ಹವಾಮಾನ ವೈಪರೀತ್ಯ: 2 ವಿಮಾನಗಳು ಆಗಸದಲ್ಲಿ ಸುತ್ತಿದರೂ ಸಿಗದ ಲ್ಯಾಂಡಿಂಗ್ ಅವಕಾಶ
Team Udayavani, Aug 16, 2020, 3:24 PM IST
ಕಲಬುರಗಿ: ಸತತ ಮಳೆಯಿಂದ ಹವಾಮಾನ ವೈಪರೀತ್ಯ ಉಂಟಾಗಿ ರವಿವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಇಳಿಯಲು ಸಾಧ್ಯವಾಗಿಲ್ಲ. ಅಲಿಯನ್ಸ್ ಏರ್ ಮತ್ತು ಸ್ಟಾರ್ ಏರ್ ವಿಮಾನಗಳು ಇಳಿಸಲು 40 ನಿಮಿಷಗಳ ಕಾಲ ಪ್ರಯತ್ನಿಸಿ ಆಗಸದಲ್ಲೇ ಸುತ್ತುಸುತ್ತಿದರೂ ಸಫಲವಾಗದ ಪ್ರಸಂಗ ನಡೆದಿದೆ.
ಬೆಳಿಗ್ಗೆ ಬೆಂಗಳೂರಿನಿಂದ ಕಲಬುರಗಿಯತ್ತ ಅಲಯನ್ಸ್ ಏರ್ ಮತ್ತು ಸ್ಟಾರ್ ಏರ್ ವಿಮಾನಗಳು ಪ್ರಯಾಣಿಕರ ಹೊತ್ತು ಬಂದಿದ್ದವು. ಆದರೆ, ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ ಸುರಿಯುತ್ತಿದ್ದ ಕಾರಣ ವಿಮಾನಗಳು ಲ್ಯಾಂಡ್ ಆಗಲು ಸಾಧ್ಯವಾಗಿಲ್ಲ. ವಿಮಾನಗಳು ಇಲ್ಲೇ ಸುತ್ತುವರಿಯುತ್ತಿದ್ದರೂ ವ್ಯತಿರಿಕ್ತ ವಾತಾವರಣ ಹಿನ್ನೆಲೆಯಲ್ಲಿ ಎಟಿಸಿ ಸಿಗ್ನಲ್ ವಿಮಾನಗಳನ್ನು ಇಳಿಸಲು ಅನುಮತಿ ನೀಡಲಿಲ್ಲ. ಅಲಯನ್ಸ್ ಏರ್ ವಿಮಾನ ಹತ್ತಿರದ ಹೈದರಾಬಾದ್ ಗೆ ಕಳುಹಿಸಲಾಯಿತು ಹಾಗೂ ಸ್ಟಾರ್ ಏರ್ ವಿಮಾನ ಮರಳಿ ಬೆಂಗಳೂರಿಗೆ ವಾಪಸ್ ಹೋಯಿತು ಎಂದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ ರಾವ್ ‘ಉದಯವಾಣಿ’ಗೆ ತಿಳಿಸಿದರು.
ಅಲಯನ್ಸ್ ಏರ್ ವಿಮಾನ ಬೆಂಗಳೂರಿನಿಂದ ತನ್ನ ಸರಿಯಾದ ಸಮಯ ಬೆಳಿಗ್ಗೆ 10.15ಕ್ಕೆ 50 ಜನ ಪ್ರಯಾಣಿಕರನ್ನು ಹೊತ್ತು ಹೊರಟಿತ್ತು. ಕಲಬುರಗಿ ವಿಮಾನ ನಿಲ್ದಾಣದಲ್ಲಿ 11.45ಕ್ಕೆ ಲ್ಯಾಂಡ್ ಆಗಬೇಕಿತ್ತು. ಲ್ಯಾಂಡಿಂಗ್ ಸಮಸ್ಯೆಯಿಂದ 40 ನಿಮಿಷ ಆಗಸದಲ್ಲೇ ಸುತ್ತುವರಿದು ಕೊನೆಗೆ ಹೈದ್ರಾಬಾದ್ ಗೆ ಮಾರ್ಗ ಬದಲಾವಣೆ ಮಾಡಲಾಯಿತು. ಇದೇ ವಿಮಾನದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ತೆರಳಲು 52 ಟಿಕೆಟ್ ಕಾಯ್ದಿರಿಸಿದ್ದರು.
ಇತ್ತ, ಸ್ಟಾರ್ ಏರ್ ವಿಮಾನ ತನ್ನ ನಿಗದಿತ ಸಮಯಕ್ಕೆ ತಡವಾಗಿ ಬಂದರೂ ಇಳಿಯಲು ಅನುಕೂಲಕರ ಪರಿಸ್ಥಿತಿ ಇರದ ತನ್ನ ಒಂದು ದಿನದ ಹಾರಾಟವನ್ನೇ ರದ್ದು ಮಾಡಿದೆ. ಈ ವಿಮಾನ ಬೆಂಗಳೂರಿನಿಂದ ಬೆಳಿಗ್ಗೆ 8.40ಕ್ಕೆ ಹೊರಟು, ಕಲಬುರಗಿಗೆ 9.45ಕ್ಕೆ ಬರಬೇಕಿತ್ತು. ತನ್ನ ನಿಗದಿತ ಸಮಯಕ್ಕಿಂತ ಎರಡು ಗಂಟೆಗೂ ಅಧಿಕ ಕಾಲ ತಡವಾಗಿ ಬಂದು 40 ನಿಮಿಷ ಆಗಸದಲ್ಲೇ ಸುತ್ತುವರಿದಿದೆ. ಆದರೂ, ಎಟಿಸಿ ಸಿಗ್ನಲ್ ವಿಮಾನ ಇಳಿಸಲು ಅನುಮತಿ ನೀಡದ ಕಾರಣ ಬೆಂಗಳೂರಿಗೆ ವಾಪಸ್ ಆಗಿದೆ.
ಈ ವಿಮಾನದಲ್ಲಿ ಬೆಂಗಳೂರಿನಿಂದ ಕಲಬುರಗಿಗೆ 40 ಪ್ರಯಾಣಿಕರು ಹತ್ತಿದ್ದರು. ಇದೇ ವಿಮಾನದಲ್ಲಿ ಕಲಬುರಗಿಯಿಂದ 44 ಜನ ಪ್ರಯಾಣಿಕರು ಹೋಗಬೇಕಿತ್ತು. ಆದರೆ, ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೋದ ವಿಮಾನ ಮರಳಿ ಬಾರದೆ ಹಾರಾಟ ಸ್ಥಗಿತಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.