ಉನ್ನತ ವ್ಯಕ್ತಿತ್ವದಿಂದ ಗುರುವಿನ ಸ್ಥಾನ ಲಭ್ಯ: ಸಾರಂಗಧರ ಶ್ರೀ


Team Udayavani, Jul 28, 2018, 2:48 PM IST

gul-3.jpg

ಕಲಬುರಗಿ: ಹುಟ್ಟಿದ ಜಾತಿ, ಧರ್ಮದಿಂದ ಗುರುವಾಗಲು ಸಾಧ್ಯವಿಲ್ಲ. ಬದಲಿಗೆ ಯಾವ ವ್ಯಕ್ತಿ ತನ್ನ ಜೀವನದಲ್ಲಿ ಅರಿವು ಆಚಾರ, ವಿಚಾರ, ಅನುಭಾವ, ಉನ್ನತ ವ್ಯಕ್ತಿತ್ವ ಹೊಂದಿ, ಸಮಾಜಕ್ಕೆ ತನ್ನದೇ ಆದ ನಿರಂತರ ಕೊಡುಗೆ ನೀಡುತ್ತಾನೋ ಆತನಿಗೆ ಗುರುವಿನ ಸ್ಥಾನ ಲಭ್ಯವಾಗುತ್ತದೆಯೆಂದು ಶ್ರೀಶೈಲ ಸಾರಂಗಧರಮಠ ಹಾಗೂ ಶಹಾಬಜಾರದ ಸುಲಫಲ ಮಠದ ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.

ನಗರದ ಆಳಂದ ರಸ್ತೆಯ, ಕೃಷಿ ಮಹಾ ವಿದ್ಯಾಲಯದ ಎದುರುಗಡೆಯಿರುವ ಅಣ್ಣಾರಾವ್‌ ಬೆಣ್ಣೂರ ಕಲ್ಯಾಣ ಮಂಟಪದಲ್ಲಿ ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶ್ರೀಗಳಿಗೆ ಏರ್ಪಡಿಸಿದ್ದ ಗುರುವಂದನಾ ಸಮಾರಂಭದಲ್ಲಿ ಬಳಗ ಹಾಗೂ ಅನೇಕ ಭಕ್ತವೃಂದದಿಂದ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

“ಜಗದ್ಗುರು’ ಎಂದು ಕರೆಸಿಕೊಳ್ಳಬೇಕಾದರೆ, ಕೇವಲ ಎತ್ತರದ ಸ್ಥಾನದಲ್ಲಿ ಕುಳಿತರೇ ಸಾಲದು. ಬದಲಿಗೆ, ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ನೋವಿಗೆ ಸ್ಪಂದಿಸುವ, ದೀನ, ಶೋಷಿತ, ಬಡವರ ಕಣ್ಣಿರನ್ನು ಒರೆಸುವ ಗುಣ ಹೊಂದಿರಬೇಕು. ಬಳಗದವರು ಹಾಗೂ ಸಮಸ್ತ ಭಕ್ತರು ನನ್ನನ್ನು ಗೌರವಿಸುವ ಮೂಲಕ ಹೆಚ್ಚಿನ ಜನಸೇವೆ ಮಾಡಲು ಸ್ಫೂರ್ತಿ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕರಾದ ದತ್ತಾತ್ರೇಯ ಸಿ.ಪಾಟೀಲ ರೇವೂರ ಮಾತನಾಡಿ, ಡಾ| ಸಾರಂಗಧರ ಶ್ರೀಗಳು ಸಮಾಜದ ಬಗ್ಗೆ ಕಳಕಳಿಯುಳ್ಳ ವ್ಯಕ್ತಿಯಾಗಿದ್ದಾರೆ. ಇವರೊಬ್ಬ ವ್ಯಕ್ತಿಯಲ್ಲ, ಬದಲಿಗೆ ಅದ್ಭುತ ಶಕ್ತಿಯಗಿದ್ದಾರೆ ಎಂದರು. 

“ಸದೃಢ ಸಮಾಜ ನಿರ್ಮಾಣದಲ್ಲಿ ಗುರುವಿನ ಪಾತ್ರ’ ಎಂಬ ವಿಷಯದ ಮೇಲೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ರೇವಣಸಿದ್ದಪ್ಪ ದುಕಾನ್‌ ವಿಶೇಷ ಉಪನ್ಯಾಸ ನೀಡಿದರು. ಬಳಗದ ಅಧ್ಯಕ್ಷ ಎಚ್‌.ಬಿ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಕಾಶವಾಣಿ ಸಂಗೀತ ಕಲಾವಿದರಾದ ಅಶ್ವಿ‌ನಿ ರಾಜಕುಮಾರ ಹಿರೇಮಠ ಅವರಿಂದ ವಚನ ಗಾಯನ ಹಾಗೂ ಬಸವೇಶ್ವರ ಕಾನ್ವೆಂಟ್‌ ಶಾಲೆಯ ಮಕ್ಕಳಿಂದ ಪ್ರಸ್ತುತಪಡಿಸಲಾದ ವಚನ ನೃತ್ಯ ಜರುಗಿತು. ಪಂಡಿತ ತಾರನಾಥ ಪ್ರತಿಷ್ಠಾನದ ಡಾ| ಸದಾನಂದ ಪಾಟೀಲ ಅವರಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಹಾಗೂ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮ ಜರುಗಿತು.

ಮಕ್ತಂಪುರ ಗುರುಬಸವ ಮಠದ ಪೂಜ್ಯರಾದ ಶಿವಾನಂದ ಮಹಾಸ್ವಾಮಿಗಳ ನೇತೃತ್ವ ಹಾಗೂ ಚವದಾಪುರಿ ಹಿರೇಮಠದ ಪೂಜ್ಯರಾದ ರಾಜಶೇಖರ ಶಿವಾಚಾರ್ಯರ ಸಮ್ಮುಖದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್‌, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರಾಜು ಲೇಂಗಟಿ, ಜಿಲ್ಲಾ ದಾಲ್‌ ಮಿಲ್ಲರ್ ಅಸೋಸಿಯೇಶನ್‌ ಅಧ್ಯಕ್ಷ ಡಾ| ಚಿದಂಬರರಾವ್‌ ಪಾಟೀಲ, ಅಖೀಲ ಕರ್ನಾಟಕ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಕಲ್ಯಾಣರಾವ್‌ ಶೀಲವಂತ, ಸಮಗ್ರ ಮಾನವ ಹಕ್ಕುಗಳ ಸಂರಕ್ಷಣಾ ಸಂಘ(ದ.ಘ)ದ ಅಧ್ಯಕ್ಷ ಈರಣ್ಣಗೌಡ ಪೊಲೀಸ್‌ ಪಾಟೀಲ, ಹೈಕೋರ್ಟ್‌ ನ್ಯಾಯವಾದಿ ಶಿವಕುಮಾರ ಬಿದರಿ, ಆರಾಧನಾ ಪಿಯು ಕಾಲೇಜಿನ ಪ್ರಾಚಾರ್ಯ ಚೇತನಕುಮಾರ ಗಾಂಗಜೀ, ಸೃಷ್ಠಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಅಂಬಾರಾಯ ಎಸ್‌.ಹಾಗರಗಿ, ಮಹಾನಂದನವನ ಆಶ್ರಮದ ಪೂಜ್ಯರಾದ ಗುರುಶಾಂತಪ್ಪ ಶೀಲವಂತ, ಚಿಂತಕ ಎಸ್‌.ಎಸ್‌. ಬೆಳ್ಳೆ, ಮುಖಂಡ ಅಪ್ಪು ಕಣಕಿ, ನ್ಯಾಯವಾದಿ ಹಣಮಂತರಾಯ ಅಟ್ಟೂರ, ವಿಜಯಕುಮಾರ ತೇಗಲತಿಪ್ಪಿ ಹಾಗೂ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.