Kalaburgi;ದೇಶದ ವಿಕಾಸಕ್ಕೆ ಧರ್ಮದ ಜತೆಗೆ ಅಭಿವೃದ್ಧಿಕಾರ್ಯಗಳು ಬೇಕು:ನಿರ್ಮಲಾನಂದ ಸ್ವಾಮೀಜಿ


Team Udayavani, Feb 13, 2024, 5:42 PM IST

For a better country, development work is needed along with religion says Nirmalananda Swamiji

ಕಲಬುರಗಿ: ದೇಶ ಉದ್ದಾರವಾಗುವುದಕ್ಕೆ ಧರ್ಮ ಒಂದಿದ್ದರೆ ಸಾಲದು, ಅದರ ಜತೆಗೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಗಳು ಬೇಕು. ಅದರಲ್ಲೂ  ಕೈಗಾರಿಕೆಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ಆದಿಚುಂಚನಗಿರಿ ಮಠದ ಜಗದ್ಗುರು ಡಾ.ನಿರ್ಮಲಾನಂದ ಸ್ವಾಮೀಜಿಗಳು ಹೇಳಿದರು.‌

ಮಂಗಳವಾರ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನ್ಯಾಶನಲ್ ಸ್ಕಿಲ್ ಡೆವಲಪ್‍ಮೆಂಟ್ ಮತ್ತು ಎಥ್ನೋಟೆಕ್ ಅಕಾಡೆಮಿ ಸಹಯೋಗದಲ್ಲಿ ಪೂಜ್ಯ ಬಸವರಾಜ ದೊಡ್ಡಪ್ಪ ಅಪ್ಪ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.

ಭಾರತದಂತ ದೊಡ್ಡ ದೇಶದಲ್ಲಿ ಅತಿಹೆಚ್ಚು ಮಾನವ ಸಂಪನ್ಮೂಲವಿದ್ದು, ಅದರ ಬಳಕೆ ಅಧಿಕವಾಗಬೇಕು. ಹೀಗಾಗಿ, ಕೈಗಾರಿಕೆಗಳ ವೃದ್ಧಿಗೆ ಕೌಶಲ ತರಬೇತಿ ಅಗತ್ಯವಾಗಿದೆ. ದೇಶಕ್ಕೆ ಜನಸಂಖ್ಯೆ ಮಾರಕವಾಗಿಲ್ಲ. ಕೌಶಲ ತರಬೇತಿ ಕೊರತೆಯಿಂದಾಗಿ ಅದು ಮಾರಕವೆನಿಸುತ್ತಿದೆ. ಯುವ ಜನಾಂಗದಲ್ಲಿ ಕೌಶಲ ಹೆಚ್ಚಾದರೆ ದೇಶದ ಭಾರಿ ಜನಸಂಖ್ಯೆ ಯಾವುದೇ ಕಾರಣಕ್ಕೂ ಮಾರಕ ಎನಿಸದು ಎಂದು ಅಭಿಪ್ರಾಯಪಟ್ಟರು.

ಇಂದು ದೇಶದಲ್ಲಿ ತಂತ್ರಜ್ಞಾನಕ್ಕೆ ಯಾವುದೇ ಕೊರತೆಯಿಲ್ಲ. ಆದರೆ, ದಿನೇದಿನೇ ಸುಧಾರಿತ ರೂಪದಲ್ಲಿ ಬರುತ್ತಿರುವ ತಂತ್ರಜ್ಞಾನ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಯುವಜನರು ಮನಸ್ಸು ಮಾಡಬೇಕು. ದೇಶದ ಕೈಗಾರಿಕೆಗಳಲ್ಲಿ ಕೌಶಲಕ್ಕೆ ಹೆಚ್ಚು ಬೇಡಿಕೆಯಿದೆ. ಇನ್ನೊಂದೆಡೆ, ಶಿಕ್ಷಣ ಸಂಸ್ಥೆಗಳಲ್ಲಿ ಬೋಧಿಸುತ್ತಿರುವ ಪಠ್ಯ ಮತ್ತು ಕೈಗಾರಿಕೆಗಳ ಈ ಬೇಡಿಕೆಯ ಮಧ್ಯೆ ದೊಡ್ಡ ಅಂತರವಿದೆ. ಈ ನಿಟ್ಟಿನಲ್ಲಿ ಅಂತರ ಇಲ್ಲದಂತೆ ಮಾಡುವಲ್ಲಿ ರಾಷ್ಟ್ರೀಯ ಕೌಶಲಾಭಿವೃದ್ಧಿ ಮಂಡಳಿ ಮುತುವರ್ಜಿ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ವಾಮೀಜಿ ಸಲಹೆ ನೀಡಿದರು.

1894ರ ಸಂದರ್ಭದಲ್ಲಿ ಭಾರತ ಎಂಬುದು ಕೇವಲ ಧರ್ಮ ಮತ್ತು ಅಧ್ಯಾತ್ಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿತ್ತು. ಆದರೆ, ಚಿಕಾಗೋ ಧರ್ಮ ಸಮ್ಮೇಳನಕ್ಕೆ ತೆರಳಿದ್ದ ಸ್ವಾಮಿ ವಿವೇಕಾನಂದರು ಆ ದೇಶದ ತಂತ್ರಜ್ಞಾನ ಪ್ರಾವೀಣ್ಯತೆ ಗಮನಿಸಿ ಆ ಕುರಿತು ಜೆಮ್‍ಷೆಡ್ ಟಾಟಾ ಅವರೊಂದಿಗೆ ಒಮ್ಮೆ ಚರ್ಚಿಸಿದ ಬಳಿಕ ಕರ್ನಾಟಕದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸ್ಥಾಪನೆಯಾಗಲು ಕಾರಣವಾಯಿತು ಎಂದು ಡಾ.ನಿರ್ಮಲಾನಂದ ಸ್ವಾಮೀಜಿ, ಜಗದ್ಗುರುಗಳು ಹೇಳಿದರು.

ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, 2014ರ ಬಳಿಕ ಭಾರತ ದೇಶದಲ್ಲಿ ಸಾಕಷ್ಟು ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೆ ತಂದು ಯುವಕರಿಗೆ ಸ್ವಯಂ ಉದ್ಯೋಗ ಸೃಷ್ಟಿಸಲು ಸಹಕಾರ ನೀಡುತ್ತಿದೆ. ಹೀಗಾಗಿ ಭಾರತದಲ್ಲಿನ ಯುವ ಶಕ್ತಿಗಳು ಹೆಚ್ಚಿನ ಕೌಶಲ್ಯ ತರಬೇತಿ ಪಡೆದು ವಿಶ್ವದಲ್ಲಿ ರಾಷ್ಟ್ರದ ಹೆಸರು ಪಸರಿಸಬೇಕು ಎಂದು ಯುವಕರಿಗೆ ಕರೆ ನೀಡಿದರು.

ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವಾಲಯವು ಯುವಕರಿಗೆ ಕೌಶಲ್ಯ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡುವ ಕೆಲಸ ಮಾಡುತ್ತದೆ. ತಂತ್ರಜ್ಞಾನ ಮತ್ತು ಕೌಶಲ ಕ್ಷೇತ್ರದಲ್ಲಿ ಭಾರತ ಇಂದು ಸಾಕಷ್ಟು ಪ್ರಗತಿ ಸಾಧಿಸಿದೆ. ತಾಂತ್ರಿಕ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ಹೋಗುವವರ ಸಂಖ್ಯೆ ಕಡಿಮೆಯಾಗಿದ್ದು, ಈಗ ಎಲ್ಲವೂ ಭಾರತದಲ್ಲಿಯೇ ಲಭಿಸುತ್ತಿದೆ. ಇದಕ್ಕೆ ಪುರಾವೆ ಎನ್ನುವಂತೆ ದೇಶದಲ್ಲಿ ಈಗ 1.25 ಲಕ್ಷ ಸ್ಟಾರ್ಟ್-ಅಪ್ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 125 ಯೂನಿಕಾರ್ನ್ ಕಂಪನಿಗಳಿವೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಅಮೆರಿಕದ ಪ್ರತಿಷ್ಠಿತ ನಾಸಾ ಸಂಸ್ಥೆಯಲ್ಲಿ ಭಾರತ ಸಂಜಾತ ಶೇ.31ರಷ್ಟು ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

2047ಕ್ಕೆ ಭಾರತ ವಿಶ್ವಗುರು: ಸ್ವಾತಂತ್ರ್ಯದ ಶತಮಾನೋತ್ಸವದ ವರ್ಷವಾಗಲಿರುವ 2047ರ ಹೊತ್ತಿಗೆ ಇಡೀ ವಿಶ್ವಕ್ಕೆ ಭಾರತ ವಿಶ್ವಗುರು ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಇದೇ ಸಂದರ್ಭದಲ್ಲಿ ಪ್ರತಿಪಾದಿಸಿದರು.

ನವದೆಹಲಿಯ ಎಐಸಿಟಿಇ ಮುಖ್ಯಸ್ಥ ಪ್ರೋ. ಟಿ.ಜಿ ಸೀತಾರಾಮ್ ಮಾತನಾಡಿ, ತಂತ್ರಜ್ಞಾನ ಎಂಬುದು ಮಾನವ ಕಲ್ಯಾಣಕ್ಕೆ ಬಳಕೆಯಾಗಬೇಕು. ಆ ನಿಟ್ಟಿನಲ್ಲಿ ಇಂದು ಭಾರತ ಇಡೀ ಜಗತ್ತಿನ ಗಮನ ಸೆಳೆದಿದೆ. ಕೋವಿಡ್ ಸಂದರ್ಭದಲ್ಲಿ ಭಾರತ ಅಭಿವೃದ್ಧಿಪಡಿಸಿದ ಲಸಿಕೆಯನ್ನು ಜಗತ್ತಿನ 100ಕ್ಕೂ ಹೆಚ್ಚು ದೇಶಗಳಿಗೆ ಉಚಿತವಾಗಿ ಒದಗಿಸುವ ಮೂಲಕ ಮಾನವ ಕಲ್ಯಾಣ ತತ್ವ ಎತ್ತಿ ಹಿಡಿಯಲಾಯಿತು. ಈ ತತ್ವಕ್ಕೆ ಒತ್ತುಕೊಡುವ ಮೂಲಕ ಎಐಸಿಟಿಇ ವ್ಯಾಪ್ತಿಯ ಎಲ್ಲ ತಾಂತ್ರಿಕ ವಿದ್ಯಾಲಯಗಳಲ್ಲಿ ವಿಶ್ವಮಾನವತಾ ಮೌಲ್ಯಗಳನ್ನು ಕಡ್ಡಾಯವಾಗಿ ಬೋಧಿಸುವಂತೆ ನಿಯಮ ರೂಪಿಸಲಾಗಿದೆ ಎಂದರು.

ಬಿಜಿಎಸ್ ಮತ್ತು ಎಸ್.ಜೆ.ಬಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಹಾಗೂ ಹಾಸ್ಪಿಟಲ್ಸ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದರು. ಎಚ್.ಕೆ.ಇ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐಎಸ್‍ಟಿಇ ಅಧ್ಯಕ್ಷ ಪ್ರತಾಪ ಸಿನ್ಹ ಕೆ. ದೇಸಾಯಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಿಡಿಎಸಿಇಕೆ ಸಂಯೋಜಕ ಬಸವರಾಜ್ ಖಂಡರಾವ್, ಹೆಚ್.ಕೆ.ಇ ಸಂಸ್ಥೆಯ ಉಪಾಧ್ಯಕ್ಷ ಡಾ. ಶರಣಬಸಪ್ಪ ಹರವಾಳ್, ಕಾರ್ಯದರ್ಶಿ ಡಾ. ಜಗನ್ನಾಥ್ ಬಿಜಾಪುರೆ, ಸಹ ಕಾರ್ಯದರ್ಶಿ ಡಾ. ಮಹಾದೇವಪ್ಪ ರಾಮಪುರೇ, ವಿಟಿಯು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಬಸವರಾಜ್ ಗಾದಗೆ ಸೇರಿ ಉಪ ಪ್ರಚಾರ್ಯರು, ಸಿಎಓ, ಡೀನರು, ಪ್ರಾಧ್ಯಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಥ್ನೋಟೆಕ್ ಗ್ರೂಪ್ ಆಫ್ ಕಂಪನಿಯ ಮುಖ್ಯಸ್ಥ ಡಾ.ಕಿರಣ ರಾಜಣ್ಣ ಸ್ವಾಗತಿಸಿದರು. ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಶಿಕಾಂತ ಮೀಸೆ ವಂದಿಸಿದರು.‌

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಸತ್ಕಾರ: ಎಚ್.ಕೆ.ಇ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಅವರ ಸಾಧನೆ ಗುರುತಿಸಿ ಎಥ್ನೋಟೆಕ್ ಅಕಾಡೆಮಿ ವತಿಯಿಂದ ವಿಶೇಷವಾಗಿ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಅದೇ ರೀತಿ ನವದೆಹಲಿಯ ಎಐಸಿಟಿಇ ಮುಖ್ಯಸ್ಥ ಪ್ರೋ. ಟಿ.ಜಿ ಸೀತಾರಾಮ್, ಅಟಲ್ ಬಿಹಾರಿ ವಾಜಪೇಯಿ ನಿರ್ದೇಶಕ ಐಐಐಟಿಎಂ ಪ್ರೋ. ನಿವಾಸ್ ಸಿಂಗ್, ಚೆನೈನ ಅಣ್ಣ ವಿವಿಯ ಉಪಕುಲಪತಿ ಡಾ. ಆರ್. ವೇಲರಾಜ್, ಹರಿಯಾಣದ ಸ್ಪೋರ್ಟ್ಸ್ ವಿವಿಯ ಸುರ್ಜಿತ್ ಸಿಂಗ್ ದೇಸ್ವಾಲ್ ಹಾಗೂ ಶರಣಬಸವ ವಿವಿಯ ಡೀನರಾದ ಲಕ್ಷ್ಮಿ ಪಾಟೀಲ್ ಮಾಕಾ ಸೇರಿ ಅನೇಕ ಸಾಧಕರಿಗೆ ಇದೆ ವೇಳೆ ಗೌರವ ಸನ್ಮಾನ ಮಾಡಲಾಯಿತು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.