ಚಿತ್ತಾಪುರ ಎಂಎಲ್‌ಎ ಸೋಲಿಸಲು ರಣತಂತ್ರ


Team Udayavani, Oct 27, 2021, 10:27 AM IST

1election

ವಾಡಿ: ಕಲಬುರಗಿಯ ಕಾಂಗ್ರೆಸ್‌ ಸಂಸದರನ್ನು ಸೋಲಿಸಿ ಮನೆಗೆ ಕಳುಹಿಸಿದ್ದು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರದ ಕಾಂಗ್ರೆಸ್‌ ಎಂಎಲ್‌ಎಯನ್ನು ಮನೆಗೆ ಕಳಿಸಲು ರಣತಂತ್ರ ಸಿದ್ಧವಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹೇಳಿದರು.

ಮಂಗಳವಾರ ರಾವೂರ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಗ್ರಾಮಂತರ ಕಾರ್ಯಕಾರಿಣಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆಗಳನ್ನು ಯಶಸ್ವಿಯಾಗಿ ಗೆಲ್ಲುವ ಸಾಮ ರ್ಥ್ಯ ಭಾಜಪ ಕಾರ್ಯಕರ್ತರಿಗಿದೆ. ಬೂತ್‌ ಮಟ್ಟದಿಂದ ಮತಗಳ ಕ್ರೋಢೀಕರಣ ಮಾಡಿದ್ದರಿಂದ ಕಾಂಗ್ರೆಸ್‌ ಹಿಡಿತದಲ್ಲಿದ್ದ ಕಲಬುರಗಿ ಲೋಕಸಭೆ ಕಮಲ ಹಿಡಿತಕ್ಕೆ ಜಾರಲು ಕಾರಣವಾಯಿತು ಎಂದರು.

ಚಿತ್ತಾಪುರ ಸೇರಿದಂತೆ ಜಿಲ್ಲೆಯ ಇತರ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಕಮಲ ಅರಳಿಸಿ, ಕಾಂಗ್ರೆಸ್‌ ಮುಕ್ತ ಕಲಬುರಗಿ ನಿರ್ಮಿಸುವ ಗುರಿ ಹೊಂದಲಾಗಿದೆ. ತಾಪಂ ಮತ್ತು ಜಿಪಂ ಚುನಾವಣೆಗಳ ಪೂರ್ವಸಿದ್ಧತೆ ಈಗಿನಿಂದಲೇ ಶುರು ವಾಗಬೇಕು. ಬಿಜೆಪಿ ಕಾರ್ಯಕರ್ತರ ಪಕ್ಷ ಸಂಘಟನೆ ಕಾಂಗ್ರೆಸ್‌ಗೆ ನಡುಕ ಹುಟ್ಟಿಸಬೇಕು ಎಂದು ಹೇಳಿ, ಕಮಲ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದಿರುವ ಉತ್ತಮ ಯೋಜನೆಗಳನ್ನು ಜನರಿಗೆ ತಲುಪಿಸುವ ಜತೆಗೆ, ಇವು ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳು ಎಂಬುದನ್ನು ಜನರಿಗೆ ಮನದಟ್ಟು ಮಾಡಿಸಬೇಕು ಎಂದರು.

ನಮ್ಮ ಗ್ರಾಮ-ನಮ್ಮ ರಸ್ತೆ, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಬಿಮಾ ಫಸಲ್‌ ಯೋಜನೆ, ಜಲ ಜೀವನ್‌, ಕಿಸಾನ್‌ ಸಮ್ಮಾನ್‌ ಯೋಜನೆ, ಉಜ್ವಲ ಗ್ಯಾಸ್‌, ಬಡ ಕುಟುಂಬಗಳ ಖಾತೆಗೆ ಕೋವಿಡ್‌ ಪರಿಹಾರ, ರೈತರಿಗೆ ಪರಿಹಾರ, ರೈಲು ನಿಲ್ದಾಣಗಳ ಅಭಿವೃದ್ಧಿ, ಅಂಗನವಾಡಿಗಳಿಗೆ ಪುನಶ್ಚೇತನ, ದೇಶದ ಪ್ರತಿ ಪಂಚಾಯತಿಗೆ ಕಸವಿಲೇವಾರಿ ಘಟಕಗಳ ಮಂಜೂರಿ, ಸ್ವತ್ಛ ಭಾರತ ಯೋಜನೆಯಡಿ ಶೌಚಾಲಯಗಳ ಕ್ರಾಂತಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸುಧಾರಣೆ ಸೇರಿದಂತೆ ಹಲವು ಯೋಜನೆಗಳನ್ನು ಕೊಟ್ಟಿರುವ ನರೇಂದ್ರ ಮೋದಿಜಿಯವರ ಸರ್ಕಾರದ ಸಾಧನೆಗಳ ಮೇಲೆ ಹೆಚ್ಚು ಬೆಳಕು ಚೆಲ್ಲುವ ಕೆಲಸವಾಗಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

ಇದನ್ನೂ ಓದಿ: ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

ಸಭೆ ಉದ್ಘಾಟಿಸಿ ಮಾತನಾಡಿದ ಸಂಸದ ಡಾ| ಉಮೇಶ ಜಾಧವ, ದೇಶವನ್ನು ಕಾಡಿದ ಕೊರೊನಾ ಎನ್ನುವ ಕೀಡೆ (ವೈರಸ್‌) ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸಿದೆ. ಆರೋಗ್ಯ ಸಿಬ್ಬಂದಿ ಶ್ರಮದಿಂದ ದೇಶ 100 ಕೋಟಿ ಲಸಿಕೆ ಗುರಿ ತಲುಪಿದ್ದು ಸಾಮಾನ್ಯವಲ್ಲ. ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಆದರೂ ಕೆಲವರು ಮೋದಿಜಿ ವಿರುದ್ಧ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜಪಾಟೀಲ ರದ್ದೇವಾಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಡಾ| ಅವಿನಾಶ ಜಾಧವ, ದ್ವಿದಳಧಾನ್ಯ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಕಾಡಾ ಅಧ್ಯಕ್ಷ ಹರ್ಷವರ್ಧನ ಗುಗ್ಗಳೆ, ಬಿಜೆಪಿ ಚಿತ್ತಾಪುರ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ, ಪಕ್ಷದ ಹಿರಿಯ ಮುಖಂಡರಾದ ಅರುಣ ಬಿನ್ನಾಡಿ, ನಾಮದೇವ ರಾಠೊಡ, ಬಸವರಾಜ ಬೆಣ್ಣೂರಕರ, ಧರ್ಮಣ್ಣ ಇಟಗಾ, ಅಂಬಾರಾಯ ಅಷ್ಟಗಿ, ಧರ್ಮಣ್ಣ ದೊಡ್ಡಮನಿ, ಚಂದಮ್ಮ ಪಾಟೀಲ, ಡಾ| ಇಂದ್ರಾ ಶಕ್ತಿ, ನಿವೇದಿತಾ ದಹಿಹಂಡೆ, ವಿಠ್ಢಲ ನಾಯಕ, ಭೀಮರೆಡ್ಡಿಗೌಡ ಕುರಾಳ, ಡಾ| ಗುಂಡಣ್ಣ ಬಾಳಿ, ಮುಕುಂದ ದೇಶಪಾಂಡೆ, ರಾಜು ಮುಕ್ಕಣ್ಣ, ಮಲ್ಲಣ್ಣ ಸಣಮೋ, ಚಂದ್ರಶೇಖರ ಅವಂಟಿ ಪಾಲ್ಗೊಂಡಿದ್ದರು. ಲಿಂಗರಾಜ ಬಿರಾದಾರ ಸ್ವಾಗತಿಸಿದರು, ನಾಗಪ್ಪ ಕೊಳ್ಳಿ ನಿರೂಪಿಸಿದರು. ಚಂದ್ರಶೇಖರರೆಡ್ಡಿ ವಂದಿಸಿದರು.

ಜಿಡ್ಡುಗಟ್ಟಿದ ದೇಶದ ಶಿಕ್ಷಣ ವ್ಯವಸ್ಥೆ ಬದಲಿಸಲು ಮುಂದಾಗಿರುವ ಬಿಜೆಪಿ ಸರ್ಕಾರ, ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ದೇಶದ ಅಸಂಖ್ಯಾತ ವಿದ್ಯಾವಂತರು ಇದನ್ನು ಸ್ವಾಗತಿಸಿದ್ದಾರೆ. ಆದರೆ ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ಮಾತ್ರ ವಿರೋಧ ಮಾಡುತ್ತಿದ್ದಾರೆ. ಇವರಿಬ್ಬರೂ ಮನೆಯಲ್ಲಿ ಸರಿಯಾಗಿ ಹೋಂವರ್ಕ್‌ ಮಾಡಿದರೆ ಎನ್‌ಇಪಿ ಅರ್ಥವಾಗುತ್ತದೆ. -ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.