ್ದರೆ, ರಾಜ್ಯದಲ್ಲಿ ಮಾತ್ರ ಬೇರೆ ರಾಜ್ಯದ ಕಂಪನಿಯೊಂದರ ಮೂಲಕ ಖರೀದಿಸಲಾಗುತ್ತಿದೆ.

ಶುಚಿ ಯೋಜನೆ ಅಡಿ ಮಹಿಳೆಯರಿಗೆ ಹಾಗೂ ಕಿಶೋರಿಯರಿಗೆ ಉಚಿತವಾಗಿ ನೀಡುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೆರೆಯ ಆಂಧ್ರಪ್ರದೇಶ ಮೂಲದ ಕಂಪನಿಯೊಂದರ ಮೂಲಕ ಟೆಂಡರ್‌ ಇಲ್ಲದೆ 45 ಕೋಟಿ ರೂ. ವೆಚ್ಚದಲ್ಲಿ ಕಳೆದ 7 ವರ್ಷಗಳಿಂದ ಖರೀದಿಸುತ್ತ ಬಂದಿರುವುದು ಟೀಕೆಗೆ ಗುರಿಯಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಅಮೋಘಸಿದ್ದ ಸ್ತ್ರೀಶಕ್ತಿ ಸ್ವ ಸಹಾಯ ಸಂಘ, ಬಾಗಲಕೋಟೆ, ಬೆಂಗಳೂರು ಹಾಗೂ ಗೌರಿ ಬಿದನೂರಿನ ಸ್ತ್ರೀಶಕ್ತಿ ಸಂಘಗಳು ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ತಯಾರಿಸುವ
ಘಟಕಗಳನ್ನು ಹೊಂದಿವೆ. ರಾಜ್ಯಕ್ಕೆ ಅಗತ್ಯವಾಗಿ ಬೇಕಾಗುವ ನ್ಯಾಪ್‌ಕಿನ್‌ಗಳ ತಯಾರಿಕಾ ಶಕ್ತಿ ಹೊಂದಿವೆ. ಅಲ್ಲದೆ ಸಾವಿರಾರು ಮಹಿಳೆಯರಿಗೆ ಉದ್ಯೋಗ ಲಭಿಸುತ್ತದೆ. ಹೀಗಾಗಿ ಇಲ್ಲಿಯೇ ನ್ಯಾಪ್‌ಕಿನ್‌ಗಳನ್ನು ಖರೀದಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಅಧಿಕಾರಿಗಳು ಸ್ಯಾನಿಟರಿ ನ್ಯಾಪ್‌ಕಿನ್‌ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಖರೀದಿಸುವ ಭರವಸೆಯನ್ನೂ ನೀಡಿದ್ದರು. ಆದರೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ. ರಾಜ್ಯಮಟ್ಟದಲ್ಲಿ ಟೆಂಡರ್‌ ಕರೆಯದಿದ್ದರೂ ವಿಭಾಗಮಟ್ಟದಲ್ಲಾದರೂ ಟೆಂಡರ್‌ ಕರೆಯುವ, ಸ್ತ್ರೀಶಕ್ತಿ ಸಂಘಗಳ ಮೂಲಕ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಖರೀದಿಸುವ ಸಿದ್ಧತೆ ಮಾಡಿಕೊಂಡಿದ್ದರು. ಈ ಸಂಬಂಧ ಸಭೆ ನಡೆಸಿದ್ದರೂ ಕೊನೇ ಘಳಿಗೆಯಲ್ಲಿ ಅದೇ ಆಂಧ್ರದ ಮೂಲಕ ಎಚ್‌ಎಲ್‌ಎಲ್‌ ಲೈಫ್‌ ಕೇರ್‌ ಸಂಸ್ಥೆಗೆ ಮತ್ತೆ ಅವಕಾಶ ನೀಡಲಾಗಿದೆ.

ಸ್ತ್ರೀಶಕ್ತಿ ಸಂಘಗಳು 19.50 ರೂ.ಗೆ ಒಂದು ಕಿಟ್‌ ನೀಡುವುದಾಗಿ ನಮೂದಿಸಿದ್ದರೂ ಲೈಫ್‌ ಕೇರ್‌ ಸಂಸ್ಥೆಯಿಂದ 25 ರೂ.ನಂತೆ ಖರೀದಿ ಮಾಡಲಾಗಿದೆ. ಒಂದು ವೇಳೆ ಸ್ಥಳೀಯ ಸ್ತ್ರೀ ಸಂಘಗಳಿಂದ ಖರೀದಿಸಿದ್ದರೆ ಸರ್ಕಾರಕ್ಕೆ 14  ಕೋಟಿ ರೂ. ಉಳಿಯುತ್ತಿತ್ತು. ಹೀಗಾಗಿ ಸ್ತ್ರೀಶಕ್ತಿ ಸ್ವ ಸಹಾಯ ಸಂಘದ 400ಕ್ಕೂ ಹೆಚ್ಚು ಮಹಿಳಾ ಸದಸ್ಯರು ಅ. 30ರಿಂದ ಬೆಂಗಳೂರಿನ ಆನಂದರಾವ್‌ ವೃತ್ತದಲ್ಲಿರುವ ಆರೋಗ್ಯ ಮತ್ತು ಕುಟುಂಬ ಸೇವೆಗಳ ನಿರ್ದೇಶನಾಲಯ ಎದುರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. 

ಆಂಧ್ರದ ಮೂಲದ ಎಚ್‌ಎಲ್‌ಎಲ್‌ ಲೈಫ್‌ ಕೇರ್‌ ಸಂಸ್ಥೆಯೂ ಸ್ವಂತ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ತಯಾರಿಸುವುದಿಲ್ಲ.
ಮಹಾರಾಷ್ಟ್ರದ ಸಹೇರಿ ಕಾರ್ಖಾನೆಯಿಂದ ತರಿಸಿಕೊಂಡು ರಾಜ್ಯಕ್ಕೆ ಪೂರೈಸುತ್ತದೆ. ಮುಖ್ಯವಾಗಿ ರಾಜ್ಯಕ್ಕೆ 2.35 ಕೋಟಿ ರೂ. ನ್ಯಾಪ್‌ಕಿನ್‌ಗಳನ್ನು ಪೂರೈಸಲಾಗುವುದು ಎಂದು ಹೇಳಲಾಗುತ್ತದೆ. ವಾಸ್ತವವಾಗಿ ಅರ್ಧದಷ್ಟಾದರೂ ಪೂರೈಸುವುದಿಲ್ಲ. ಒಬ್ಬ ಮಹಿಳೆ ಇಲ್ಲವೇ ಕಿಶೋರಿಗೆ 13 ನ್ಯಾಪ್‌ಕಿನ್‌ ಕಿಟ್‌ ಕೊಡಬೇಕು. ಆದರೆ 3-4 ಸಹ ನೀಡುತ್ತಿಲ್ಲ. ಒಟ್ಟಾರೆ ವ್ಯವಸ್ಥಿತವಾಗಿ ಸಂಬಂಧ ಪಟ್ಟ ಅಧಿಕಾರಿಗಳೆಲ್ಲ ಇದನ್ನು ನಿರ್ವಹಿಸುತ್ತಿದ್ದಾರೆ ಎಂದು ಅಫಜಲಪುರದ ಅಮೋಘಸಿದ್ಧ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷೆ ಸುರೇಖಾ ಸುಧೀರ ಪದಕಿ ಆರೋಪಿಸಿದ್ದಾರೆ.

ಟೆಂಡರ್‌ ಇಲ್ಲದೇ 7 ವರ್ಷಗಳಿಂದ ಒಂದೇ ಸಂಸ್ಥೆಯಿಂದ ಸ್ಯಾನಿಟರಿ ನ್ಯಾಪ್‌ಕಿನ್‌ ಖರೀದಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಟೆಂಡರ್‌ ನಿಯಮಾವಳಿ ಉಲ್ಲಂಘನೆಯಲ್ಲದೇ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗಿದೆ. ಈ ಕುರಿತು ಆರೋಗ್ಯಾಧಿಕಾರಿಗಳನ್ನು ಕರೆಯಿಸಿ ವಿಚಾರಿಸುವುದಾಗಿ ಲೋಕಾಯುಕ್ತ ಅಧಿಕಾರಿಗಳು ಹೇಳಿದ್ದಾರೆ.
 ● ಸುರೇಖಾ ಸುಧೀರ ಪದಕಿ, ಅಧ್ಯಕ್ಷರು, ಅಮೋಘಸಿದ್ಧ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಅಫಜಲಪುರ

 ●ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.