71 ವರ್ಷದಲ್ಲಿ ಆಗಿಲ ನಿರೀಕ್ಷಿತ ಸಾಧನೆ


Team Udayavani, Aug 16, 2017, 10:28 AM IST

gulbarga.jpg

ಕಲಬುರಗಿ: ಕಳೆದ 71 ವರ್ಷಗಳಲ್ಲಿ ದೇಶ ಯಾವ ನಿರೀಕ್ಷಿತ ಪ್ರಮಾಣದಲ್ಲಿ ಸಾಧನೆ ಮಾಡಿಬೇಕಾಗಿತ್ತೋ, ಅದನ್ನು ಮಾಡಲು ಸಾಧ್ಯವಾಗಿಲ್ಲ. ಆದರೆ, ಸಾಕಷ್ಟು ಸಾಧನೆಗಳು ಆಗಿವೆ ಎನ್ನುವುದನ್ನು ನಾವು ಒಪ್ಪಿಕೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು. ಇಲ್ಲಿನ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಎಲ್ಲವನ್ನು ಸಾಧಿಸಿ ಬಿಟ್ಟಿದ್ದೇವೆ ಎನ್ನುವುದಕ್ಕೆ ಸಾಧ್ಯವಿಲ್ಲ. ಆದರೆ, ಇದೆಲ್ಲವನ್ನು ಸಾಧಿಸಿದ್ದೇವೆ, ಮಾಡಿದ್ದೇವೆ. ಅಭಿವೃದ್ಧಿಯಾಗಿದೆ ಎಂದು ಹೇಳಿಕೊಳ್ಳುವ ಸಮಯ ಇದಾಗಿದೆ. ಇವತ್ತು ಪ್ರಜಾಪ್ರಭುತ್ವ ಉಳಿದುಕೊಂಡಿದೆ ಎನ್ನುವುದಾದ್ರೆ, ರಾಜಕಾರಣ ನಡೆಯುತ್ತಿದೆ ಎನ್ನುವುದಾದ್ರೆ ಮತ್ತು ಜನರಿಗೆ ಅವರ ಇಚ್ಛೆಯಂತೆ ಎಲ್ಲವೂ ಸಿಗುತ್ತಿದೆ ಎಂದಾದರೆ ಅಲ್ಲಿ ಸಾಧನೆಯಾಗಿದೆ ಎಂತಲೇ ಅರ್ಥ. ಅದನ್ನು ನಾವು 90ರಿಂದ 100 ವರ್ಷದ ಹಿರಿಯರನ್ನು ಕೇಳಬೇಕಾಗುತ್ತದೆ. ನಿಮ್ಮ ಕಾಲದಲ್ಲಿ ಹೇಗಿತು, ಈಗ ಹೇಗಿದೆ ಎಂದು ಕೇಳಿದಾಗ ಅವರು ಹೇಳುತ್ತಾರಲ್ಲ. ಅದು ನಮ್ಮ ಸಾಧನೆಗೆ ಉತ್ತರ ಮತ್ತು ಗುರಿಯ ಸೌಧ ಎಂದರು. 1947ರಲ್ಲಿ ಉದ್ದೇಶವಿತ್ತು: 1947ರಲ್ಲಿ ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡಿದ ಹುತಾತ್ಮರಲ್ಲಿ ಸ್ವಾತಂತ್ರ್ಯ ಸಿಗುತ್ತದೆಯೋ ಇಲ್ಲವೋ ಎನ್ನುವ ಭರವಸೆ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ಸ್ವಾಭಿಮಾನ, ದೇಶಾಭಿಮಾನ, ಪ್ರಾಮಾಣಿಕತೆ ಹಾಗೂ ಒಂದು ದೊಡ್ಡ ಉದ್ದೇಶವಂತೂ ಇತ್ತು. ಅದಕ್ಕಾಗಿ ಹಲವಾರು ಮಹನೀಯರು ತಮ್ಮ ನೆತ್ತರು ಚೆಲ್ಲಿ ನಮಗೆ ಸ್ವಾತಂತ್ರ್ಯ ಗಳಿಸಿಕೊಟ್ಟಿದ್ದಾರೆ. ಗುಲಾಮಗಿರಿಯಿಂದ ನಮ್ಮನ್ನು ಮುಕ್ತರನ್ನಾಗಿಸಿದ್ದಾರೆ ಎಂದರು. ಸಹೋದರತ್ವ, ಸೌಹಾರ್ದತೆ ಮತ್ತು ಸ್ವಾಭಿಮಾನ, ದೇಶಾಭಿಮಾನದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ. ಮಹಾತ್ಮಾ ಗಾಂಧೀಜಿ, ನೆಹರು, ಲಾಲಬಹದ್ದೂರ್‌ ಶಾಸ್ತ್ರೀ, ಭಗತ್‌ಸಿಂಗ್‌, ಸುಭಾಷಚಂದ್ರ ಭೋಸ್‌ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ನೆನಪಾಗುತ್ತಾರೆ. ಅವರ ಸ್ಮರಣೆ ನಮ್ಮಲ್ಲಿ ದೇಶಾಭಿಮಾನ ಉಕ್ಕುವಂತೆ ಮಾಡಬೇಕು. ಇಂದಿನ ಯುವಕರಲ್ಲಿ ಇದು ಪ್ರಜ್ವಲಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು. ಧಜ್ವ ಹಿಡಿದರಷ್ಟೆ ಅಲ್ಲ: ಕೇವಲ ಧ್ವಜ ಹಿಡಿದು ಓಡಾಡುವುದು, ಕೂಗಾಡುವುದರಿಂದ ದೇಶಾಭಿಮಾನ ಹೆಚ್ಚಾಗುವುದಿಲ್ಲ. ಯಾವುದೋ ಒಂದು ಭಾವನೆ ಕೆರಳಿಸಿಕೊಂಡು ಹೊರಟು ನಿಲ್ಲುವುದರಿಂದ ದೇಶ ಬೆಳೆಯುವುದಿಲ್ಲ. ನಮ್ಮ ನಡೆ ನುಡಿಗಳಲ್ಲಿ, ಆಚಾರ, ವಿಚಾರಗಳಲ್ಲಿ ದೇಶಾಭಿಮಾನ ಇರಬೇಕು. ನಮ್ಮವರನ್ನು ಪ್ರೀತಿಯಿಂದ ಕಾಣುವ ಗುಣಬೇಕು. ಕೇವಲ ರಾಜಕಾರಣಿಗಳಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಇದಕ್ಕೆ ಎಲ್ಲರೂ ಬೇಕು. ಮನುಷ್ಯತ್ವದಿಂದ, ಸ್ವಾಭಿಮಾನದಿಂದ ದೇಶ ರಕ್ಷಣೆ ಹೊಣೆ ಹೊರಬೇಕು ಎಂದರು. ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಹಲವಾರು ಅಭಿವೃದ್ಧಿಗಳಾಗಿವೆ. ಹಸಿದ ಹೊಟ್ಟೆಗಳು ತುಂಬುತ್ತಿವೆ. ಬರಗಾಲದಲ್ಲೂ ಗುಳೆಹೋಗದಂತೆ ರೈತರಿಗೆ, ಕೃಷಿಕೂಲಿ ಕಾರ್ಮಿಕರಿಗೆ, ದುಡಿಯವ ವರ್ಗಕ್ಕೆ ಅನ್ನ ದೊರೆಯುವಂತೆ ಮಾಡಲಾಗಿದೆ. ನೀರಾವರಿ ಯೋಜನೆಗಳಿಗೆ ಹಣ ನೀಡಿ ಕಾಯಕಲ್ಪ ಮಾಡಲಾಗಿದೆ. ಆರೋಗ್ಯ ವಿಚಾರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಕಲಬುರಗಿಯಲ್ಲಿ ಟ್ರಾಮಾ ಸೆಂಟರ್‌ ಆರಂಭಿಸಲಾಗುವುದು. ಅಲ್ಲದೆ, ಮುಲ್ಲಾಮಾರಿ, ಗಂಡೋರಿ ನಾಲೆಗಳ ಆಧುನೀಕರಣ ಮಾಡಲಾಗುತ್ತಿದೆ. ಶೀಘ್ರವೇ ಕಲಬುರಗಿಗೆ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು ಎಂದರು. ಶಾಸಕ ಶರಣಪ್ಪ ಮಟ್ಟೂರ್‌, ದಕ್ಷಿಣ ಮತ ಕ್ಷೇತ್ರ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್‌, ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಜಿಡಿಎ ಅಧ್ಯಕ್ಷ ಅಸಗರ್‌ ಚುಲಬುಲ್‌, ಮೇಯರ್‌ ಶರಣಕುಮಾರ ಮೊದಿ, ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರು, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಪ್ರಾದೇಶಿಕ ಆಯುಕ್ತ ಹರ್ಷಾ ಗುಪ್ತಾ, ಐಜಿಪಿ ಅಲೋಕಕುಮಾರ, ಜಿಲ್ಲಾಧಿಕಾರಿ ವೆಂಕಟೇಶಕುಮಾರ, ಪಾಲಿಕೆ ಆಯುಕ್ತ ಸುನೀಲಕುಮಾರ, ಜಿಪಂ ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ, ಐಎಎಸ್‌ ಅಧಿಕಾರಿ ಡಾ| ರಾಘಪ್ರಿಯಾ, ಎಸ್ಪಿ ಎನ್‌.ಶಶಿಕುಮಾರ,ಐಎಎಸ್‌ ಪ್ರೋಭೆಷನರಿ ಆಕೃತಿ ಸಾಗರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ, ಡಿವೈಎಸ್ಪಿ ಜಾಹ್ನವಿ ಹಾಗೂ ಇನ್ನಿತರ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಶಾಲೆಗಳ ವಿದ್ಯಾರ್ಥಿನಿಯರು, ಶಿಕ್ಷಕರು ಹಾಜರಿದ್ದರು 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.