![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 17, 2024, 2:55 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಗೆ ಕೇಂದ್ರದಿಂದಲೂ ಅನುದಾನ ನೀಡುವಂತೆ ಕೋರಿ ಕೇಂದ್ರದ ಬಳಿ ನಿಯೋಗ ಹೋಗಲಾಗುವುದು ಎಂದು ಮಂಡಳಿ ಅಧ್ಯಕ್ಷ ಡಾ. ಅಜಯಸಿಂಗ್ ಹೇಳಿದರು.
ಸಂಪುಟ ಸಭೆ ಮುಂಚೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಕೆಕೆಆರ್ ಡಿಬಿ ಗೆ ಕೇಂದ್ರದಿಂದಲೂ ಅನುದಾನ ದೊರಕುವ ನಿಟ್ಟಿನಲ್ಲಿ ನಿಯೋಗ ಹೋಗಬೇಕೆಂದು ಪ್ರಸ್ತಾಪಿಸಲಾಗಿದ್ದಕ್ಕೆ ಸಿಎಂ ಸಮ್ಮತಿಸಿದ್ದು, ಕೇಂದ್ರದ ಬಳಿ ನಿಯೋಗ ಹೋಗೋಣ ಎಂದಿದ್ದಾರೆ ಎಂದು ಡಾ. ಅಜಯಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ ಸರ್ಕಾರದಿಂದ 5000 ಕೋ.ರೂ ಅನುದಾನ ನೀಡುವಂತೆ ಕೇಂದ್ರದಿಂದಲೂ ಅನುದಾನ ನೀಡಿದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.
371 ಜೆ ವಿಧಿ ತಿದ್ದುಪಡಿ ಜಾರಿಯಾಗಿದ್ದು ಕೇಂದ್ರ ಸರ್ಕಾರದಿಂದ. ಹೀಗಾಗಿ ಕೇಂದ್ರ ಸರ್ಕಾರದಿಂದಲೂ ಅನುದಾನ ದೊರಕುವುದು ಸಮಂಜಸವಾಗಿದೆ. ಕೇಂದ್ರದ ಬಳಿ ನಿಯೋಗ ಹೋಗಬೇಕೆಂಬುದು ಬಹಳ ದಿನಗಳ ಪ್ರಸ್ತಾಪವಿತ್ತು. ಸಚಿವ ಸಂಪುಟದಲ್ಲಿ ಕೇಂದ್ರದಿಂದಲೂ ಅನುದಾನ ನೀಡುವಂತೆ ವಿಷಯ ಪ್ರಸ್ತಾಪ ಜತೆಗೆ ನಿಯೋಗ ಹೋಗುವ ಕುರಿತಾಗಿ ಸಿಎಂ ಸ್ಪಷ್ಟ ಭರವಸೆ ನೀಡಿದ್ದಾರೆ ಎಂದು ಡಾ.ಅಜಯಸಿಂಗ್ ವಿವರಣೆ ನೀಡಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.