ಪ್ರತಿನಿಧಿಗಳ ನಿಷ್ಕಾಳಜಿಗೆ ಹಿಡಿದ ಕನ್ನಡಿ

ಹೆದ್ದಾರಿ ಪಕ್ಕದಲ್ಲೇ ಕಸದ ರಾಶಿ¬ಜನರ ಮೌನ-ಅಧಿಕಾರಿಗಳ ನಿರ್ಲಕ್ಷ್ಯ

Team Udayavani, Jan 4, 2021, 4:18 PM IST

ಪ್ರತಿನಿಧಿಗಳ ನಿಷ್ಕಾಳಜಿಗೆ ಹಿಡಿದ ಕನ್ನಡಿ

ಅಫಜಲಪುರ: ಸಾಮಾನ್ಯವಾಗಿ ಕಸವನ್ನು ಒಂದು ನಿರ್ದಿಷ್ಟ ಜಾಗದಲ್ಲಿ ಹಾಕುವುದು ವಾಡಿಕೆ, ಆದರೆ ಮುಖ್ಯರಸ್ತೆ, ಹೆದ್ದಾರಿ ಪಕ್ಕದಲ್ಲಿ ಕಸದ ರಾಶಿಹಾಕುತ್ತಿರುವುದರಿಂದ ಜನಸಾಮಾನ್ಯರಿಗೆ ಕಿರಿಕಿರಿ ಆಗುತ್ತಿದೆ.

ತಾಲೂಕಿನ ಗೊಬ್ಬೂರ (ಬಿ) ಗ್ರಾಮ ಜಿಲ್ಲಾ ಪಂಚಾಯಿತಿ ಮತಕ್ಷೇತ್ರವಾಗಿದ್ದು, ಗ್ರಾ.ಪಂಕೇಂದ್ರ ಸ್ಥಳವಾಗಿದೆ. ತಾಲೂಕಿನಲ್ಲಿ ದೊಡ್ಡ ಗ್ರಾಮವಾಗಿದೆ. ಗ್ರಾ.ಪಂನವರು ನಿತ್ಯ ಮುಖ್ಯರಸ್ತೆಗಳ ಪಕ್ಕದಲ್ಲಿ ಕಸದ ರಾಶಿ ಹಾಕುವ ಮೂಲಕನೈರ್ಮಲ್ಯ ಸಮಸ್ಯೆಗೆ ಕಾರಣ ವಾಗುತ್ತಿದ್ದಾರೆ. ಗೊಬ್ಬೂರ ಮಾತ್ರವಲ್ಲದೇ ತಾಲೂಕಿನ ಅನೇಕಗ್ರಾಮಗಳಲ್ಲಿ ಕಸದ ಸಮಸ್ಯೆ ತಲೆದೋರಿದ್ದು, ಕಸದ ಸಮಸ್ಯೆ ನಿವಾರಣೆಗೆ ಸಂಬಂಧ ಪಟ್ಟವರು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ.

ಗೊಬ್ಬೂರ (ಬಿ), ಕರ್ಜಗಿಗಳಂತೆ ತಾಲೂಕಿನಮಲ್ಲಾಬಾದ, ಮಾತೋಳಿ, ಅತನೂರ, ಮಣೂರ,ಗೊಬ್ಬೂರವಾಡಿ ತಾಂಡಾ ಸೇರಿದಂತೆ ಬಹುತೇಕರಾಷ್ಟ್ರೀಯ ಹೆದ್ದಾರಿಗಳ ಪಕ್ಕದ ಗ್ರಾಮಗಳಲ್ಲಿಕಸದ ಸಮಸ್ಯೆ ಕಾಡುತ್ತಿದೆ.

ಕಸ ಹಾಕುವುದು ರಸ್ತೆ ಪಕ್ಕದಲ್ಲೇ: ಗೊಬ್ಬೂರ(ಬಿ) ಗ್ರಾಮದಲ್ಲಿ ಪಂಚಾಯಿತಿಗೆ ಸಂಬಂಪಟ್ಟ ಖಾಲಿ ಗೋಮಾಳಗಳಿದ್ದರೂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಕಸ ಹಾಕಲಾಗುತ್ತಿದೆ. ಸಾರ್ವಜನಿಕರ ಮನೆ ಕಸ, ಚರಂಡಿಯೊಳಗಿನಕಸ, ಅಂಗಡಿ, ಮುಂಗಟ್ಟುಗಳ ಕಸ ಸೇರಿಸಿಹೆದ್ದಾರಿ ಪಕ್ಕದಲ್ಲಿ ತಂದು ಹಾಕಲಾಗುತ್ತಿದೆ.ಇದರಿಂದ ದುರ್ನತ ಬೀರುತ್ತಿದ್ದು ಗ್ರಾಮಸ್ಥರಿಗೆಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ಕರ್ಜಗಿಯಲ್ಲೂ ಕಸದ ಸಮಸ್ಯೆ: ತಾಲೂಕಿಇನ್ನೊಂದು ದೊಡ್ಡ ಗ್ರಾ.ಪಂ ಕೇಂದ್ರಸ್ಥಳ, ಜಿಲ್ಲಾ ಪಂಚಾಯಿತಿ ಮತಕ್ಷೇತ್ರವಾಗಿರುವ ಕರ್ಜಗಿಯಲ್ಲೂ ಕಸದ ಸಮಸ್ಯೆ ತಲೆದೋರಿದೆ.  ಗ್ರಾಮದಲ್ಲಿನ ಕಸ ತಂದು, ರಸ್ತೆಗಳ ಪಕ್ಕದಲ್ಲಿ ಹಾಕುವ್ಯದರಿಂದ ಸೊಳ್ಳೆ ಉತ್ಪತ್ತಿಯಾಗಿ ಹಗಲು-ರಾತ್ರಿ ಜನರು ನೆಮ್ಮದಿ ಕಳೆದುಕೊಳ್ಳುವಂತೆ ಆಗಿದೆ.

ಸಾರ್ವಜನಿಕರಲ್ಲೂ ಬಂದಿಲ್ಲ ಜಾಗೃತಿ: ಇನ್ನು ಗ್ರಾ.ಪಂನವರು ಗ್ರಾಮದ ಕಸ ತಂದು ರಸ್ತೆಗಳ ಪಕ್ಕದಲ್ಲಿ ಹಾಕುತ್ತಾರೆ. ಜೊತೆಗೆ ಗ್ರಾಮಸ್ಥರು,ಸಾರ್ವಜನಿಕರಲ್ಲೂ ಜಾಗೃತಿ ಮೂಡಿಲ್ಲ.

ನಿಯಮ ಗಾಳಿಗೆ: ಸರ್ಕಾರ ಕಸ ವಿಲೇವಾರಿಗಾಗಿಯೇ ವಿನೂತನ ಕಾರ್ಯಕ್ರಮ ಹಾಕಿಕೊಳ್ಳುತ್ತಿದೆ. ಕಸವನ್ನು ಹಸಿ ಮತ್ತುಒಣ ಕಸವೆಂದು ವಿಂಗಡಿಸಿ ಪಂಚಾಯಿತಿಒದಗಿಸಿದ ಕಸದ ತೊಟ್ಟಿಗಳಿಗೆ ಹಾಕುವಂತೆನಿಯಮ ರೂಪಿಸಲಾಗಿದೆ. ಆದರೆ ಕಸವನ್ನುಸರ್ಕಾರದ ನಿಯಮತೆ ವಿಲೇವಾರಿ ಮಾಡದೆಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿಮನಸೋ ಇಚ್ಚೆ ಕಸ ಹಾಕುತ್ತಿದ್ದಾರೆ. ಇದರಿಂದಾಗಿಕಸ ವಿಲೇವಾರಿಯೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ವಾಹನಗಳಲ್ಲಿ ಚಲಿಸುವಾಗ ಯಾವುದೇಗ್ರಾಮಗಳು ಬಂದರೂ ತಲೆಬಿಸಿ ಶುರುವಾಗುತ್ತದೆ.ಗ್ರಾಮ ಹತ್ತಿರವಾಗುತ್ತಿದ್ದಂತೆ ಕಸದ ರಾಶಿರಸ್ತೆಗಳ ಪಕ್ಕದಲ್ಲಿರುತ್ತದೆ. ಇದರಿಂದ ದುರ್ನಾತಬೀರುತ್ತದೆ. ಆದ್ದರಿಂದ ಕೂಡಲೇ ಕಸ ವಿಲೆವಾಗಿಗೆಕ್ರಮ ಕೈಗೊಳ್ಳಬೇಕು ಎಂದು ಸಮಾಜ ಸೇವಕಜೆ.ಎಂ ಕೊರಬು ಮನವಿ ಮಾಡಿದ್ದಾರೆ.

ಸರ್ಕಾರದ ನಿಯಮದಂತೆ ಕಸ ವಿಲೇವಾರಿ ಆದರೆ ಯಾವ ಊರುಗಳಲ್ಲೂ ಸಮಸ್ಯೆ ಆಗುವುದಿಲ್ಲ. ಪಂಚಾಯಿತಿಯವರಿಗೆ ಕನಿಷ್ಠ ಕಾಳಜಿ ಇಲ್ಲ. ಸಾರ್ವಜನಿಕರಲ್ಲೂ ಜಾಗೃತಿ ಬಂದಿಲ್ಲ. ಹೀಗಾಗಿ ಕಸದ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಕಸ ವಿಲೇವಾರಿಗಾಗಿ ಸರ್ಕಾರ ಕೈಗೊಂಡ ಕ್ರಮಗಳು ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು.-ಶ್ರೀಮಂತ ಬಿರಾದಾರ, ಹೋರಾಟಗಾರ

ದೇವಲ ಗಾಣಗಾಪುರ, ಮಾಶಾಳ ಸೇರಿದಂತೆ ನಾಲ್ಕೈದು ಕಡೆ ಮಾತ್ರಸ್ಥಳ ಮತ್ತು ವಾಹನ ಸೌಕರ್ಯವಿದೆ.ಉಳಿದ ಕಡೆ ವಾಹನವಿದ್ದರೆ ನಿವೇಶನವಿಲ್ಲ,ನಿವೇಶನವಿದ್ದಲ್ಲಿ ವಾಹನ ಸಮಸ್ಯೆ ಇದೆ.ಇದಕ್ಕಾಗಿ 100ಹಿ100 ನಿವೇಶನ ಬೇಕು.ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತದೆ. -ನಬಿಸಾಬ್‌, ತಾ.ಪಂ, ಇಒ

 

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.