Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು


Team Udayavani, Oct 17, 2024, 2:55 PM IST

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

ಕಲಬುರಗಿ: ಕಾರು ಮತ್ತು ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ- ಜೇವರ್ಗಿ ನಡುವಿನ ರಾಷ್ಟ್ರೀಯ ಹೆದ್ದಾರಿ ಕಲಬುರಗಿ ಹಸಿನಾಪುರ ಕ್ರಾಸ್ ಬಳಿ ಕಳೆದ ಮಧ್ಯರಾತ್ರಿ ಸಂಭವಿಸಿದೆ.

ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಸಾವನ್ನಪ್ಪಿದರೆ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.‌

ಬೈಕ್, ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಡಿಕ್ಕಿ ಅಪಘಾತದಲ್ಲಿ ರಾಘವೇಂದ್ರ (35) ಮುಜಾಹಿದ್‌ (30) ಹುಸೇನ್ ಬಿ (45) ಮೌಲಾಬಿ (50) ಎನ್ನುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌

ಬೈಕ್‌ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಇತರ ಮೂರು ಜನರಿಗೆ ಗಂಭೀರ ಗಾಯಗಳಾಗಿವೆ. ಸಿಂದಗಿಯಿಂದ ಚಿತ್ತಾಪುರದ ಕಡೆಗೆ ಹೊರಟಿದ್ದ ಬೈಕ್ ಗೆ ಲಾರಿ ಡಿಕ್ಕಿಯಾದರೆ ಹಿಂದುಗಡೆ ಬರುತ್ತಿದ್ದ ಕಾರು ರಭಸವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆಯಲಾಗಿದೆ.‌ ಲಾರಿಗೆ ಡಿಕ್ಕಿ ಹೊಡೆದ ಬೈಕ್ ವಾಹನದ ಚಕ್ರಕ್ಕೆ ಸಿಲುಕಿದೆ.

ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಕಾರಲ್ಲಿ‌ ತೇರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.‌ ಭೀಕರ ಅಪಘಾತ ಸ್ಥಳಕ್ಕೆ‌ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಢಗೆ ಭೇಟಿ ಪರಿಶೀಲನೆ ನಡೆಸಿದರು.‌

ಕಲಬುರಗಿ ನಗರದ ಟ್ರಾಫಿಕ್ 1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರ್ಲ್ಡ್ ಟ್ರಾಮಾ ಡೇ ದಿನ ಅಪಘಾತ: ಅಕ್ಟೋಬರ್ 17 ವರ್ಲ್ಡ್ ಟ್ರಾಮಾ ಡೇ ಅಂದರೆ ವಿಶ್ವ ಅಪಘಾತ ನಿರ್ವಹಣೆ ದಿನಾಚರಣೆ. ಈ ದಿನದ ಸಂದರ್ಭದಲ್ಲೇ ಅಪಘಾತ ಸಂಭವಿಸಿದೆ. ವರ್ಲ್ಡ್ ಹಾರ್ಟ್ ಡೇ, ಕ್ಯಾನ್ಸರ್ ಡೇ ಯಂತೆ ವರ್ಲ್ಡ್ ಟ್ರಾಮಾ ಡೇ ಆಚರಿಸಲಾಗುತ್ತದೆ, ಇದೇ ದಿನದ ಸಂದರ್ಭದಲ್ಲಿ ಅಪಘಾತ ಸಂಭವಿಸಿರುವುದು ಅಪಘಾತ ತಡೆಯದಂತೆ ಹೆಚ್ಚಿನ ನಿಟ್ಟಿನಲ್ಲಿ ಮುಂಜಾಗೃತೆ ವಹಿಸುವುದನ್ನು ಎಚ್ಚರಿಕೆ ನೀಡಿದಂತಾಗಿದೆ ಎಂದು ಪೊಲೀಸ್ ಆಯುಕ್ತ ಡಾ. ಶರಣಪ್ಪ ಢಗೆ ಅವರು ಯುನೈಟೆಡ್ ಆಸ್ಪತ್ರೆಯಲ್ಲಿ ನಡೆದ ವರ್ಲ್ಡ್ ಟ್ರಾಮಾ ಡೇ ಕಾರ್ಯಕ್ರಮದಲ್ಲಿ ಹೇಳಿದರು.

ಹೆಚ್ಚುತ್ತಿರುವ ಅಫಘಾತಕ್ಕೆ‌ ಜನತೆಯಲ್ಲಿ ತಾಳ್ಮೆ ಇಲ್ಲದಿರುವುದು ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸದಿರುವುದೇ ಕಾರಣವಾಗಿದೆ. ಹೀಗಾಗಿ ಒಂದು ನಿಮಿಷದ ಅವಸರ ಜೀವಕ್ಕೆ ಅಪಾಯವಾಗುವುದನ್ನು ತಪ್ಪಿಸಿ ಎಂದು ಕರೆ ನೀಡಿದರು.

ಟಾಪ್ ನ್ಯೂಸ್

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

1–RASm

Denmark; ಮುಸ್ಲಿಂ ರಾಷ್ಟ್ರದ ರಾಯಭಾರ ಕಚೇರಿ ಎದುರು ಕುರಾನ್‌ ಸುಟ್ಟ ರಾಸ್ಮಸ್ ಪಲುಡಾನ್!

I played for two years without a batting contract: Sachin Tendulkar recalls old incident

ಎರಡು ವರ್ಷ ಬ್ಯಾಟ್‌ ಕಾಂಟ್ರ್ಯಾಕ್ಟ್‌ ಇಲ್ಲದೆ ಆಡಿದ್ದೆ..: ಹಳೆ ಘಟನೆ ಮೆಲಕು ಹಾಕಿದ ಸಚಿನ್

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Jaishanakar

PM’s invite; ಆಹ್ವಾನ ಪಡೆಯಲು ಅಮೆರಿಕಕ್ಕೆ ಆರೋಪ: ರಾಹುಲ್ ಗೆ ತಿರುಗೇಟು ನೀಡಿದ ಜೈಶಂಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Sriramulu expresses dissatisfaction with high command

BJP: ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು

Vidhanasoudha: ಫೆ.27ರಿಂದ ವಿಧಾನಸೌಧದಲ್ಲಿ ಪುಸ್ತಕ, ಸಾಂಸ್ಕೃತಿಕ ಮತ್ತು ಆಹಾರ ಮೇಳ: ಖಾದರ್

Vidhanasoudha: ಫೆ.27ರಿಂದ ವಿಧಾನಸೌಧದಲ್ಲಿ ಪುಸ್ತಕ, ಸಾಂಸ್ಕೃತಿಕ ಮತ್ತು ಆಹಾರ ಮೇಳ: ಖಾದರ್

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

12

Gundlupete: ಹಿಂಬದಿಯಿಂದ ಕಾರು ಡಿಕ್ಕಿ; ಪಾದಾಚಾರಿ ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.