Chittapur: ಮಣಿಕಂಠ ರಾಥೋಡ್ ಬಂಧನ
Team Udayavani, Aug 25, 2023, 11:54 PM IST
ಕಲಬುರಗಿ: ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಣಿಕಂಠ ರಾಥೋಡ್ ಅವರನ್ನು ಮೂರೇ ದಿನಗಳಲ್ಲಿ ಎರಡನೇ ಬಾರಿ ಬಂಧಿಸಲಾಗಿದೆ.
ರಾಠೊಡ್ ಅವರಿಗೆ ಶುಕ್ರವಾರ ಬೆಳಗ್ಗೆ ಮಾಡಬೂಳ ಪೊಲೀ ಸರು ಕರೆ ಮಾಡಿ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂದು ಸಹಿ ಮಾಡು ವಂತೆ ಸೂಚಿಸಿದ್ದರು. ಅದರಂತೆ ಮಧ್ಯಾಹ್ನ ಠಾಣೆಗೆ ಹೋದಾಗ ಅವರನ್ನು ಬಂಧಿಸಲಾಗಿದೆ. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣದ ವಿವರ
ಕಲಗುರ್ತಿ ಗ್ರಾಮದ ಯುವಕ ದೇವಾನಂದ ರಾಮಚಂದ್ರ ಕೊರಬಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆ.23ರಂದು ಚಿತ್ತಾಪುರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವಿಚಾರವನ್ನು ತಿಳಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಂಚಿಕೊಂಡಿದ್ದ ವೀಡಿಯೋ ವೈರಲ್ ಆಗಿ ಸರಕಾರಕ್ಕೂ ಮುಜುಗುರ ಉಂಟಾ ಗಿತ್ತು. ಈ ಹಿನ್ನೆಲೆಯಲ್ಲಿ ಮಣಿಕಂಠ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಬುಧವಾರ ಸಂಜೆಯೇ ಠಾಣೆ ಜಾಮೀನಿನಡಿ ಬಿಡುಗಡೆ ಮಾಡಲಾಗಿತ್ತು.
ಬಳಿಕ ಮಣಿಕಂಠ ಮಾಧ್ಯಮ ಗಳ ಎದುರು ತಮ್ಮನ್ನು ನಡೆಸಿ ಕೊಳ್ಳುತ್ತಿರುವ ರೀತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಡೆ ಕುರಿತು ಖಾರವಾದ ಪ್ರತಿ ಕ್ರಿಯೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಪುನಃ ಬಂಧಿಸಲಾಗಿದೆ. ಬಂಧನ ಖಂಡಿಸಿ ಚಿತ್ತಾಪುರ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.