ತೆರೆದ ಬಾವಿ ನಿರ್ಮಾಣ ಕಾಮಗಾರಿಗೆ ಚಾಲನೆ
Team Udayavani, Apr 28, 2017, 2:54 PM IST
ಆಳಂದ: ಸರ್ಕಾರದ ಯೋಜನೆಗಳಂತೆ ನಿಗದಿತ ಅವದಿಯಲ್ಲಿ ಕಾಮಗಾರಿಗಳನ್ನು ಕೈಗೊಂಡರೆ ಜನರಿಗೆ ಅನಕೂಲವಾಗುತ್ತದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ. ರಾಮಕೃಷ್ಣ ಹೇಳಿದರು.
ತಾಲೂಕಿನ ಹೊಡಲ್ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಲ್ಲಿ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ತೆರೆದ ಬಾವಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕೈಗೊಂಡು ನಂತರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ತೆರೆದ ಬಾವಿ ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ಬಾವಿ ನಿರ್ಮಾಣದಿಂದ ಹೊಡಲ್, ಜವಳಗಾ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ. ಪೈಪಲೈನ್, ವಿದ್ಯುತ್ ಸಂಪರ್ಕ ಒದಗಿಸಿ ಗ್ರಾಮದ ಜನರ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗುತ್ತದೆ ಎಂದು ಹೇಳಿದರು.
ಗ್ರಾಮದ ಇತರೆ ಸಮಸೆಗಳಿಗೂ ಬರುವ ದಿನಗಳಲ್ಲಿ ಆದ್ಯತೆ ಅನುಸಾರ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಚಿಂಚನಸೂರ ಜಿಪಂ ಸದಸ್ಯ ಶರಣಗೌಡ ಪಾಟೀಲ ಮಾತನಾಡಿ, ಗ್ರಾಮೀಣ ಮತಕ್ಷೇತ್ರದಲ್ಲಿ ಜನರ ನಾಗರಿಕ ಮೂಲಭೂತ ಸಮಸ್ಯೆಗಳಿಗೆ ಶಾಸಕ ರಾಮಕೃಷ್ಣ ಹಲವು ಯೋಜನೆಗಳಲ್ಲಿ ಅನುದಾನ ಮಂಜೂರು ಮಾಡಿಸುವ ಮೂಲಕ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ತಾಪಂ ಸದಸ್ಯ ಗೋರಕನಾಥ ಸಜ್ಜನ, ಕಮಲಾನಗರ ಗ್ರಾಪಂ ಮಾಜಿ ಅಧ್ಯಕ್ಷ ಸಂಜೀವಕುಮಾರ ಶಟ್ಟಿ, ಶ್ರೀಚಂದ ಗ್ರಾಪಂ ಅಧ್ಯಕ್ಷ ಬಸವರಾಜ ವರನಾಳ, ವಿಜಯಕುಮಾರ ರಾಮಕೃಷ್ಣ ಮಾತನಾಡಿದರು. ಪ್ರಮುಖರಾದ ದೀಪಕ ಹೊಡಲ್, ಪರಮೇಶ್ವರ ಅಪಚಂದ, ಅಂಬಾರಾಯ ಜವಳಗಿ, ಹಣಮಂತ ಚೂರಿ ಭಾಗವಹಿಸಿದ್ದರು.
ಬಳಿಕ ಶಾಸಕ ಜಿ.ರಾಮಕೃಷ್ಣ ಮುರುಡಿ ಗ್ರಾಮದಲ್ಲಿ ಎಸ್ ಇಪಿ ಯೋಜನೆಯಲ್ಲಿ 10 ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ಹಾಗೂ ಶಾಸಕರ ಅನುದಾನದ 4 ಲಕ್ಷ ರೂ.ದಲ್ಲಿ ಮುಸ್ಲಿಂ ಸ್ಮಶಾನ ಭೂಮಿ ಸುತ್ತುಗೋಡೆ ಕಾಮಗಾರಿಗೆ ಚಾಲನೆ ನೀಡಿದರು. ಜಿಪಂ ಸದಸ್ಯ ಶರಣಗೌಡ ಪಾಟೀಲ, ಮುಖಂಡ ವಿಜಯಕುಮಾರ ರಾಮಕೃಷ್ಣ, ಮುನಾವರ ಪಟೇಲ್, ಕಲ್ಯಾಣಿ ಮುರಡಿ ಇತರರು ಪಾಲ್ಗೊಂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.