ಜನರ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ
Team Udayavani, May 22, 2017, 4:45 PM IST
ಆಳಂದ: ತಾಲೂಕಿನಲ್ಲಿ ಕಾಡುತ್ತಿರುವ ಅನಕ್ಷರತೆಯಿಂದಾಗಿ ಕಡು ಬಡವರಿಗೆ ಸರಕಾರದ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಜನರಲ್ಲಿಅಕ್ಷರದ ಅರಿವು ಮೂಡಿಸುವುದು ಅವಶ್ಯವಾಗಿದೆ ಎಂದು ಶಾಸಕಬಿ.ಆರ್.ಪಾಟೀಲ ಹೇಳಿದರು.
ತಾಲೂಕಿನ ಧಂಗಾಪುರ ಸರಕಾರಿ ಹಿರಿಯ ಪ್ರಾಥಮಿಕ ಆವರಣದಲ್ಲಿ ಗ್ರಾ.ಪಂ ಮಟ್ಟದ 27ನೇ ಆರೋಗ್ಯ ಕಲ್ಯಾಣ ಶಿಬಿರಕ್ಕೆ ಉದ್ಘಾಟಿಸಿ ಅವರು ಮಾತನಾಡಿರು. ಸಮಾಜದಲ್ಲಿ ಇರುವ ನಿಗರ್ತಿಕರು ಬಡವರಿಗೆ, ವಿಧವೆಯರಿಗೆ, ವಯೋವೃದ್ಧರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವುದು ಕಷ್ಟವಾಗಿದೆ.
ಹಾಗಾಗಿ ಆರೋಗ್ಯ ಕಲ್ಯಾಣ ಶಿಬಿರದ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದ್ದೇವೆ ಎಂದು ಹೇಳಿದರು. ಧಂಗಾಪುರ ಗ್ರಾಪಂ ವ್ಯಾಪ್ತಿಯ ಸಂಧ್ಯಾ ಸುರûಾ 75, ವೃದ್ಧಾಪ್ಯ 50, ವಿಧವಾ 18, ಮನಸ್ವಿನಿ 2, ಅಂಗವಿಕಲ 18 ಫಲಾನುಭವಿಗಳನ್ನು ಗುರುತಿಸಲಾಗಿದೆ.
1 ತಿಂಗಳ ಒಳಗಾಗಿ ಆದೇಶ ನೀಡಿ ಪಿಂಚಣಿ ಸಿಗುವ ಹಾಗೇ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು. ಗ್ರಾಮದ ಹಿರಿಯ ಸಿದ್ದಣ್ಣ ಮಾಸ್ತರ ಶೇಗಜಿ ಸಭೆ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಅಧ್ಯಕ್ಷ ವಿಠuಲರಾವ ಪಾಟೀಲ, ಕೆಪಿಸಿಸಿ ಸದಸ್ಯ ಜಗನ್ನಾಥ ಶೇಗಜಿ,
ಮುಖಂಡರಾದ ಬಾಬುಗೌಡ ಪಾಟೀಲ, ಬಿ.ಕೆ. ಪಾಟೀಲ, ಗುರುಶರಣ ಪಾಟೀಲ ಕೋರಳ್ಳಿ, ಗುರುಶಿವಲಿಂಗ ಪಾಟೀಲ, ಎಪಿಎಂಸಿ ಉಪಾಧ್ಯಕ್ಷ ನಬೀಲಾಲ್ ಬಟ್ಟರಗಾ, ಕೆಎಂಎಫ್ ನಿರ್ದೇಶಕ ಈರಣ್ಣ ಝಳಕಿ, ಆಲೂಗೌಡ ಪಾಟೀಲ, ಲಕ್ಷಣ ಕರುಣಾಕರ,
ನಿಂಬರ್ಗಾ ಉಪತಹಶೀಲ್ದಾರ ಶಾಂತಕುಮಾರ ಪಟ್ಟಣ, ಕಂದಾಯ ನಿರೀಕ್ಷಕ ಪ್ರಭುಲಿಂಗ ತಟ್ಟಿ, ಡಾ|ರಾಕೇಶ ಚವ್ಹಾಣ, ಡಾ| ಅಭಿನಂದ, ಡಾ| ಅವಿನಾಶ, ಡಾ| ಆರ್. ಎನ್. ಸಾಲುಟಗಿ, ನೇತ್ರ ಸಹಾಯಕಿ ಸುಮಲತಾ, ಡಾ| ರಾಜೇಶ್ವರಿ ಇದ್ದರು. ಧಂಗಾಪುರ, ಬಟ್ಟರಗಾ, ದೇವತಂಗಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.