Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ


Team Udayavani, Oct 15, 2024, 12:34 PM IST

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

ಕಲಬುರಗಿ: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದ್ದು, ಕದ್ದ ಮಾಲನ್ನ ವಾಪಸ್ ಕೊಟ್ಟರೆ ಅದನ್ನ ಸಾಕ್ಷಿಯಾಗಿ ಪರಿಗಣಿಸ್ತಾರೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ನಿವೇಶನ ವಾಪಸ್ಸು ಕೊಟ್ಟರೆ ಖರ್ಗೆ ಒಡೆತದನ ಸಿದ್ದಾರ್ಥ ಟ್ರಸ್ಟ್ ಗೆ ನೀಡಲಾದ ಜಮೀನು ವಾಪಸ್ ಕೊಟ್ಟಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.

ವಿಜಯಪುರಕ್ಕೆ ತೆರಳು ಮುನ್ನ ಇಲ್ಲಿನ ವಿಮನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಸಾಕ್ಷಿ ಬಗ್ಗೆ ಮಾತಾಡುವ ಇವರು ಒಂದು ಕೇಸ್ ವಾಪಸ್ ಪಡೆಯಲು ಒಬ್ಬ ವ್ಯೆಕ್ತಿಗೆ ಎಷ್ಟು ಕೊಟ್ಟಿದ್ದಾರೆ ಅಂತಾ ಗೊತ್ತಿದೆ. ಸಮಯ ಬಂದಾಗ ಅದನ್ನ ಬಹಿರಂಗಪಡಿಸುತ್ತೇನೆ. ಕೇಸ್ ವಾಪಸ್ ಪಡೆಯಲು ಯಾವ ಹಂತಕ್ಕೆ ಹೋಗಿದ್ದಾರೆ ಎಂಬುದು ಸಹ ಗೊತ್ತಿದೆ. ನ್ಯಾಯಾಂಗ ವ್ಯವಸ್ಥೆಯಲ್ಲೂ ಕೂಡ ಖರೀದಿ ಮಾಡಬಹುದು ಅಂತಾ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ: ತಮ್ಮ ಮೇಲೆ ಯಾವ ಕೇಸೂ ಇಲ್ಲ. ಸಚಿವ ಸಂಪುಟ ಸಭೆಯಲ್ಲಿ ತಮ್ಮ ಮೇಲಿನ ಯಾವ ಕೇಸೂ ವಾಪಸ್ ಪಡೆದಿಲ್ಲ. ತಮ್ಮ ಮೇಲೆ ಯಾವ ಕೇಸು ಇದೆ ಹಾಗೂ ಯಾವ ಕೇಸು ವಾಪಸ್ಸು ಪಡೆಯಲಾಗಿದೆ ಎಂಬುದನ್ನು ಹೇಳಲಿ. ತಮ್ಮ ಮೇಲಿನ ಕೇಸಿನ ಸಂಬಂಧ ದಾಖಲೆ ತೋರಿಸಿದರೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಸಿ.ಟಿ ರವಿ ಸವಾಲು ಹಾಕಿದರಲ್ಲದೇ ಸಚಿವರಾದ ಪ್ರಿಯಾಂಕ್ ಖರ್ಗೆ, ಎಚ್. ಕೆ. ಪಾಟೀಲ್ ಸವಾಲಾಗಿ ಸ್ವೀಕರಿಸಲಿ. ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ತಮ್ಮ ಮೇಲಿನ ಕೇಸು ರುಜುವಾತು ಮಾಡಬೇಕು. ಇಲ್ಲದಿದ್ದರೆ ಜನೆತೆ ಎದುರು ಕ್ಷಮೆ ಕೇಳಿ ರಾಜೀನಾಮೆ ಕೊಡಬೇಕು. ತಮ್ಮ ಮೇಲೆ ಕೋಲಾರ,ಚಿಕ್ಕಬಳ್ಳಾಪುರದಲ್ಲಿ ಯಾವುದೇ ಕೇಸ್ ಇರಲಿಲ್ಲ ಎಂದು ಸಿ.ಟಿ ರವಿ ಸ್ಪಷ್ಠಪಡಿಸಿದರು.

ಪ್ರಿಯಾಂಕ್ ಖರ್ಗೆ ಸರ್ವಜ್ಞ ?: ತಮ್ಮ ಮೇಲೆ ಯಾವ ಕೇಸ್ ದಾಖಲಾಗಿದೆ ಎಂಬುದರ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೇ ಕೇಳಬೇಕು. ಯಾಕಂದರೆ ಪ್ರಿಯಾಂಕ್ ಖರ್ಗೆ ಸರ್ವಜ್ಞ ಅಲ್ವಾ? ಎಂದು ಖಾರವಾಗಿ ಪ್ರಶ್ನಿಸಿದ ಅವರು, ಇವರು ಸಚಿವ ಸಂಪುಟದಲ್ಲಿ ಉಪ್ಪಿಟ್ಟು ಕಾಫಿ ತಿಂದು ಬರುತ್ತಿದ್ದರೆ. ಸಬ್ಜೆಕ್ಟ್ ಓದೋದಿಲ್ಲ , ಓದೊದೆ ತಲೆ ಅಲ್ಲಾಡಿಸಿ ಬರ್ತಾರೆ. ನನ್ನ ಮೇಲೆ ಕೇಸಿದೆ ಎಂದು ಯಾವ ಅರ್ಜಿ ಕೊಟ್ಟಿಲ್ಲ. ಯಾವ ಕೇಸ್ ದಾಖಲು ಆಗಿರಲಿಲ್ಲ. ಇದು ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಸವಾಲು ಎಂದು ಗುಡುಗಿದರು.

ಹಿಜಾಬ್ ಪರ ಹೋರಾಟದ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಪ್ರಮುಖವಾಗಿ ವಾಲ್ಮೀಕಿ ಹಗರಣದಲ್ಲಿನ ಅಕ್ರಮ ಹಣ ಚುನಾವಣೆಗೆ ಬಳಕೆ ಆಗಿದೆ ಎಂಬುದು ಹಾಗೂ ಮುಡಾ ಕೇಸ್ ತನ್ನ ಕುತ್ತಿಗೆಗೆ ಸುತ್ತಿಕೊಳ್ಳುತ್ತೆ ಅಂತಾ ಸಿಎಂಗೆ ಗೊತ್ತಿದೆ. ಇದೆಲ್ಲವನ್ನ ವಿಷಯಾಂತರ ಮಾಡೋದಕ್ಕೆ ಶತಪ್ರಯತ್ನ ಮಾಡಲಾಗುತ್ತಿದೆ. ಅದರ ಅಂಗವಾಗಿ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದವರ ಪರ ಇರುವುದನ್ನು ಆಂಜನೇಯ ಮೇಲೆ ಕಲ್ಲು ತೂರಾಟ ಮಾಡಿದವರ ಪರ ಇದ್ದೇವೆ ಎಂಬುದಾಗಿ ಹೇಳುತ್ತಿದ್ದಾರೆ. ಕುಕ್ಕರ್ ಬ್ಲಾಸ್ಟ್ ಮಾಡಿದವರು ಬ್ರದರ್ಸ್ ಅಂತಾ ಕರೆದವರು ಯಾರು. ಸಿಸಿಟಿವಿ ಪೋಟೇಜ್‌ದಿಂದ ದೇವಸ್ಥಾನ ಮೇಲೆ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿರೋದು ಬೆಳಕಿಗೆ ಬಂದಿದೆ. ಆದರೆ ಮುಖ್ಯಮಂತ್ರಿ ಆಗಿ ತಾವೇ ಅಮಾಯಕರು ಎಂಬುದಾಗಿ ಹೇಳುತ್ತಿದ್ದಾರೆ. ಅಧಿಕಾರ ತಮ್ಮ ಕೈಯಲ್ಲಿದೆ. ನೀವೆ ಲಾಯರ್ ಆಗಿದ್ದೀರಿ. ಮುಡಾ, ವಾಲ್ಮೀಕಿ ಹಗರಣ ಅಷ್ಟು ಸುಲಭವಾಗಿ ಬಿಡೋದಿಲ್ಲ ಎಂದು ಅವರಿಗೆ ಗೊತ್ತಿದೆ ಎಂದರು.

ವಿಜಯಪುರದಲ್ಲಿ ವಕ್ಫ ಜಮೀನು ವಿಚಾರದ ಹೋರಾಟದಲ್ಲಿ ಭಾಗಿಯಾಗಿರುವುದು ನ್ಯಾಯಕ್ಕಾಗಿ. ಕೋರ್ಟ್ ಸ್ಪಷ್ಟವಾಗಿ ಹೇಳಿದೆ ಗ್ರ‍್ಯಾಂಟ್ ಕೊಟ್ಟಿರಬೇಕು ಇಲ್ಲ ಖರಿದಿ ಮಾಡಿರಬೇಕು ಇಲ್ಲ ದಾನ ಕೊಟ್ಟಿರಬೇಕು. ಇದು ಮೂರು ಆಗದೆ ಇದ್ದಾಗ ಎಲ್ಲವು ನಂದೆ ಅಂದ್ರೆ ಕಾಲಲ್ಲಿರೋದು ಕೈಯಲ್ಲಿ ತೆಗೆದುಕೊಳ್ಳತ್ತಾರೆ ಎಂದು ಸಿ.ಟಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

ಟಾಪ್ ನ್ಯೂಸ್

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

11

BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್‌ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

Exam

Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

6

Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ

5

karkala ತಾಲೂಕು ಪಂಚಾಯತ್ ಹಳೆಯ ಕಟ್ಟಡವೀಗ ಪಾಳು ಬಂಗಲೆ!

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.