![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 20, 2024, 9:54 PM IST
ಕಲಬುರಗಿ: ಸಹಕಾರಿ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲನ್ನು ಸಂಪೂರ್ಣವಾಗಿ 2024ರ ಫೆಬ್ರವರಿ 29 ರೊಳಗೆ ತುಂಬಿದರೆ ಬಡ್ಡಿ ಮನ್ನಾ ಕುರಿತಾಗಿ ಶನಿವಾರ (ಜ.20) ಸಹಕಾರಿ ಇಲಾಖೆ ಅಧಿಸೂಚನೆ.
ಬೆಳಗಾವಿಯಲ್ಲಿ ನಡೆದ ಚಳಗಾಲ ಅಧಿವೇಶನದಲ್ಲಿ ಬರಗಾಲ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾದ ವಿಷಯದ ಮೇಲೆ ಚರ್ಚೆ ನಡೆಯುತ್ತಿರುವಾಗ ಮುಂಗಾರು ಹಾಗೂ ಹಿಂಗಾರು ಎರಡೂ ಮಳೆಯನ್ನೇ ಕೈ ಕೊಟ್ಟ ಪರಿಣಾಮ ರೈತ ಸಂಕಷ್ಟದಲ್ಲಿದ್ದಾನೆ. ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಅದರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.
ಆದರೆ ಬಡ್ಡಿ ಮನ್ನಾದ ಘೋಷಣೆ ಮಾಡಿ ತಿಂಗಳಾದರೂ ಆದೇಶ ಮಾತ್ರ ಹೊರ ಬೀಳದೇ ಹಾಗೆ ಮುನ್ನೆಡೆಸಿಕೊಂಡು ಬರಲಾಗಿತ್ತು. ಆದರೆ ಬಡ್ಡಿ ಮನ್ನಾ ಕುರಿತಾಗಿ ಸರ್ಕಾರದಿಂದ ಇನ್ನೂ ಹೊರ ಬೀಳದ ಆದೇಶ ಎಂಬುದಾಗಿ ಕಳೆದ ಜ. 13 ರಂದು ಉದಯವಾಣಿ ಯಲ್ಲಿ ವಿಶೇಷ ವರದಿ ಮಾಡಲಾಗಿತ್ತು.
ವರದಿ ನಂತರ ಎಚ್ಚೆತ್ತುಕೊಂಡ ಸರ್ಕಾರ ಶನಿವಾರ ಜ.20 ರಂದು ಆದೇಶ ಹೊರಡಿಸಿದೆ. ಸಹಕಾರಿ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಎ.ಸಿ. ದಿವಾಕರ ಅಧಿಸೂಚನೆ ಹೊರಡಿಸಿದ್ದಾರೆ.
ಬರಗಾಲ ಹಿನ್ನೆಲೆಯಲ್ಲಿ ಜತೆಗೆ ತಮ್ಮ ಒತ್ತಾಯದ ಮೇರೆಗೆ ಸರ್ಕಾರ ಬಡ್ಡಿ ಮಾಡಿದ್ದು, ರೈತರು ಸಕಾಲಕ್ಕೆ ಸಾಲದ ಅಸಲನ್ನು ಸಂಪೂರ್ಣವಾಗಿ ತುಂಬಿ ಬಡ್ಡಿ ಮನ್ನಾದ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ನ ಅಧ್ಯಕ್ಷ ಸೋಮಶೇಖರ ಗೋನಾಯಕ ಕೋರಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.