ಉತ್ತಮ ಪತ್ರಕರ್ತ ಪತ್ರಿಕೆ ಜೀವಾಳ: ಕಾಂತಾ


Team Udayavani, Jul 16, 2018, 9:26 AM IST

gul-3.gif

ಕಲಬುರಗಿ: ಉತ್ತಮ ಪತ್ರಕರ್ತ ಪತ್ರಿಕೆಯ ಜೀವಾಳ. ಹೀಗಾಗಿಯೇ ರಾಮ ಮನೋಹರ ಲೋಹಿಯಾ ಅವರು ಚೌಕಮ್ಮಾ ಪತ್ರಿಕೆ ಸ್ಥಾಪಿಸಿ ದೇಶದ ಸಮಸ್ಯೆಗಳನ್ನು ಎತ್ತಿ ತೋರಿಸಲಾರಂಭಿಸಿದ್ದರು. ಆ ಗಡಸುತನ ಇಂದಿನ ಪತ್ರಕರ್ತರಲ್ಲಿ ಬರಬೇಕು. ಜನಸಾಮಾನ್ಯರು ಪೊಲೀಸ್‌ರೆಂದರೆ ಭಯ ಹುಟ್ಟಿಸುವರೆಂದು ಅರ್ಥೈಸಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಕಾರ್ಮಿಕ ಸಚಿವ ಎಸ್‌.ಕೆ. ಕಾಂತಾ ಹೇಳಿದರು.

ನಗರದ ಹೊರವಲಯದ ತಾಜ ಸುಲ್ತಾನಪುರದ ಕೆಎಸ್‌ಆರ್‌ಪಿ ಕ್ಯಾಂಪ್‌ನಲ್ಲಿ ವಿಶ್ವಜ್ಯೋತಿ ಪ್ರತಿಷ್ಠಾನ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ “ಸಮಾಜ ರಕ್ಷಣೆಯಲ್ಲಿ ಪೆನ್‌ ಮತ್ತು ಗನ್‌’ ಎನ್ನುವ ವಿಚಾರ ಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.
 
ಡಾ| ಅಂಬೇಡ್ಕರ್‌ ಹೇಳಿದಂತೆ ಸಮಾಜದಲ್ಲಿ ಶೋಷಣೆ ಮಾಡುವವರು ನಮಗಿಂತ ಮೇಲಿದ್ದವರು. ಮೂಲ ಕೆಲಸಗಾರರಿಗೆ ನಿಜವಾದ ನ್ಯಾಯ ಸಿಗುತ್ತಿಲ್ಲ. ಕೆಳಗಿನವರು ಮಾಡಿರುವ ಕೆಲಸಕ್ಕೆ ಮೇಲಾಧಿಕಾರಿಗಳು ಅದರ ಗೌರವ ಪಡೆಯುತ್ತಾರೆ. ಇದು ನಿಜಕ್ಕೂ ವಿಪರ್ಯಾಸ. ಆದರೆ ಪತ್ರಕರ್ತರು ಹಾಗೂ ಪೊಲೀಸರು ಸಮಾಜದಲ್ಲಿ ತಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕಿಗಾಗಿ ಬೇರೊಬ್ಬರ ಬಾಲ ಬಡಿಯುವುದನ್ನು ಬಿಟ್ಟು ತಮ್ಮ ಹಕ್ಕನ್ನು ಪಡೆಯುವರಾಗಿ ಬೆಳೆಯಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಆರ್‌ಪಿ ಕಮಾಂಡೆಂಟ್‌ ಬಸವರಾಜ ಜಿಳ್ಳೆ ಮಾತನಾಡಿ, ಕಾನೂನು ಹಾಗೂ ಸುವ್ಯವಸ್ಥೆ ಜೊತೆ ಸಾಮಾಜಿಕ ಕಾಳಜಿ ಎತ್ತಿ ಹಿಡಿದ ಗೌರವ ಪತ್ರಕರ್ತರದ್ದು. ಪೆನ್ನಿನ ಮೂಲಕ ಸಮಾಜ ತಿದ್ದುವಲ್ಲಿ ಪತ್ರಕರ್ತರ ಹಾಗೂ ಪೊಲೀಸರ ಸೇವೆ ಅನನ್ಯವಾಗಿದೆ. ಸಮಾಜದಲ್ಲಿ ಅಹಿತಕರ ಘಟನೆಗಳು ನಡೆದಾಗ ಅದನ್ನು ಆದಷ್ಟು ಮಾತಿನ ಮೂಲಕ ಬಗೆಹರಿಸುವಲ್ಲಿ ಇಲಾಖೆ ಪ್ರಯತ್ನಿಸುತ್ತಿದೆ. ಮಿತಿ ಮೀರಿದಾಗ ಮಾತ್ರ ಗನ್‌ನ್ನು ಬಳಸಬೇಕಾಗುತ್ತದೆ ಎಂದರು.

ಸಂಜಯ ಪಾಟೀಲ ಉಪನ್ಯಾಸ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್‌ ಠಾಕೂರ, ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ, ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ನಿಸಾರ್‌ ಅಹ್ಮದ್‌, ಪರಮೇಶ್ವರ ಶಟಕಾರ, ಡಾ| ಬಾಬುರಾವ ಶೇರಿಕಾರ,
ಶಿವರಾಜ ಅಂಡಗಿ ಹಾಗೂ ಇತರರಿದ್ದರು. 

ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಾದ ವಿಶ್ವನಾಥ ಸ್ವಾಮೀಜಿ, ವೀರಣ್ಣಗೌಡ ಪಾಟೀಲ ಯಡ್ಡಳ್ಳಿ, ಚನ್ನಬಸಯ್ಯ ಗಾರಂಪಳ್ಳಿ, ಅಮರೇಶ ಎತ್ತಿನ ಮಾಳಗಿ, ಮಮತಾ ಬಾಬುರಾವ ಯಡ್ರಾಮಿ, ಭೀಮಾಶಂಕರ ಫಿರೋಜಾಬಾದ, ಸಂತೋಷ ನಾಡಗಿರಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಪತ್ರಕರ್ತರು, ಪೊಲೀಸ್‌ ಅಧಿಕಾರಿಗಳು, ಸಾಹಿತ್ಯಾಸಕ್ತರು ಹಾಜರಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.