![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 1, 2017, 12:50 PM IST
ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿರುವ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಸಾವಿರಾರು ಕಾರ್ಯಕರ್ತರು, ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕೂಡಲೆ ಆರೋಪಿಗಳನ್ನು ಬಂಧಿಧಿಸುವಂತೆ ಆಗ್ರಹಿಸಿದರು.
ನಗರದ ಎಂಎಸ್ಕೆಮಿಲ್ ಪ್ರದೇಶದ ದೀಕ್ಷಾ ಮೈದಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಈಶಾನ್ಯ ವಲಯ ಪೊಲೀಸ್ ಮಹಾ ನಿರೀಕ್ಷಕರ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಐಜಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ಮಹಾಪರಿನಿರ್ವಾಣ ದಿನದಂದೆ ಡಾ| ಅಂಬೇಡ್ಕರ್ ಕಟ್ಟೆಯನ್ನು ಧ್ವಂಸಗೊಳಿಸಿದ್ದು, ಧ್ವಜಸ್ತಂಭ ಕಿತ್ತು ಹಾಕಲಾಗಿದೆ.
ಆರೋಪಿಗಳನ್ನು ಬಂಧಿಸುವ ಬದಲು 27 ಜನ ದಲಿತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಆಳಂದ ತಾಲೂಕಿನ ಧುತ್ತರಗಾಂವ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ನಾಮಫಲಕ ಕಿತ್ತು ಹಾಕಿ ಅವಮಾನಗೊಳಿಸಿದ್ದನ್ನು ಖಂಡಿಸಿ ಪ್ರತಿಭಟಿಸಿದ ದಲಿತರ ಮೇಲೆ ಲಾಠಿ ಪ್ರಹಾರ ಮಾಡಿ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ತಳ್ಳಲಾಗಿದೆ.
ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕಕ್ಕೆ ಅವಮಾನಗೊಳಿಸಲಾಗಿದೆ. ನೀಲಿ ಧ್ವಜ, ಪಂಚಶೀಲ ಧ್ವಜ ಕಿತ್ತುಹಾಕಲಾಗಿದೆ. ಜೇವರ್ಗಿ ತಾಲೂಕಿನ ಮಂದೇವಾಲ್ ಗ್ರಾಮದಲ್ಲಿ ಸವರ್ಣಿಯರು ಹಲ್ಲೆ ನಡೆಸಿದ್ದರೂ ಆರೋಪಿಗಳನ್ನು ಬಂಧಿಸಿಲ್ಲ.
ಅದೇ ರೀತಿ ಜೇವರ್ಗಿಯಲ್ಲಿ ಗಣಪತಿ ಕೋಬಾಳ್ ಎನ್ನುವ ದಲಿತ ಯುವಕನ ಹತ್ಯೆ ಪ್ರಕರಣ, ಸಂಗಾವಿ ಗ್ರಾಮದ ಮಾರುತಿ ಶಿವಲಿಂಗಪ್ಪ ಹತ್ಯೆ ಪ್ರಕರಣ, ಗೋಳಾ ಗ್ರಾಮದ ಶಾಂತಪ್ಪ ಹತ್ಯೆ ಪ್ರಕರಣ ಬೇಧಿಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಘೋಷಣೆಗಳನ್ನು ಕೂಗಿದರು.
ದಲಿತರ ಮೇಲಿನ ಹಲ್ಲೆ ತಡೆಯಲು ಹಾಗೂ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲತೆ ಹೊಂದಿರುವ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಹಾಗೂ ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ, ಧ್ವಂಸಗೊಳಿಸಿದ ಅಂಬೇಡ್ಕರ್ ಕಟ್ಟೆ, ನೀಲಿ ಧ್ವಜ, ಪಂಚಶೀಲ ಧ್ವಜಗಳನ್ನು ಸರ್ಕಾರವೇ ಪುನರ್ ಪ್ರತಿಷ್ಠಾಪಿಸುವಂತೆ, ಎಸ್ಸಿ, ಪಿ/ಟಿ ವಿಶೇಷ ಘಟಕ ಯೋಜನೆಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಸಂಪೂರ್ಣ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಮೈಸೂರಿನ ಗುರುಲಿಂಗಪೆದ್ದಿ ಸಂಸ್ಥಾನಮಠದ ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯ ಮುಖಂಡರಾದ ಡಾ| ವಿಠಲ್ ದೊಡ್ಡಮನಿ, ಬಸಣ್ಣ ಸಿಂಗೆ, ಅರ್ಜುನ್ ಭದ್ರೆ, ಎ.ಬಿ. ಹೊಸಮನಿ, ಸೂರ್ಯಕಾಂತ್ ನಿಂಬಾಳಕರ್, ಪ್ರಕಾಶ್ ಮೂಲಭಾರತಿ, ದತ್ತಾತ್ರೇಯ್ ಇಕ್ಕಳಕಿ, ಸಚಿನ್ ಫರತಾಬಾದ ಹಾಗೂ ಮುಂತಾದವರು ಪಾಲ್ಗೊಂಡಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.