Karnataka Election 2023; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ನಿತೀನ ಗುತ್ತೇದಾರ

ಎಷ್ಟೇ ಒತ್ತಡ ಬಂದರೂ ಜಗ್ಗುವುದಿಲ್ಲ

Team Udayavani, Apr 12, 2023, 11:22 AM IST

Karnataka Election 2023; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತ: ನಿತೀನ ಗುತ್ತೇದಾರ

ಕಲಬುರಗಿ: ಟಿಕೆಟ್ ಗಾಗಿ ಸಹೋದರರ ನಡುವೆ ಕದನ ಏರ್ಪಟ್ಟಿದ್ದ ಜಿಲ್ಲೆಯ ಅಫಜಲಪುರ ಕ್ಷೇತ್ರದ ಟಿಕೆಟ್ ಫೈಟ್ ದಲ್ಲಿ ಟಿಕೆಟ್ ವಂಚಿತರಾಗಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಿತೀನ ವಿ. ಗುತ್ತೇದಾರ ಸಹೋದರನ ವಿರುದ್ಧ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಪ್ರಕಟಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಮಾಲೀಕಯ್ಯ ಗುತ್ತೇದಾರಗೆ ಅಫಜಲಪುರದಲ್ಲಿ ಬಿಜೆಪಿ ಘೋಷಣೆ ಮಾಡಿದ್ದು, ಟಿಕೆಟ್ ನಿರೀಕ್ಷೆ ಯಲ್ಲಿದ್ದ ಸಹೋದರ ನಿತೀನ ಗುತ್ತೇದಾರಗೆ ನಿರಾಸೆಯಾಗಿದೆ.

ನುಡಿದಂತೆ ಸಹೋದರ ಮಾಲೀಕಯ್ಯ ಗುತ್ತೇದಾರ ಕ್ಷೇತ್ರ ಬಿಟ್ಟು ಕೊಡಬೇಕಿತ್ತು. ಕ್ಷೇತ್ರದಲ್ಲಿ ಕಳೆದ ಐದು ವರ್ಷದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದರಿಂದ ಟಿಕೆಟ್ ತಮಗೆ ದೊರಕಬಹುದೆಂದು ನಿರೀಕ್ಷೆ ಹೊಂದಿದ್ದೇ. ಆದರೆ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುವುದಾಗಿ ಮೊದಲೇ ಹೇಳಿದ್ದೇ, ಅದರಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಾಗುವುದು ಎಂದು ಪುನರುಚ್ಚರಿಸಿದರು.

ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಸಹೋದರ ಮಾಲೀಕಯ್ಯ ಗುತ್ತೇದಾರ ಜತೆಗೆ ಆಗಮಿಸಿದ ನಿತೀನ ಗುತ್ತೇದಾರ, ಯಾವುದೇ ಸಂಧಾನ ಹಾಗೂ ಮಾತುಕತೆಗೆ ಜಗ್ಗುವುದಿಲ್ಲ ಎಂದು ತಿಳಿಸಿದರು.

ಸ್ಪರ್ಧೆ ಮಾಡುವ ಕುರಿತಾಗಿ ಕಾರ್ಯಕರ್ತರೊಂದಿಗೆ ಮತ್ತೊಂದು ಸಭೆ ನಡೆಸುವ ಅವಶ್ಯಕವಿಲ್ಲ. ಯಾವ ದಿನ ನಾಮಪತ್ರ ಸಲ್ಲಿಸಬೇಕೆಂಬುದನ್ನು ಕಾರ್ಯಕರ್ತರೊಂದಿಗೆ ಚರ್ಚಿಸುತ್ತೇನೆ ಎಂದರು.

ಪಕ್ಷ ಯುವಕನಾದ ನನಗೆ ಟಿಕೆಟ್ ನೀಡುತ್ತದೆ ಎನ್ನುವ ನಂಬಿಕೆ ಇತ್ತು. ಬಿಜೆಪಿ ನನಗೆ ಟಿಕೆಟ್ ನೀಡದಿದ್ದರೂ ಸರಿ ನನ್ನ ಸ್ಪರ್ಧೆ ಖಚಿತ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾನು ಕಣಕ್ಕಿಳಿಯುವುದು ನೂರಕ್ಕೆ ನೂರರಷ್ಟು ಖಚಿತ.
ನಿನಗೆ ಭವಿಷ್ಯ ಇದೆ ತಾಳ್ಮೆಯಿಂದ ಇರು ಎಂದು ನನ್ನ ಅಣ್ಣ ಮಾಲೀಕಯ್ಯ ಗುತ್ತೇದಾರ ಹೇಳುತ್ತಲೇ ಬಂದಿದ್ದಾರೆ.‌ ಈ ಬಾರಿ ಯಾವುದೇ ಒತ್ತಡಗಳಿಗೆ ಮಣಿಯಲಾರೆ. ಒಂದೆಡೆ ಅಣ್ಣ ಮಾಲಿಕಯ್ಯ ಗುತ್ತೇದಾರ್ ಇನ್ನೊಂದಡೆ ಹಿರಿಯರಾದ ಎಂ ವೈ ಪಾಟೀಲ್ ಇಬ್ಬರ ನಡುವೆ ಯುವಕನಾದ ನನಗೆ ಜನ ಆಶೀರ್ವದಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದು ನಿತೀನ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.