ಸರ್ಕಾರಿ ಕಾಲೇಜು ಅಧ್ಯಾಪಕರ ಹುದ್ದೆಗೆ ಇಲ್ಲೇ ಕೌನ್ಸೆಲಿಂಗ್‌ ಮಾಡಿ


Team Udayavani, Apr 26, 2017, 3:42 PM IST

gul5.jpg

ಕಲಬುರಗಿ: ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ಪದವಿ ಕಾಲೇಜುಗಳಲ್ಲಿನ ಖಾಲಿ ಇರುವ ಅಧ್ಯಾಪಕರ ಹುದ್ದೆಗಳ ಭರ್ತಿ ಹಾಗೂ ವರ್ಗಾವಣೆಗೆ ಕಲಬುರಗಿಯಲ್ಲೇ ಕೌನ್ಸೆಲಿಂಗ್‌ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೈದ್ರಾಬಾದ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘ ಆಗ್ರಹಿಸಿದೆ. 

ಕಾಲೇಜು ಶಿಕ್ಷಣ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು, ಕೌನ್ಸೆಲಿಂಗ್‌ಗಾಗಿ ಬೆಂಗಳೂರಿಗೆ ಹೋಗಿ ಬರುವುದು ಬೇಸಿಗೆ ದಿನಗಳಲ್ಲಿ ಕಷ್ಟ ಸಾಧ್ಯ. ಆದ್ದರಿಂದ ಕಲಬುರಗಿಯಲ್ಲಿಯೇ ನಡೆಸಿ ಎಂದು ಒತ್ತಾಯಿಸಿದ್ದಾರೆ. ಈಗಾಗಲೇ ಕಾಲೇಜು ಶಿಕ್ಷಣ ಇಲಾಖೆ ಅಧ್ಯಾಪಕರ ವರ್ಗಾವಣೆಗೆ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ.

ಇದರಿಂದ ಹಲವಾರು ಗೊಂದಲಗಳಿಗೆ ಅವಕಾಶ ಮಾಡಿಕೊಟ್ಟಂತಾಗಿದೆ. ಒಂದೇ ಕಡೆ ನಿರ್ದಿಷ್ಟ ಸೇವೆ ಸಲ್ಲಿಸಿದ ಅವಧಿಧಿ ಪ್ರಕಟಿಸದೆ ಸತತ ಸೇವೆ ಎಂದು ನಮೂದಿಸಿ ಗೊಂದಲ ಸೃಷ್ಟಿಸಿದೆ. ಅದರ ಬದಲಾಗಿ ಒಂದೇ ಕಡೆ ಎಷ್ಟು ವರ್ಷ ಸೇವೆ ಸಲ್ಲಿಸಿದ ಅಧ್ಯಾಪಕರು ವರ್ಗಾವಣೆಗೆ ಅರ್ಹರು ಎನ್ನುವುದರ ಬಗ್ಗೆ ಇಲಾಖೆ ನಿಖರ ಮಾಹಿತಿ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ. 

ಇಡೀ ವರ್ಗಾವಣೆ ಕಡ್ಡಾಯ ಹಾಗೂ ಕೋರಿಕೆ ಎಂದು ವರ್ಗೀಕರಿಸಿರುವುದು ಸಮಂಜಸವಾಗಿಲ್ಲ. ಕರ್ನಾಟಕದಲ್ಲಿರುವ ಒಟ್ಟು 412 ಪದವಿ ಕಾಲೇಜುಗಳನ್ನು ಎ.ಬಿ.ಸಿ ಎಂದು ಮೂರು ವಲಯಗಳಾಗಿ ವರ್ಗೀಕರಿಸಿರುವುದು ಅವೈಜ್ಞಾನಿಕ ಅಷ್ಟೇ ಅಲ್ಲ ಅಸಾಂವಿಧಾನಿಕವಾಗಿದೆ. ಕಾಲೇಜುಗಳನ್ನು ಎಬಿಸಿ ಎಂದು ವರ್ಗೀಕರಿಸುವಾಗ ಸಮರ್ಪಕ ಮಾನದಂಡ ಅನುಸರಿಸಿಲ್ಲ. 

ಆದ್ದರಿಂದ ಅವೈಜ್ಞಾನಿಕವಾಗಿ ವರ್ಗೀಕರಿಸಿದ ಮೂರು ವಲಯಗಳನ್ನು ರದ್ದುಪಡಿಸಬೇಕೆಂದು ಅಧ್ಯಾಪಕರ ಸಂಘವು ಈಗಾಗಲೇ ಹಲವು ಭಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ದೂರಿದ್ದಾರೆ. ಒಂದೇ ವಲಯದಲ್ಲಿ ಐದು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಕಡೆ ಸೇವೆ ಸಲ್ಲಿಸಿದ ಅಧ್ಯಾಪಕರನ್ನು ಸಾರ್ವತ್ರಿಕ ವರ್ಗಾವಣೆಗೆ ಅರ್ಹರೆಂದು ಪರಿಗಣಿಸಿ ಅವರ ಹುದ್ದೆಯನ್ನು ಖಾಲಿ ಎಂದು ಪ್ರಕಟಿಸಬೇಕು.

ಪ್ರತಿವರ್ಷ ವರ್ಗಾವಣೆಗೆ ಅನಗತ್ಯ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ಅಧ್ಯಾಪಕರ ಮಕ್ಕಳ ಶಿಕ್ಷಣ ಹಾಗೂ ಉನ್ನತ ಶಿಕ್ಷಣದ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಸಂವಿಧಾನದ 371(ಜೆ) ತಿದ್ದುಪಡಿಯಾಗಿ ಮೂರು ವರ್ಷ ಕಳೆದರೂ ಕಾಲೇಜು ಶಿಕ್ಷಣ ಇಲಾಖೆ ಸ್ಥಳೀಯ ವೃಂದ ರಚಿಸದೆ ಇರುವುದು ಹೈದ್ರಾಬಾದ ಕರ್ನಾಟಕದ ಬಗ್ಗೆ ಇಲಾಖೆ ಹೊಂದಿರುವ ತಾರತಮ್ಯ ಧೋರಣೆ ತೋರುತ್ತದೆ.

ಇದನ್ನು ಅಧ್ಯಾಪಕರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. ಹೈದ್ರಾಬಾದ ಕರ್ನಾಟಕ ಪ್ರದೇಶದ ಅಧ್ಯಾಪಕರ ವರ್ಗಾವಣೆಗೆ ಕರ್ನಾಟಕ ಆಡಳಿತ ನ್ಯಾಯ ಪೀಠ (ಕೆಎಟಿ) ನೀಡಿರುವ ತಡೆಯಾಜ್ಞೆ  ಶೀಘ್ರವೇ ತೆರವುಗೊಳಸಬೇಕು. ಹೈಕ ಹೊರತು ಪಡಿಸಿ ಇರುವ ಶೇ.8ರಷ್ಟು ಹುದ್ದೆಗಳಗೆ ಹೈದ್ರಾಬಾದ ಕರ್ನಾಟಕದವರನ್ನು ವರ್ಗಾವಣೆ ಮಾಡಬೇಕು. 

ಕೌನ್ಸೆಲಿಂಗ್‌ ನಡೆಸುವ ದಿನಾಂಕ, ಸ್ಥಳ ಮತ್ತು ಸ್ಪಷ್ಟ ಮಾರ್ಗದರ್ಶಿ ಸೂತ್ರಗಳನ್ನು ಮುಂಚಿತವಾಗಿ ಪ್ರಕಟಿಸಿ ಅಧ್ಯಾಪಕರಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಬೇಕು. ಆದ್ದರಿಂದ ವಿಭಾಗೀಯ ಕೇಂದ್ರವಾದ ಕಲಬುರಗಿಯಲ್ಲೇ ಹೈದ್ರಾಬಾದ ಕರ್ನಾಟಕ ಭಾಗದ ಕಾಲೇಜು ಅಧ್ಯಾಪಕರ ವರ್ಗಾವಣೆಗೆ ಕೌನ್ಸೆಲಿಂಗ್‌ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಅಧ್ಯಾಪಕರ ಸಂಘದ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ, ಕಾರ್ಯದರ್ಶಿ ಡಾ| ಶ್ರೀಮಂತ ಹೋಳ್ಕರ್‌, ಡಾ| ಮಲ್ಲಿಕಾರ್ಜುನ ಶೆಟ್ಟಿ, ಡಾ| ಚಿನ್ನಾ ಆಶಪ್ಪ, ಡಾ| ನಾಗಪ್ಪ ಗೋಗಿ, ಪ್ರೊ| ಮಹಮದ್‌ ಯೂನುಸ್‌, ಡಾ| ನುಝಹತ್‌ ಫಾತಿಮಾ, ಪ್ರೊ| ರವಿ ನಾಯಕ, ಡಾ| ಪ್ರಭುಶೆಟ್ಟಿ , ಗುರುಪಾದಯ್ಯ ಮಠಪತಿ ಮತ್ತಿತರರು ಈ ಸಂದರ್ಭದಲ್ಲಿದ್ದರು.  

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

5-chincholi

Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.