ಜಮೀನು ಖರೀದಿಗೆ ನೆರೆ ರೈತರ ಲಗ್ಗೆ


Team Udayavani, Nov 24, 2021, 1:28 PM IST

ಜಮೀನು ಖರೀದಿಗೆ ನೆರೆ ರೈತರ ಲಗ್ಗೆ

ಚಿಂಚೋಳಿ: ತಾಲೂಕಿನಲ್ಲಿ ಉತ್ತಮ ಫಲವತ್ತತೆಯಿಂದ ಕೂಡಿದ ರೈತರ ಜಮೀನುಗಳ ಖರೀದಿಗೆ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ರೈತರು ಲಗ್ಗೆ ಇಡುತ್ತಿದ್ದು ಅನೇಕ ಗ್ರಾಮಗಳಲ್ಲಿ ರೈತರು ತಮ್ಮ ಜಮೀನುಗಳನ್ನು ಮಧ್ಯವರ್ತಿಗಳ ಮಾತಿಗೆ ಮರುಳಾಗಿ ಅಗ್ಗದ ದರಗಳಲ್ಲಿ ಮಾರುತ್ತಿದ್ದಾರೆ ಎನ್ನಲಾಗಿದೆ.

ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಒಂದು ಎಕರೆ ಜಮೀನು ಬೆಲೆ 50 ಲಕ್ಷ ರೂ.ಗೆ ಕಡಿಮೆ ಇಲ್ಲ. ಕಾರಣ ಅಲ್ಲಿನ ರೈತರು ತಾಲೂಕಿನಲ್ಲಿ ದಿನನಿತ್ಯ ದಲ್ಲಾಳಿಗಳ ಮೂಲಕ ಪ್ರತಿ ಎಕರೆಗೆ 10ಲಕ್ಷ ರೂ. ಗಳಿಂದ 20ಲಕ್ಷ ರೂ.ವರೆಗೆ ನೀಡಿ ಜಮೀನು ಖರೀದಿಸುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ರೈತರು ಈ ಭಾಗದಲ್ಲಿ ಜಮೀನು ಖರೀದಿಸಿ ಹಣ್ಣು, ಹೂವು, ತರಕಾರಿ, ಮಾವಿನ ತೋಟ, ಪೇರಳೆ ಹಣ್ಣು, ತೆಂಗು, ಸಪೋಟ,ದಾಳಿಂಬೆ, ಮೋಸಂಬಿ, ದ್ರಾಕ್ಷಿ ಹಣ್ಣುಗಳ ಫಾರ್ಮ್ ಹೌಸ್‌ ಮಾಡುವುದಕ್ಕಾಗಿ ಜಮೀನು ಖರೀದಿಸುತ್ತಿದ್ದಾರೆ.

ತಾಲೂಕಿನ ರೈತರು ಇದೇ ರೀತಿ ಜಮೀನು ಮಾರಿದರೆ ಮುಂದೆ ಇಲ್ಲಿನ ರೈತರೇ ಕೂಲಿ ಕಾರ್ಮಿಕರಾಗಿ ದುಡಿಯುವ ಪರಿಸ್ಥಿತಿ ಬರುತ್ತದೆ ಭೀಮಾ ಮಿಶನ್‌ ಅಧ್ಯಕ್ಷ ಭೀಮಶೆಟ್ಟಿ ಮುಕ್ಕಾ ಕಳವಳ ವ್ಯಕ್ತಪಡಿಸುತ್ತಾರೆ. ತಾಲೂಕಿನ ಸುಲೇಪೇಟ, ಐನೋಳಿ, ಚಿಂಚೋಳಿ, ನಿಡಗುಂದಾ, ಕೋಡ್ಲಿ, ಕನಕಪುರ, ಚಿಮ್ಮನಚೋಡ, ಕುಂಚಾವರಂ, ಐನಾಪುರ, ಗಡಿಕೇಶ್ವಾರ, ರಟಕಲ್‌, ಮಿರಿಯಾಣ, ದೇಗಲಮಡಿ, ನಾಗಾಇದಲಾಯಿ, ಸಾಲೇಬೀರನಳ್ಳಿ, ತುಮಕುಂಟಾ ಗ್ರಾಮಗಳಲ್ಲಿ ಆಂಧ್ರ ಮತ್ತು ತೆಲಂಗಾಣ ರಾಜ್ಯದ ರೈತರು ಜಮೀನು ಖರೀದಿಸಿದ್ದಾರೆಂದು ಹೇಳಲಾಗುತ್ತಿದೆ.

ಉಪನೋಂದಣಿ ಕಚೇರಿಯಲ್ಲಿ ಜನ ಜಂಗುಳಿ : ತಾಲೂಕಿನಲ್ಲಿ ರೈತರ ಜಮೀನುಗಳನ್ನು ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ರೈತರು ಖರೀದಿಸುತ್ತಿರುವುದರಿಂದ ಅವುಗಳು ತಮ್ಮ ಹೆಸರಿನಲ್ಲಿ ನೋಂದಾಯಿಸಲು ಉಪ ನೋಂದಣಿ ಕಚೇರಿ ಜನಜಂಗುಳಿಯಿಂದ ಕೂಡಿತ್ತು. ಆಸ್ತಿ ನೋಂದಣಿ ಮಾಡಿಕೊಳ್ಳಲು, ಜಮೀನು ಮಾರಾಟದ ದಾಖಲೆ ಸಿದ್ಧಪಡಿಸಲು ಇಲ್ಲಿನ ಕಂಪ್ಯೂಟರ್‌ ಕೇಂದ್ರಗಳಲ್ಲಿ ವ್ಯವಹಾರ ಜೋರಾಗಿ ನಡೆಯುತ್ತಿದೆ. ಕಂದಾಯ ಇಲಾಖೆ ಅಧಿಕಾರಿಗಳು ಉಪನೋಂದಣಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಎಂಪಳ್ಳಿ, ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಒತ್ತಾಯಿಸಿದ್ದಾರೆ.

-ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.