ರಟಕಲ್‌ ಮಠದ ಅಭಿವೃದ್ದಿಗೆ ಬದ್ದ : ಡಾ| ಅವಿನಾಶ್


Team Udayavani, Aug 30, 2022, 2:37 PM IST

6-develop

ಕಲಬುರಗಿ: ಮುರುಘೇಂದ್ರ ಶಿವಯೋಗಿಗಳ ವಿರಕ್ತ ಮಠದ ಕುರಿತು ನನಗೆ ಅಪಾರ ಗೌರವ ಇದೆ. ನನ್ನ ಅಧಿಕಾರದ ಅವಧಿ ಮುಗಿಯುದರೊಳಗೆ ಮಠದ ಶ್ರೇಯೋಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಮತ್ತು ಅನುದಾನವನ್ನು ಬಿಡುಗಡೆ ಮಾಡುವುದಾಗಿ ಚಿಂಚೋಳಿ ಶಾಸಕ ಡಾ| ಅವಿನಾಶ್‌ ಜಾಧವ್‌ ಭರವಸೆ ನೀಡಿದರು.

ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿ ಮುರುಗೇಂದ್ರ ಶಿವಯೋಗಿಗಳ ವಿರಕ್ತ ಮಠ (ದೊಡ್ಡ ಮಠ)ದಲ್ಲಿ ಶ್ರಾವಣ ಮಾಸ ಅಂಗವಾಗಿ ಶ್ರೀಮಠದ ಎಂಟನೇ ಪೀಠಾಧಿಪತಿ ಸಿದ್ದರಾಮ ಮಹಾಸ್ವಾಮಿಗಳ ಮೌನ ಅನುಷ್ಠಾನ ಮಹಾಮಂಗಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಬಿಜೆಪಿ ಸರಕಾರ ಮಠ, ಮಂದಿರಗಳ ಬೆಳವಣಿಗೆಗೆ ವಿಶೇಷ ಆಸಕ್ತಿಯನ್ನು ವಹಿಸುತ್ತದೆ. ಆದ್ದರಿಂದ ಮಠದ ಕೌಂಪೌಂಡ್‌ ಗೋಡೆ ನಿರ್ಮಾಣ, ಅಲ್ಲದೆ, ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಸಿದ್ದನಿದ್ದೇನೆ ಎಂದ ಅವರು, ಮಠಗಳು ಜನರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುವುದರಿಂದ ಜನರು ಹೆಚ್ಚು ಭಕ್ತಿ ಇಟ್ಟುಕೊಂಡಿದ್ದಾರೆ ಎಂದರು.

ಸಾನ್ನಿಧ್ಯ ವಹಿಸಿದ್ದ ಶ್ರೀಮಠದ ಸಿದ್ದರಾಮ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಾ, ಲೋಕಲ್ಯಾಣಾರ್ಥ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಐದು ವರ್ಷಗಳಿಂದ ವಿವಿಧ ಸ್ಥಳಗಳಲ್ಲಿ ಮೌನ ಅನುಷ್ಠಾನ ಮಾಡಿದೆ. ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಸಹ ಧರ್ಮ ಮತ್ತು ಅಧ್ಯಾತ್ಮದಿಂದ ಜೀವನ ಶುದ್ಧಿ ಆಗುತ್ತದೆ. ಸಂಸ್ಕಾರ, ವಿಶ್ವಶಾಂತಿ, ನೆಮ್ಮದಿ ತಂದುಕೊಡಲಿದೆ ಎಂದು ಪ್ರತಿಪಾದಿಸಿದರು.

ಭರತನೂರು ಶ್ರೀಮಠದ ಚಿಕ್ಕ ಗುರುನಂಜೇಶ್ವರ ಹಾಗೂ ರಟಕಲ್‌ ದ ನಡುವಿನ ಮಠದ ರೇವಣಸಿದ್ದ ಶ್ರೀಗಳು ಹಾಗೂ ನಾಗೂರು ಶ್ರೀಮಠದ ಅಲ್ಲಮಪ್ರಭು , ಚಂದನಕೇರಾ ಹಾಗೂ ಡೊಣ್ಣುರು ಶ್ರೀಗಳ ನೇತೃತ್ವದಲ್ಲಿ ಮಹಾಮಂಗಲ ಕಾರ್ಯ ನೆರವೇರಿತು.

ಇದೇ ವೇಳಗೆ ಶ್ರೀಮಠದಿಂದ ಪತ್ರಕರ್ತರಾದ ಭೀಮಾಶಂಕರ ಫಿರೋಜಾಬಾದ, ಸಂತೋಷ ನಾಡಗೇರಿ, ಸಂಚಾರಿ ಪೇದೆ ಅಂಬಾರಾಯ ಪೂಜಾರಿ ಮತ್ತಿತರರನ್ನು ಶ್ರೀಗಳು ಸತ್ಕರಿಸಿದರು. ಶ್ರೀಮಠದ ಕಾರ್ಯದರ್ಶಿ ಮುರುಗಯ್ಯ ಪುರಾಣಿಕ, ಹೈಕೋರ್ಟ್‌ ನಿವೃತ್ತ ನ್ಯಾಯಾ ಧೀಶ ಚನ್ನಮಲ್ಲಪ್ಪ ಬೇನಕನಳ್ಳಿ, ಮಲ್ಲಣ್ಣ.ಎ.ಭೈರಪ್ಪ, ಬಸವರಾಜ ಚೋಕಾ, ಸಿದ್ದು ಚಟ್ಟನಳ್ಳಿ ಮುಕರಂಬಾ, ಆರ್‌.ಬಿ. ಬೀಜನಳ್ಳಿ, ಮಹಾದೇವಪ್ಪ ಭೀಮಳ್ಳಿ, ಶರಣು ಸೀಗಿ, ಸಂತೋಷ ಹಂದ್ರೋಳಿ, ಮಲ್ಲು ಮುಚ್ಚಟ್ಟಿ, ರಾಘವೇಂದ್ರರಾವ್‌ ಭೈರಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.