24 ಗಂಟೆಯಲ್ಲಿ ಕೋವಿಡ್‌ ವರದಿ : ಡಿಸಿ


Team Udayavani, May 7, 2021, 1:33 PM IST

ಮನಬವಚಸಮನಬವಚಷ

ಆಳಂದ : ಜಿಲ್ಲೆಯಲ್ಲಿ ಇನ್ಮುಂದೆ ಕೋವಿಡ್‌ ತಪಾಸಣೆ ವರದಿಯನ್ನು 24 ಗಂಟೆಯಲ್ಲಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜೋತ್ಸ್ಯಾ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಅವರು, ಕೋವಿಡ್‌ ಸೋಂಕಿತ ರೋಗಿಗಳಿಗೆ ನೀಡಲಾಗುವ ಚಿಕಿತ್ಸೆ ಪರಿಶೀಲಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರಿಗೂ ಕೋವಿಡ್‌ ತಪಾಸಣೆ ಮಾಡುವುದಿಲ್ಲ. ಅಗತ್ಯ ಎನಿಸಿದವರಿಗೆ ಅಥವಾ ಶಂಕಿತ ರೋಗಿಗಳಿಗೆ ಮಾತ್ರ ಕೋವಿಡ್‌ ತಪಾಸಣೆ ಕೈಗೊಳ್ಳಲು ಪ್ರಥಮಾದ್ಯತೆ ನೀಡುವಂತೆ ಮೌಖೀಕ ಆದೇಶ ನೀಡಲಾಗಿದೆ.

ತಪಾಸಣೆ ಕೈಗೊಂಡ 24 ಗಂಟೆಯಲ್ಲಿ ವರದಿ ಕೈಸೇರಲಿದೆ ಎಂದು ಹೇಳಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಿಲ್ಲ. ಸೋಂಕಿತರು ಮೃತಪಟ್ಟಿದ್ದಕ್ಕೆ ಬೇರೆಯೇ ಕಾರಣಗಳಿವೆ.

ರೋಗಿಗಳಿಗೆ ಆಕ್ಸಿಜನ್‌ ಸಿಲಿಂಡರ್‌ಗಳ ಕೊರತೆ ಆಗದಂತೆ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಅಧಿ ಕಾರಿಗಳಿಗೆ ಸೂಚಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಎಲ್ಲ ಸೋಂಕಿತ ರೋಗಿಗಳಿಗೂ ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಅಗತ್ಯವಿಲ್ಲ. ಈ ಕುರಿತು ತಜ್ಞ ವೈದ್ಯರು ನಿರ್ಧರಿಸಿ, ಅಗತ್ಯವೆನಿಸಿದರೆ ಮಾತ್ರ ನೀಡುತ್ತಾರೆ ಎಂದು ಹೇಳಿದರು. ಆಸ್ಪತ್ರೆ ವೈದ್ಯಾಧಿ ಕಾರಿ ಚಂದ್ರಕಾಂತ ನರಬೋಳಿ ಅವರು, ಸಿಲಿಂಡರ್‌ ಕೊರತೆ ಇದ್ದು ಪೂರೈಸಬೇಕು ಎಂದಾಗ 10 ಸಿಲಿಂಡರ್‌ ಕಳುಹಿಸಲಾಗುವುದು ಎಂದು ಜಿಲ್ಲಾ ಧಿಕಾರಿಗಳು ತಿಳಿಸಿದರು.

ಸಿಲಿಂಡರ್‌ ಹಾಗೂ ಶವ ಸಾಗಿಸಲು ವಾಹನ ವ್ಯವಸ್ಥೆ ಕಲ್ಪಿಸುವಂತೆ ಹಾಜರಿದ್ದ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಮಸ್ಯೆ ಆಲಿಕೆ: ಆಸ್ಪತ್ರೆಯಲ್ಲಿ ಜಿಲ್ಲಾಧಿ ಕಾರಿಗಳನ್ನು ಭೇಟಿ ಮಾಡಿದ ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್‌. ಕೊರಳ್ಳಿ, ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ ತಪಾಸಣೆ ಕೈಗೊಂಡವರ ವರದಿಯನ್ನು 24 ಗಂಟೆಯಲ್ಲಿ ನೀಡಬೇಕು.

ಈ ಹಿಂದೆ ತಪಾಸಣೆ ವರದಿ ಬರಲು 10 ದಿನ ತೆಗೆದುಕೊಂಡಿದ್ದರಿಂದ ಸಾರ್ವಜನಿಕರಿಗೆ ತೊಂದರೆ ಆಗಿದೆ. ಕೊಡಲಹಂಗರಗಾದಲ್ಲಿ ಇಬ್ಬರ ಸ್ಥಿತಿ ಗಂಭೀರವಿದೆ. ಇನ್ನು ನಾಲ್ವರು ಶಂಕಿತರು ಬಳಲುತ್ತಿದ್ದಾರೆ. ಸಂಬಂಧಿತ ಅಧಿಕಾರಿಗಳಿಗೆ ಗ್ರಾಮಕ್ಕೆ ಬರಲು ತಿಳಿಸಿದರೂ ಬರುತ್ತಿಲ್ಲ ಎಂದು ಅಳಲು ತೋಡಿಕೊಂಡರು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಜರಿದ್ದ ಅ ಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯೊಬ್ಬರಿಗೆ ಆಕ್ಸಿಜನ್‌ ಇಲ್ಲ ಎಂದು ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕುತ್ತಿರುವುದನ್ನು ಗಮನಿಸಿ ಜಿಲ್ಲಾಧಿ ಕಾರಿಗಳು ಕೂಡಲೇ ದಾಖಲಿಸಿಕೊಳ್ಳಲು ವೈದ್ಯಾಧಿಕಾರಿಗೆ ಸೂಚಿಸಿದರು. ನಂತರ ಕೋವಿಡ್‌ ರೋಗಿಗಳ ವಾರ್ಡ್‌ಗೆ ಭೇಟಿ ನೀಡಿದ ಜಿಲ್ಲಾ ಧಿಕಾರಿಗಳು ರೋಗಿಗಳ ಮತ್ತು ಅಲ್ಲಿನ ವ್ಯವಸ್ಥೆ ಕುರಿತು ಮಾಹಿತಿ ಕಲೆಹಾಕಿದರು. ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ, ಇಒ ನಾಗಮೂರ್ತಿ ಶೀವಲಂತ, ಆರೋಗ್ಯಾ ಧಿಕಾರಿ ಡಾ| ಜಿ. ಅಭಯಕುಮಾರ ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.