![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 10, 2022, 2:10 PM IST
ಕಲಬುರಗಿ: ಹಿಂದಿನ ಸರ್ಕಾರ ಮಾಡಿರುವ ಸಾಲ ಮನ್ನಾ ಮೊತ್ತದಷ್ಟೇ ಹೊಸ ಸಾಲ ವಿತರಿಸುವಂತೆ ಕಲ್ಯಾಣ ಕರ್ನಾಟಕ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಸಾಲ ಮನ್ನಾವಾದ ರೈತರಿಗೆ ಸಮರ್ಪಕ ಸಾಲ ಹಂಚುತ್ತಿಲ್ಲ. ಕೆಲವೊಂದು ತಾಲೂಕುಗಳಿಗೆ ನೂರಾರು ಕೋಟಿ ರೂ. ಸಾಲ ಹಂಚಿಕೆ ಮಾಡಿದರೆ, ಇನ್ನು ಕೆಲವೊಂದು ತಾಲೂಕಿಗೆ ಕೇವಲ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಸಮರ್ಪಕವಾಗಿ ಸಾಲ ವಿತರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಕೇಲ್ ಆಫ್ ಫೈನಾನ್ಸ್ ಪ್ರಕಾರ ಸಾಲ ವಿತರಿಸುತ್ತಿಲ್ಲ. ಆಳಂದ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಲಕ್ಷ್ಮಣ ಪವಾರ ಕೋಟ್ಯಂತರ ರೂ. ಅವ್ಯವಹಾರ ಎಸಗಿದ್ದು, ಆಡಳಿತ ಮಂಡಳಿಯವರು ಹಾಗೂ ಬ್ಯಾಂಕ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಪಾದಿಸಿದರು.
ಸಾಲ ಹಂಚಿಕೆಯಲ್ಲಿ ಅಸಮಾನತೆ, ಹಗರಣ ಎಸಗಿದ ಅಧಿಕಾರಿಯಿಂದ ಹಣ ವಸೂಲಾತಿ ಮಾಡದಿರುವುದು, ಕಟ್ಟಡ ಕಾಮಗಾರಿಗೆ ಪಡೆದ ಹಣ ಬಳಕೆ ಸೇರಿದಂತೆ ಇತರ ನಿಟ್ಟಿನಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಪ್ರಕಾಶ ಪಾಟೀಲ ಯತ್ನಾಳ, ಶೌಕತ್ ಅಲಿ ಆಲೂರ, ಬಸವರಾಜ ಬೂದಿಹಾಳ, ಹಣಮಂತರಾಯ ಹೂಗಾರ, ಶರಣಪ್ಪ ದೊಡ್ಡಮನಿ, ಬಸಣ್ಣ ಕೊಳಕೂರ ಮುಂತಾದವರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.