ಮೀಸಲಾತಿಗಾಗಿ ತಲೆ ಬೋಳಿಸಿಕೊಂಡು ಆಕ್ರೋಶ
Team Udayavani, Jul 16, 2022, 12:45 PM IST
ಹುಮನಾಬಾದ: ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡುವಂತೆ ಹಾಗೂ ವಿವಿಧ ಬೇಡಿಕೆ ರಾಜ್ಯ ಸರ್ಕಾರ ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ನಡೆಯುತ್ತಿರುವ 10ನೇ ದಿನದ ಸತ್ಯಾಗ್ರಹದಲ್ಲಿ ಶುಕ್ರವಾರ ಜಂಗಮರು ತಲೆ ಬೋಳಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಂಗಮ ಸಮಾಜದ ಮುಖಂಡರಾದ ರವಿ ಸ್ವಾಮಿ, ಸಿದ್ದು ಚಕ್ಕಪಳ್ಳಿ ಮಾತನಾಡಿ, ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ಜಂಗಮ ಸಮಾಜದಿಂದ ಕಳೆದ 10 ದಿನಗಳಿಂದ ಹಗಲು-ರಾತ್ರಿ ಸತ್ಯಾಗ್ರಹ ನಡೆಸಿದ್ದು, ಸರ್ಕಾರ ಮಾತ್ರ ಜಂಗಮರ ಬೇಡಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಿರಂತರ ಮಳೆ ಸುರಿಯುತ್ತಿದ್ದರೂ ಪ್ರತಿಭಟನಾ ಸ್ಥಳದಿಂದ ಯಾರೊಬ್ಬರೂ ಕದಲಿಲ್ಲ. ನಮ್ಮ ಹಕ್ಕಿಗಾಗಿ ನಾವುಗಳು ಹೋರಾಟ ನಡೆಸುತ್ತಿದ್ದು, ಬರುವ ದಿನಗಳಲ್ಲಿ ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸಲು ಇಂತನೆ ಮಾಡಬೇಕಾಗುತ್ತದೆ. ಈ ಹಿಂದೆ ರಕ್ತದಲ್ಲಿ ಮುಖ್ಯಮಂತ್ರಿಗೆ ಪತ್ರ ಬರೆದು ಮೀಸಲಾತಿ ಘೋಷಣೆ ಮಾಡುವಂತೆ ಒತ್ತಾಯಿಸಲಾಗಿತ್ತು. ಇದೀಗ ಜಂಗಮರು ತಲೆ ಬೋಳಿಸಿಕೊಂಡು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ. ನಮ್ಮ ಪ್ರತಿಭಟನೆಗೆ ಹಡಪದ ಸಮಾಜದವರು ಕೂಡ ಬೆಂಬಲ ನೀಡಿ ಕೇಶ ಮುಂಡನೆಗೆ ಸಹಕಾರ ನೀಡಿದ್ದಾರೆ. ಕೂಡಲೇ ಸರ್ಕಾರ ಮೀಸಲಾತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.