ವನಮಹೋತ್ಸವ ಆಚರಣೆಗೆ ಸೀಮಿತ ಆಗದಿರಲಿ


Team Udayavani, Jul 26, 2022, 11:58 AM IST

6plants-‘

ಶಹಾಬಾದ: ಇತ್ತೀಚಿನ ದಿನಗಳಲ್ಲಿ ಪರಿಸರ ದಿನಾಚರಣೆ, ವನಮಹೋತ್ಸವ ಕಾರ್ಯಕ್ರಮಗಳು ಆಚರಣೆಗೆ ಮಾತ್ರ ಸೀಮಿತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ರವಿ ಚವ್ಹಾಣ ವಿಷಾದ ವ್ಯಕ್ತಪಡಿಸಿದರು.

ತಾಲೂಕಿನ ಅಲ್ದಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಸತ್ಯ ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಕುರಿತಾದ ಹಲವು ಆಚರಣೆಗಳು ಒಂದು ದಿನಕ್ಕೆ ಮಾತ್ರ ಸೀಮಿತವಾಗಿದ್ದು, ಆ ಬಳಿಕ ಇಚ್ಛಾಶಕ್ತಿಯ ಕೊರತೆಯಿಂದಾಗಿ ಪರಿಸರ ದಿನಾಚರಣೆ ತನ್ನ ಮಹತ್ವ ಕಳೆದುಕೊಂಡು ಒಂದು ರೀತಿಯಲ್ಲಿ ಒಣ ಮಹೋತ್ಸವ ಆಗುತ್ತಿದೆ ಎಂದರು.

ಸರಕಾರ, ಅರಣ್ಯ ಇಲಾಖೆ ಇಂತಹ ದಿನಾಚರಣೆಗಳ ಸಂದರ್ಭದಲ್ಲಿ ಪಕ್ಷಿ ಸಂಕುಲದ ಬಗ್ಗೆಯೂ ಚಿಂತನೆ ನಡೆಸಬೇಕಾಗಿದೆ. ಮರಗಳನ್ನೇ ನಂಬಿ ಬದುಕುವ ಪಕ್ಷಿಗಳನ್ನು ಉಳಿಸಲು ಅಕೇಶಿಯಾ, ಹೊನ್ನೆ, ಬೀಟಿ, ತೇಗದಂತಹ ಮರಗಳನ್ನು ಬೆಳೆಸುವ ಬದಲು ಅವುಗಳಿಗೆ ಆಹಾರವಾಗಬಲ್ಲ ಹಣ್ಣಿನ ಗಿಡಗಳನ್ನು ಬೆಳೆಸುವತ್ತ ಚಿಂತಿಸಬೇಕಾದ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ. ಬುದ್ಧಿಜೀವಿಯಾದ ಮನುಷ್ಯ ತನ್ನಂತೆ ಇತರ ಜೀವಿಗಳೂ ಬದುಕುವ ಹಕ್ಕನ್ನು ಹೊಂದಿವೆ ಎಂಬುದನ್ನು ಅರಿತು ವನ ಮಹೋತ್ಸವ ದಿನಾಚರಣೆಗಳ ಸಂದರ್ಭದಿಂದ ಮೊದಲುಗೊಂಡು ವರ್ಷಪೂರ್ತಿ ಪೂರಕ ವಾತಾವರಣ ನಿರ್ಮಿಸುವ ಪಣ ತೊಡಬೇಕಿದೆ ಎಂದು ಕರೆ ನೀಡಿದರು.

ಮಾಡಬೂಳ ಪೊಲೀಸ್‌ ಠಾಣೆಯ ಎಎಸ್‌ಐ ಭೀಮಾಶಂಕರ ಮಾತನಾಡಿ, ಗಿಡ-ಮರಗಳ ಮಾರಣ ಹೋಮ ಹೆಚ್ಚುತ್ತಿರುವುದರಿಂದ ಅರಣ್ಯ ಸಂಪತ್ತು ಇನ್ನಿಲ್ಲವಾಗುತ್ತಿದೆ. ಇದರಿಂದಾಗಿ ಸತತ ಬರಗಾಲ ಎದುರಿಸುವ ದುಃಸ್ಥಿತಿ ಬಂದೋದಗಿದೆ. ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕ್ಷೀಣಿಸುತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ, ಜಮೀನುಗಳಲ್ಲಿ ಸಸಿಗಳನ್ನು ನೆಟ್ಟು ಲಾಲನೆ-ಪಾಲನೆ ಮಾಡುವ ಮೂಲಕ ಅರಣ್ಯ ಸಂಪತ್ತು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸಿದರೆ, ಖಂಡಿತಾ ಬರಗಾಲ ಅಳಿಸಬಹುದಾಗಿದೆ ಎಂದರು.

ಶಾಲೆಯ ಆವರಣದಲ್ಲಿ ಸುಮಾರು 125 ಸಸಿಗಳನ್ನು ನೆಡಲಾಯಿತು. ಗ್ರಾಮದ ಜನರಿಗೆ ಹಾಗೂ ಸತ್ಯಂ ಮೈಕ್ರೋ ಫೈನಾನ್ಸ್‌ ಗ್ರಾಹಕರಿಗೆ ಸೇರಿದಂತೆ ಸುಮಾರು 300 ಸಸಿ ವಿತರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ವಿಜಯಕುಮಾರ ಪೊಲೀಸ್‌ ಪಾಟೀಲ, ಉಪಾಧ್ಯಕ್ಷ ವಜೀರ ಪಟೇಲ್‌, ಸತ್ಯ ಮೈಕ್ರೋ ಫೈನಾನ್ಸ್‌ ಸಂಸ್ಥೆಯ ಮುಖ್ಯಸ್ಥರಾದ ಶಿವಪ್ರಸಾದ, ಶಾಲೆಯ ಮುಖ್ಯಗುರುಮಾತೆ ಸಂತೋಷಿ ಕೆ.ಎಂ, ಶಿಕ್ಷಕರಾದ ಪರಶುರಾಮ ಗುತ್ತಲ್‌, ರಜಿಯಾಬೇಗಂ, ಕೌಸರ್‌ ಶಾಹೀನ್‌, ಕೀಮಿಬಾಯಿ ರಾಠೊಡ, ಕೃಷ್ಣ ಗುತ್ತೆದಾರ ಇತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.