ಗಡಿಕೇಶ್ವಾರ: ಬಾಲಕರ ವಸತಿ ನಿಲಯಕ್ಕಿಲ್ಲ ಮೂಲ ಸೌಕರ್ಯ
Team Udayavani, Sep 1, 2017, 11:20 AM IST
ಚಿಂಚೋಳಿ: ಸೇಡಂ ವಿಧಾನಸಭಾ ಮತಕ್ಷೇತ್ರಕ್ಕೆ ಒಳಪಟ್ಟಿರುವ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯಗಳಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ತಾಲೂಕಿನ ಗಡಿಕೇಶ್ವಾರ, ತೇಗಲತಿಪ್ಪಿ, ಕೆರೋಳಿ, ಭಂಟನಳ್ಳಿ, ಕುಪನೂರ, ಹಲಚೇರಾ, ಹೊಡೇಬೀರನಳ್ಳಿ ಗ್ರಾಮಗಳಲ್ಲಿ ಮೆಟ್ರಿಕ್ ಪೂರ್ವ ಶಾಲೆಯಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯವನ್ನು 2001-02ರಲ್ಲಿ ಪ್ರಾರಂಭಿಸಲಾಗಿದೆ. ಗಡಿಕೇಶ್ವಾರ ಸರಕಾರಿ ಪ್ರೌಢಶಾಲೆ
ಪಕ್ಕದಲ್ಲಿಯೇ ಇರುವ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳೇ ಇಲ್ಲದಿರುವುದರಿಂದ ವಿದ್ಯಾರ್ಥಿಗಳು
ತೊಂದರೆ ಪಡುವಂತಾಗಿದೆ. ವಸತಿ ನಿಲಯದಲ್ಲಿ ಪ್ರಾರಂಭದಲ್ಲಿಯೇ ಶುದ್ಧ ಕುಡಿಯುವ ನೀರು ಪೊರೈಕೆ ಇಲ್ಲ. ಸ್ನಾನಕ್ಕಾಗಿ ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಮಕ್ಕಳು ದಿನನಿತ್ಯ ತಣ್ಣೀರಿನಿಂದಲೇ ಸ್ನಾನ ಮಾಡುತ್ತಿದ್ದಾರೆ. ಅಲ್ಲದೇ ಮಕ್ಕಳಿಗೆ ಶೌಚಾಲಯ ನಿರ್ಮಿಸಿಕೊಟ್ಟಿಲ್ಲ. ಹೀಗಾಗಿ ಬಯಲು ಬಹಿರ್ದೆಸೆಗೆ ಹೊರಗೆ ಹೋಗಬೇಕಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಜಿಪಂ ವತಿಯಿಂದ ಮಂಚ, ಹಾಸಿಗೆ ಸರಬರಾಜು ಮಾಡಲಾಗಿದೆ. ಇವುಗಳೆಲ್ಲ ಕಳಪೆಮಟ್ಟದಿಂದ ಕೂಡಿವೆ. ಬೆಡ್ ಗಳು ಹರಿದಿವೆ. ನಿಲಯದಲ್ಲಿ ವಿದ್ಯುತ್ ದೀಪ, ಫ್ಯಾನ್ಗಳಿಲ್ಲ. ವಿಪರೀತ ಸೊಳ್ಳೆ ಕಾಟವೂ ಇದೆ. ಇದರಿಂದ ರಾತ್ರಿ ಮಲಗಲೂ ಸಾಧ್ಯವಾಗುತ್ತಿಲ್ಲ. ಬೆಳಗಿನ ಉಪಹಾರದೊಂದಿಗೆ ಬಾಳೆಹಣ್ಣು, ತತ್ತಿಯನ್ನು ಕೊಡುತ್ತಿಲ್ಲ. ಮೇಲ್ವಿಚಾರಕರಿಗೆ ಕೇಳಿದರೆ ಇನ್ನು ಗುತ್ತಿಗೆದಾರ ಸರಬರಾಜು ಮಾಡಿಲ್ಲವೆಂದು ಬೆದರಿಸುತ್ತಾರೆ. ಬಾಗಿಲು ಕಿಟಕಿ ಮುರಿದು ಹೋಗಿವೆ, ಮಳೆ-ಚಳಿ ಎನ್ನದೇ
ಹಾಗೆಯೇ ಮಲಗಬೇಕಾಗಿದೆ ಎಂದು ದೂರಿದ್ದಾರೆ.
ವಸತಿ ನಿಲಯದ ಮಕ್ಕಳಿಗೆ ತಿಳಿ ಬೇಳೆ ಸಾರು, ಅರೆ ಬೆಂದ ರೊಟ್ಟಿ, ಕೊಳೆತ ತರಕಾರಿಗಳಿಂದ ಮಾಡಿದ ತರಕಾರಿ ಊಟಕ್ಕೆ ನೀಡಲಾಗುತ್ತಿದೆ. ನಮಗೆ ಇಲ್ಲಿ ವಾಸವಾಗಲು ಮನಸ್ಸಿಲ್ಲ. ರಾತ್ರಿ ಕಾವಲುಗಾರ ಇಲ್ಲದೇ ತುಂಬ ಭಯವಾಗುತ್ತಿದೆ. ಈ ಕುರಿತು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಕಳೆದ ವಾರ ದೂರು ಸಲ್ಲಿಸಲಾಗಿದೆ. ಆದರೂ ಯಾವುದೇ ಯೋಜನವಾಗಿಲ್ಲ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ|ಶರಣಪ್ರಕಾಶಪಾಟೀಲ ಅವರಿಗೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು
Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.