ಸರ್ಕಾರಿ ಸೇವೆ ಗ್ರಾಮಸರ ಮನೆಬಾಗಿಲಿಗೆ: ಮಹೇಶ


Team Udayavani, Sep 1, 2022, 1:59 PM IST

2-villages

ಆಳಂದ: ಹೊಸದಾಗಿ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗ್ರಾಮ ಇನ್‌ ಒನ್‌ ಸೇವಾ ಕೇಂದ್ರ ಆರಂಭಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ನಿಂಬರಗಾ ನಾಡ ತಹಶೀಲ್ದಾರ್‌ ಆರ್‌. ಮಹೇಶ ಹೇಳಿದರು.

ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಆರಂಭಿ ಸಲಾದ ಗ್ರಾಮ ಒನ್‌ ಸೇವಾ ಕೇಂದ್ರದ ಉದ್ಘಾಟನೆ ಸಮಾರಂಭದದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಕಾರ್ಯಕ್ರಮಗಳಲ್ಲಿ ಗ್ರಾಮ ಒನ್‌ ನಾಗರಿಕ ಸೇವಾ ಕೇಂದ್ರವು ಒಂದಾಗಿದೆ. ಇದರಿಂದ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ. ಈ ಸೇವಾ ಕೇಂದ್ರದಲ್ಲಿ ಗ್ರಾಮೀಣ ಭಾಗದ ಜನರಿಗೆ ಪಹಣಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಸೇರಿದಂತೆ ಅನೇಕ ಸೇವೆಗಳು ಕಡಿಮೆ ದರದಲ್ಲಿ ದೊರೆಯಲಿದೆ. ನಾಗರಿಕರೆಲ್ಲರೂ ಗ್ರಾಮ ಒನ್‌ ಕೇಂದ್ರದ ಸದುಪಯೋಗ ಪಡೆಯಲಿ ಎಂದರು.

ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಜನತೆಗೆ ಒಂದೇ ಸೂರಿನಡಿ ಹಲವು ಸೇವೆಗಳು ಸಿಗೋದರಿಂದ ಅನುಕೂಲವಾಗಲಿದೆ. ಆರ್ಥಿಕ ವಾಗಿಯೂ ನಾಗರಿಕರಿಗೆ ಸವಲತ್ತು ಸಿಗುತ್ತದೆ ಎಂದರು. ಗ್ರಾಪಂ ಸದಸ್ಯ ಚಂದ್ರಕಾಂತ ಮಠಪತಿ ಮಾತನಾಡಿ, ಕಡಿಮೆ ಶುಲ್ಕದಲ್ಲಿ ಹಲವು ಸೇವೆಗಳು ಗ್ರಾಮ ಒನ್‌ನಲ್ಲಿ ದೊರೆಯುತ್ತವೆ ಎಂದರು.

ಗ್ರಾಮ ಇನ್‌ ಒನ್‌ ಕೇಂದ್ರದ ಬಸವರಾಜ ಯಳಸಂಗಿ ಮಾತನಾಡಿ, ಈ ಸೇವಾ ಕೇಂದ್ರವನ್ನು ಹಣಗಳಿಕೆ ಉದ್ದೇಶದಿಂದ ಆರಂಭಿಸಿಲ್ಲ. ಜನರು ಆರ್ಥಿಕವಾಗಿ ಉಳಿತಾಯ ಮಾಡಬೇಕು. ಅವರಿಗೆ ಸೇವೆ ಒದಗಿಸಬೇಕು ಎನ್ನುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಯುವ ಮುಖಂಡ ಅಮೃತ ಬಿಬ್ರಾಣಿ, ಶರಣು ಸರಸಂಬಿ, ಜಗಯ್ಯ ಸ್ವಾಮಿ, ಮೋಹನ ರಾಠೊಡ, ಶಾಂತಪ್ಪ ಮಾಲಿಪಾಟೀಲ, ಶ್ರೀಶೈಲ ಮಾಲಿಪಾಟೀಲ, ಶರಣು ಬೆಳ್ಳಿ, ನಾಗರಾಜ ಪಾಟೀಲ, ರಾಮಚಂದ್ರ ದುಗೊಂಡ, ಸಂಜೀವಕುಮಾರ ಮಂಟಗಿ, ಶರಣು ಗುರಾಮಳಿ, ಶಿವಲಿಂಗಪ್ಪ ದುಗೊಂಡ, ಕಲ್ಯಾಣಿ ನಿರ್ಮಲ್ಕರ್‌, ಅಂಬೇಡ್ಕರ್‌ ತೋಳಿ ಇನ್ನಿತರರು ಇದ್ದರು. ಸ್ಥಳದಲ್ಲೇ ಅನೇಕರಿಗೆ ಅರ್ಜಿ ದಾಖಲಿಸಿಕೊಂಡು ಆಯುಷ್ಯಮಾನ್‌ ಭಾರತ ಆರೋಗ್ಯ ಕಾರ್ಡ್‌ ಸೇರಿದಂತೆ ಹಲವು ರೀತಿಯ ಸೌಲಭ್ಯಗಳ ಕುರಿತು ಅನೇಕರಿಗೆ ರಸೀದಿ ನೀಡಲಾಯಿತು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.