![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 6, 2020, 8:13 PM IST
ಕಲಬುರಗಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್ ಗೆ ನೀರಿನ ಒಳ ಹರಿವು ಹೆಚ್ಚಾಗಿದೆ.
ಈ ಕಾರಣದಿಂದಾಗಿ ಸೋಮವಾರ ಬ್ಯಾರೇಜ್ ನಿಂದ 2,500 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.
ಬ್ಯಾರೇಜ್ ಗೆ ನೀರಿನ ಒಳ ಹರಿವಿನ ಪ್ರಮಾಣ 2500 ಕ್ಯೂಸೆಕ್ಸ್ ಇದ್ದು, ಅಷ್ಟೆ ಪ್ರಮಾಣದ ನೀರನ್ನು ಇದೀಗ ನದಿಗೆ ಬಿಡಲಾಗುತ್ತಿದೆ. ಹಾಗಾಗಿ, ನದಿ ದಂಡೆಯ ಇಕ್ಕೆಲಗಳಲ್ಲಿ ವಾಸವಾಗಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ನದಿ ಭಾಗಕ್ಕೆ ಹೋಗಲು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್.ಕಲಾಲ್ ಅವರು ಈ ಮೂಲಕ ರೈತರಿಗೆ ಸೂಚಿಸಿದ್ದಾರೆ.
ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿಎಂಸಿ. ಇದ್ದು, ಸೋಮವಾರ ಬೆಳಿಗ್ಗೆ 2.8 ಟಿ.ಎಂ.ಸಿ. ನೀರು ಸಂಗ್ರಹಗೊಂಡಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ನೀರಿನ ಸಂಗ್ರಹಣೆ ಪ್ರಮಾಣ ಹೆಚ್ಚಿದೆ. ಕಳೆದ ವರ್ಷದ ಆಗಸ್ಟ್ 2ನೇ ವಾರದಲ್ಲಿ ಈ ಪ್ರಮಾಣದ ನೀರು ಬ್ಯಾರೇಜ್ ನಲ್ಲಿ ಸಂಗ್ರಹವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಆಗ ನೀರಿನ ಒಳಹರಿವು ಇನ್ನೂ ಹೆಚ್ಚಾಗಲಿದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ 2,500 ಕ್ಯೂಸೆಕ್ಸ್ ನೀರು ನದಿಗೆ ಹರಿಸಲಾಗಿದೆ ಎಂಬ ಮಾಹಿತಿಯೂ ಲಭಿಸಿದೆ.
ಇದಲ್ಲದೆ 3.5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯವಿರುವ ಮೂರು ಘಟಕಗಳ ಪೈಕಿ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.