Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ತಪ್ಪಿಸಿಕೊಳ್ಳುವ ಪ್ರಯತ್ನ; ಜಮಾದಾರ್ ಕೊಲೆ ಆರೋಪಿ ಲಕ್ಷ್ಮಣಗೆ ಗುಂಡೇಟು
Team Udayavani, Sep 21, 2024, 1:18 PM IST
ಕಲಬುರಗಿ: ಆಳಂದ ತಾಲೂಕಿನ ಖಾನಾಪುರದ ಕ್ರಾಸ್ ಬಳಿ ನಡೆದಿದ್ದ ವಿಶ್ವನಾಥ್ ಜಮಾದಾರ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಮೇಲೆ ಶನಿವಾರ ಮಾಡ್ಯಾಳ ಗ್ರಾಮದ ಬಳಿಯಲ್ಲಿ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಆರೋಪಿ ಲಕ್ಷ್ಮಣ ಪೂಜಾರಿ ಬಲಗಾಲಿಗೆ ಗುಂಡು ತಗುಲಿದ್ದು, ಆತನನ್ನು ಹಾಗೂ ಆತನ ದಾಳಿಯಿಂದ ಗಾಯಗೊಂಡಿರುವ ನಿಂಬರ್ಗಾ ಪಿಎಸ್ಐ ಅವರನ್ನು ಚಿಕಿತ್ಸೆಗಾಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯಕ್ಕೆ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ವಿವರ
ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಜಮಾದಾರ ಕೊಲೆ ಸೆ.13ರಂದು ನಡೆದಿತ್ತು. ಮೂರು ಸುತ್ತು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣ ಪೂಜಾರಿ ಬಚ್ಚಿಟ್ಟಿದ್ದ ಗನ್ ರಿಕವರಿ ಮಾಡಲು ಶನಿವಾರ ಬೆಳಗ್ಗೆ ತೆರಳಿದ್ದ ಆಳಂದ ತಾಲೂಕಿನ ಮಾಡ್ಯಾಳ ಬಳಿಯಲ್ಲಿ ಏಕಾಏಕಿಯಾಗಿ ಲಕ್ಷ್ಮಣ ತಿರುಗಿ ಬಿದ್ದಿದ್ದಾನೆ.
ನಿಂಬರ್ಗಾ ಮಹಿಳಾ ಪಿಎಸ್ಐ ಮೇಲೆ ಲಕ್ಷ್ಮಣ ಹಲ್ಲೆ ಮಾಡಿದ್ದಾನೆ. ಇದರಿಂದ ಪಿಎಸ್ಐ ಕೈಗೆ ಗಾಯವಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್ಐ ಸೋಮಲಿಂಗ ಒಡೆಯರ್ ಲಕ್ಷ್ಮಣ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೂಡಲೇ ಸ್ಥಳದಲ್ಲಿ ಕುಸಿದು ಬಿದ್ದ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಕ್ಷ್ಮಣ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು, ಕಲಬುರಗಿಯಲ್ಲಿ ಗನ್ ಸಪ್ಲೈ ಮಾಡಿಕೊಂಡಿದ್ದ ಈತ ಸೆಕ್ಷನ್ 307 ಸೇರಿದಂತೆ ಇನ್ನೂ ಹಲವು ಪ್ರಕರಣಗಳಲ್ಲಿ ಪೊಲೀಸರಿಗೂ ಬೇಕಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.