
ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಲಿ: ಪಾಟೀಲ್
Team Udayavani, May 31, 2022, 1:16 PM IST

ಕಲಬುರಗಿ: ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಕಲಬುರಗಿ ನಗರ ದಕ್ಷಿಣ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಧಜ್ವ ಖಂಡಿತವಾಗಿ ಹಾರಿಸಲು ಶಕ್ತಿ ಮೀರಿ ಶ್ರಮಿಸೋಣ. ಇದರಿಂದ ನಗರದ ಜನತೆಯನ್ನು ಕೋಮುವಾದಿ ಪಕ್ಷದ ಉಪಟಳದಿಂದ ಮುಕ್ತ ಮಾಡೋಣ ಎಂದು ಮಾಜಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ ನೆಲೋಗಿ ಹೇಳಿದರು.
ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ದಕ್ಷಿಣ ಮತಕ್ಷೇತ್ರದ ವಾರ್ಡ್ ವಾರು ಮತ್ತು ಬೂತ್ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರಕಾರ ಮಾಡುತ್ತಿರುವ ಕೋಮುವಾದ, ಹಿಜಾಬ್, ಆಜಾನ್ ಮತ್ತು ಧಾರ್ಮಿಕ ಅಸಹಿಷ್ಣುತೆ ಕುರಿತು ವಾರ್ಡ್ ಮತ್ತು ಬೂತ್ ಮಟ್ಟದಲ್ಲಿರುವ ಜನರ ಮನೆಗಳಿಗೆ ಹೋಗಿ ಪರಿಣಾಮ ತಿಳಿ ಹೇಳುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕು. ಇದರಿಂದ ಜನರಿಗೆ ಪ್ರಸಕ್ತ ಕಾಲಘಟ್ಟದಲ್ಲಿ ನಡೆಯುವ ಘಟನಾವಳಿಗೂ ದೂರದೃಷ್ಟಿತ್ವದಲ್ಲಿ ಏನೆಲ್ಲ ಅಡ್ಡ ಪರಿಣಾಮ ಉಂಟು ಮಾಡಲಿವೆ ಎನ್ನುವುದನ್ನು ನಾವು ಮನವರಿಕೆ ಮಾಡಿಕೊಡಬೇಕು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಮೇಯರ್ ಶರಣಕುಮಾರ ಮೋದಿ ಮಾತನಾಡಿ, ನಗರದ ಜನತೆಗೆ ಕೋಮುವಾದ, ಜಾತಿ ಧರ್ಮದಲ್ಲಿನ ಜಗಳಗಳ ಕುರಿತು ತಿಳಿವು ಇದೆ. ಆದರೆ, ಅದರ ಪರಿಣಾಮ ಹೇಗೆ ದೈನಂದಿನ ಜೀವನದ ಮೇಲೆ ಬೀಳುತ್ತದೆ. ಮುಂದಿನ ದಿನಗಳಲ್ಲಿ ಮಕ್ಕಳು ಆದರಿಂದ ಹೇಗೆ ಪ್ರಭಾವಿತರಾಗಿ ಅಪಾಯದ ಜೀವನಕ್ಕೆ ತಳ್ಳಲ್ಪಡುತ್ತಾರೆ ಎನ್ನುವುದನ್ನು ಚೆನ್ನಾಗಿ ತಿಳಿ ಹೇಳುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಮಾಡಬೇಕು. ಅದರಲ್ಲೂ ಪ್ರಮುಖವಾಗಿ ಮಹಿಳಾ ಮುಖಂಡರು ಮನೆ ಮನೆಗಳಿಗೆ ತೆರಳಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತಂದಿರುವುದರಿಂದ ಉಂಟಾಗಿರುವ ಸಮಸ್ಯೆಗಳನ್ನು ಹೇಳಬೇಕು ಎಂದರು.
ಈ ಸಂದರ್ಭದಲ್ಲಿ ಶಾಮ ನಾಟೀಕಾರ, ಜಗನ್ನಾಥ ಗೋಧಿ, ಬಾಬು ಒಂಟಿ, ಶಿವಾನಂದ ಹೋನಗುಂಟಿ, ನೀಲಕಂಠರಾವ ಮೂಲಗೆ, ಲಿಂಗರಾಜ್ ತಾರಫೈಲ್, ಲಿಂಗರಾಜ್ ಕಣ್ಣಿ, ಪ್ರವೀಣ ಪಾಟೀಲ್ ಹರವಾಳ, ಡಾ| ಕಿರಣ ದೇಶಮುಖ್, ರಾಜೇಶ ಗುತ್ತೇದಾರ, ಸಂತೋಷ ಪಾಟೀಲ ದನ್ನೂರ, ಈರಣ ಝಳಕಿ, ಬಸವರಾಜ ನಾಶಿ, ಫಾರುಖ ಸೇಠ್ ಮನಿಯಾರ, ವಾಣಿಶ್ರೀ ಸಗರಕರ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.