
ರಸ್ತೆ ತಡೆ: ರತ ಮುಖಂಡರ ಬಂಧನ
ಅತಿವೃಷ್ಟಿ-ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಆಗ್ರಹ
Team Udayavani, Nov 6, 2020, 7:05 PM IST

ಕಲಬುರಗಿ: ಅತಿವೃಷ್ಟಿ ಮತ್ತು ಭೀಮಾ ನದಿ ಪ್ರವಾಹ ಸಂತ್ರಸ್ತರಿಗೆ ತಕ್ಷಣವೇ ಪರಿಹಾರ ನೀಡಬೇಕು, ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ಸುಗ್ರೀವಾಜ್ಞೆ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಗುರುವಾರ ನಗರದಲ್ಲಿ ರಸ್ತೆ ತಡೆ ನಡೆಸುತ್ತಿದ್ದ ರೈತರ ಮುಖಂಡರನ್ನು ಪೊಲೀಸರು ಬಂಧಿಸಿದರು. ಇಲ್ಲಿನ ಜಗತ್ ವೃತ್ತದಲ್ಲಿ ಅಖೀಲ ಭಾರತ
ಕಿಸಾನ್ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹಲವು ಮುಖಂಡರು ಹಾಗೂ ರೈತರು ಸೇರಿ ರಸ್ತೆ ತಡೆ ನಡೆಸಿದರು. ರಸ್ತೆತಡೆ ನಡೆಸದಂತೆ ಪೊಲೀಸರು ಒತ್ತಡ ಹೇರಿದರೂ ಪ್ರತಿಭಟನೆ ಆರಂಭವಾಯಿತು. ನಂತರ ಹೋರಾಟ ಹಿಂದಕ್ಕೆ ಪಡೆಯಲು ಪೊಲೀಸರು ತಾಕೀತು ಮಾಡಿದರು. ಆದರೂ, ರಸ್ತೆ ತಡೆ ಮುಂದುವರೆಸಿದಾಗ ಹೋರಾಟದಲ್ಲಿ ತೊಡಗಿದ್ದ ಸಮಿತಿ ಜಿಲ್ಲಾ ಸಂಚಾಲಕ ಶರಣಬಸವಪ್ಪ ಮಮಶೆಟ್ಟಿ, ಮುಖಂಡರಾದ ಭೀಮಶೆಟ್ಟಿ ಯಂಪಳ್ಳಿ, ಮೌಲಾಮುಲ್ಲಾ, ಭೀಮಾಶಂಕರ ಮಾಡಿಯಾಳ, ಮಹೇಶ ಎಸ್.ಬಿ, ಗಣಪತರಾವ್ ಮಾನೆ, ಮಹ್ಮದ ಮುಕದ್ದಂ, ಅಶೋಕ ಮ್ಯಾಗೇರಿ, ಅರ್ಜುನ ಭದ್ರೆ, ಜಗದೇವಿ ಹೆಗಡೆ, ಬಸ್ಸುಗೌಡ ಪಾಟೀಲ, ಪಾಂಡುರಂಗ ಮಾವಿನಕರ್, ಗುಂಡಣ್ಣ ಕುಂಬಾರ, ಮಲ್ಲಣ್ಣ ದಂಡಬಾ, ಮಲ್ಲಯ್ಯ ಗುತ್ತೇದಾರ ಸೇರಿದಂತೆ 50ಕ್ಕೂ ಹೆಚ್ಚಿನ ಹೋರಾಟಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರಪೊಲೀಸರನ್ನು ಬಿಟ್ಟು ಹೋರಾಟಗಾರರರ ಮೇಲೆ ದಬ್ಟಾಳಿಕೆ ನಡೆಸುತ್ತಿದೆ ಎಂದು ಎಂದು ಮುಖಂಡರು ಧಿಕ್ಕಾರದ ಘೋಷಣೆ ಕೂಗಿದರು.
ಪ್ರವಾಹದಿಂದ ಸಂಕಷ್ಟದಲ್ಲಿರುವ ಸಂತ್ರಸ್ತರು ಮತ್ತು ರೈತರಿಗೆ ತಕ್ಷಣವೇ ಪರಿಹಾರ ಕಲ್ಪಿಸಬೇಕು. ಪ್ರತಿ ಎಕರೆ ಬೆಳೆ ಹಾನಿಗೆ 25 ಸಾವಿರ ರೂ. ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು. ನೆರೆ ಪೀಡಿತ ಗ್ರಾಮಗಳನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಸುಗ್ರಿವಾಜ್ಞೆಗಳ ಮೂಲಕ ಜಾರಿಗೊಳಿಸಿರುವ ಜನ ವಿರೋಧಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಮುಖಂಡರು ಆಗ್ರಹಿಸಿದರು.
ಪೊಲೀಸ್ ಮೈದಾನಕ್ಕೆ ಕರೆದುಕೊಂಡು ಹೋದ ಬಳಿಕವೂ ಹೋರಾಟಗಾರರು ಪ್ರತಿಭಟನೆ ಮುಂದುವರೆಸಿದರು. ರೈತರ ಸಂಕಷ್ಟ ಆಲಿಸಲು ಜಿಲ್ಲಾಧಿಕಾರಿಗಳೇ ಬರಬೇಕೆಂದು ಪಟ್ಟು ಹಿಡಿದು ಅಲ್ಲೇ ಕುಳಿತುಕೊಂಡರು. ಕೊನೆಗೂ ಹೋರಾಟಗಾರರ ಪಟ್ಟಿಗೆ ಮಣಿದು ಕಲಬುರಗಿ ತಹಶೀಲ್ದಾರ್ ಮಲ್ಲೇಶ ತಂಗಾ ಅವರನ್ನು ಅಲ್ಲಿಗೆ ಕರೆಸಿಕೊಳ್ಳಲಾಯಿತು. ತಹಶೀಲ್ದಾರರು ಮನವಿ ಸ್ವೀಕರಿಸಿದ ಬಳಿಕ ಹೋರಾಟಗಾರರನ್ನು ಬಿಡುಗಡೆ ಮಾಡಿ ಕಳುಹಿಸಲಾಯಿತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.