![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಕಲಬುರಗಿಯಲ್ಲಿ ಅವಾಂತರ ಸೃಷ್ಟಿಸಿದ ತಡರಾತ್ರಿ ಸುರಿದ ಧಾರಾಕಾರ ಮಳೆ
Team Udayavani, Jun 28, 2020, 12:29 PM IST
![ಕಲಬುರಗಿಯಲ್ಲಿ ಅವಾಂತರ ಸೃಷ್ಟಿಸಿದ ತಡರಾತ್ರಿ ಸುರಿದ ಧಾರಾಕಾರ ಮಳೆ](https://www.udayavani.com/wp-content/uploads/2020/06/kalaburgi-620x359.jpg)
ಕಲಬುರಗಿ: ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಕಲಬುರಗಿ ನಗರದ ಅನೇಕ ಬಡಾವಣೆಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದರೆ, ತಾಲೂಕಿನ ಜಂಬಗಾ (ಬಿ) ಗ್ರಾಮದ ರಸ್ತೆ ಮಳೆ ಅಬ್ಬರಕ್ಕೆ ಬಹುತೇಕ ಕೊಚ್ಚಿಕೊಂಡು ಹೋಗಿದೆ.
ಗ್ರಾಮದ ರಸ್ತೆ ಒಡೆದ ಪರಿಣಾಮ ಹೊಲಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಎರಡು ವಾರದ ಹಿಂದೆಯಷ್ಟೇ ರೈತರು ಬಿತ್ತನೆ ಮಾಡಿದ್ದರು. ಈಗ ರೈತರ ಹೊಲಗಳಿಗೆ ನೀರು ನುಗ್ಗಿ ಕೆರೆಯಂತಾಗಿದೆ. ಮೊಳಕೆಯೊಡೆದ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.
ಇತ್ತ, ಉದನೂರ ಹಳ್ಳ ಸಹ ತುಂಬಿ ಹರಿದ ಪರಿಣಾಮ ಉದನೂರ ಮತ್ತು ನಂದಿಕೂರ ಅಕ್ಕ-ಪಕ್ಕದ ಗ್ರಾಮಗಳಲ್ಲಿ ರೈತರು ಬೆಳೆದಿದ್ದ ತರಕಾರಿ ತೋಟಗಳಿಗೆ ಹಳ್ಳದ ನೀರು ನುಗ್ಗಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ರಾತ್ರಿ ಜಾಗರಣೆ: ದಿಢೀರನೆ ರಾತ್ರಿ ಒಂದು ಗಂಟೆಗೆ ಶುರುವಾದ ಮಳೆ ಸುಮಾರು ಹೊತ್ತು ಎಡಬಿಡದೆ ಸುರಿಯಿತು. ರಭಸದ ಮಳೆಯಿಂದ ಅನೇಕ ಕಡೆಗಳಲ್ಲಿ ತಗ್ಗು ಪ್ರದೇಶದ ಮನೆಗೆಗಳಿಗೆ ನೀರು ನುಗ್ಗಿತ್ತು. ಹೀಗಾಗಿ ಜನರು ರಾತ್ರಿಯಿಡೀ ಜಾಗರಣೆ ಮಾಡುವ ಪರಿಸ್ಥಿತಿ ಉಂಟಾಯಿತು.
ಜೆ.ಆರ್.ನಗರ, ಕೈಲಾಸ ನಗರ, ಜನತಾ ಲೇಔಟ್, ಬ್ರಹ್ಮಪುರ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿ ಸಾಮಗ್ರಿಗಳು ಮತ್ತು ವಸ್ತುಗಳ ತೊಯ್ದು ತೊಪ್ಪೆಯಾಗಿವೆ. ಅಲ್ಲದೆ, ಲಾಲ್ ಗೇರಿ ಕ್ರಾಸ್, ಬಸ್ ನಿಲ್ದಾಣ ಮುಂಭಾಗದ ಕೆಎಚ್ ಬಿ ಕಾಂಪ್ಲೆಕ್ಸ್, ಜೇವರ್ಗಿ ಕ್ರಾಸ್ ಸೆಂಚೂರಿ ಕಾಂಪ್ಲೆಕ್ಸ್, ಸೇಡಂ ರಸ್ತೆಯ ಖರ್ಗೆ ಬಂಕ್ ಮುಂಭಾಗದ ನೆಲ ಮಳಿಗೆಗಳ ಅಂಗಡಿಗಳಿಗೂ ಮಳೆ ನೀರು ಹರಿದಿದೆ.
ಲಾಲ್ಗೇರಿ ಕ್ರಾಸ್ ನಲ್ಲಿ ರಸ್ತೆ ಮೇಲೆ ಅಪಾರ ಪ್ರಮಾಣದ ಮಳೆ ನೀರು ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಚರಂಡಿ ಮಿಶ್ರಿತ ನೀರಿನ ಮಧ್ಯೆ ಸಿಲುಕಿ ವಾಹನ ಸವಾರರು ಪರದಾಡುವಂತಾಗಿದೆ. ಅನಿವಾರ್ಯವಾಗಿ ಇದೇ ನೀರಿನಲ್ಲಿ ಸಾರ್ವಜನಿಕರು ಸಂಚರಿಸುತ್ತಿದ್ದಾರೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sharana-Patil](https://www.udayavani.com/wp-content/uploads/2024/12/Sharana-Patil-150x90.jpg)
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
![All set for the Indian Cultural Festival](https://www.udayavani.com/wp-content/uploads/2024/12/samas-150x86.jpg)
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
![Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ](https://www.udayavani.com/wp-content/uploads/2024/12/cafe-150x86.jpg)
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
![Collection of donations in the name of Sri Siddalinga of Siddaganga Math: Old students upset](https://www.udayavani.com/wp-content/uploads/2024/12/kal-1-150x84.jpg)
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
![Togari completely destroyed by neti disease](https://www.udayavani.com/wp-content/uploads/2024/12/toigar-150x84.jpg)
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.