ಉರಿ ಬಿಸಿಲಿಗೆ ಬಸವಳಿದ ಹೈ-ಕ ಜನ; ಕುಡಿಯುವ ನೀರಿನ ಸಮಸ್ಯೆ ತಾಂಡವ


Team Udayavani, Apr 16, 2017, 12:11 PM IST

Ban16041711Medn.jpg

ಕಲಬುರಗಿ: ಬಿಸಿಲು ನಾಡು ಎಂದೇ ಖ್ಯಾತಿ ಪಡೆದಿರುವ ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ದಿನೇ-ದಿನೇ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು, ಕಳೆದ ವರ್ಷಕ್ಕಿಂತ ಕನಿಷ್ಠ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಬಿಸಿಲು ಹೆಚ್ಚಳವಾಗಿದ್ದರಿಂದ ಜನ ಕಂಗಾಲಾಗಿದ್ದು, ಮಧ್ಯಾಹ್ನ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ.

ಶನಿವಾರ ಕಲಬುರಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿದೆ. ಇದು ರಾಜ್ಯದಲ್ಲಿಯೇ ಅತ್ಯಧಿಕ ತಾಪಮಾನ. ಅಲ್ಲದೇ ಇದು ಕಳೆದ ವರ್ಷಕ್ಕಿಂತ 2. 7 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಿದೆ.

ಅದೇ ರೀತಿ ಬಳ್ಳಾರಿಯಲ್ಲಿ 42 ಡಿಗ್ರಿ ಸೆಲ್ಸಿಯಸ್‌, ರಾಯಚೂರಿನಲ್ಲಿ 40.5 ಡಿಗ್ರಿ ಸೆಲ್ಸಿಯಸ್‌, ಕೊಪ್ಪಳದಲ್ಲಿ 39.9 ಡಿಗ್ರಿ ಸೆಲ್ಸಿಯಸ್‌, ವಿಜಯಪುರದಲ್ಲಿ 41 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿದೆ.ಮುಂಜಾನೆ 8 ಗಂಟೆ ಆಗುತ್ತಿದ್ದಂತೆ ತಾಪಮಾನ ಹೆಚ್ಚಳವಾಗುತ್ತಾ ಮಧ್ಯಾಹ್ನದ ಹೊತ್ತಿಗೆ ಹೊರಗೆಬಾರದಿರುವ ಮಟ್ಟಿಗೆ ಝಳ ವಿಪರೀತಗೊಳ್ಳುತ್ತದೆ.

ಕೆಂಡದಂತಹ ಬಿಸಿಲಿಗೆ ಜನ ಮಧ್ಯಾಹ್ನ 12ರ ನಂತರ ಹೊರಗೆ ಬಾರದೇ ಇರುವ ಹಿನ್ನೆಲೆಯಲ್ಲಿ ರಸ್ತೆಗಳೆಲ್ಲ ಬಿಕೋ ಎನ್ನುತ್ತಿರುತ್ತವೆ. ಗಾಡಿ ಮೇಲೆ ತಿರುಗಾಡಿದರೂ ಕಣ್ಣುಗಳು ಕುಕ್ಕುತ್ತಿರುತ್ತವೆ. ಬಿಸಿಲು ಒಂದೆಡೆ ಉಗ್ರ ಪ್ರತಾಪ ತೋರುತ್ತಿದ್ದರೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಮುಂಗಾರು ಹಂಗಾಮು ಬಿತ್ತನೆ ಹೊತ್ತಿಗೆ ಹೊಲ ರಂಟೆ ಹೊಡೆದು ಬಿತ್ತನೆಗೆ ಭೂಮಿ ಯೋಗ್ಯ ಮಾಡಲು ರೈತ ಎತ್ತುಗಳೊಂದಿಗೆ ಹೊಲಕ್ಕೆ ಹೋದರೆ ಬೆಳಗ್ಗೆ 10:00 ಗಂಟೆ ನಂತರ ರಂಟೆ ಹೊಡೆಯಲು ಬಾರದಿರುವ ಮಟ್ಟಿಗೆ ಭೂಮಿ ಬಿಸಿಗೊಳ್ಳುತ್ತಿದೆ.

ಎಳ ನೀರಿನ ದರ ಏರಿಕೆ: ಬಿರು ಬೇಸಿಗೆ ಹಿನ್ನೆಲೆಯಲ್ಲಿ ಎಳ ನೀರು ದರ ಒಮ್ಮೆಲೆ 10 ರೂ.ಹೆಚ್ಚಳವಾಗಿದೆ. ಇಷ್ಟು ದಿನ 30 ರೂ.ಗೆ ಇದ್ದ ಎಳೆ ನೀರು 40 ರೂ. ಗೆ ಮಾರಾಟವಾಗುತ್ತಿದೆ. ಮಣ್ಣಿನ ಗಡಿಗೆಗಳಿಗೂ ಬೇಡಿಕೆ ಬಂದಿದೆ. ಬಿಸಿಲಿನ ಜಳಕ್ಕೆ ಈಗಾಗಲೇ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.

ಕಲಬುರಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾದರೆ ಮಹಾನಗರದ ರಸ್ತೆಗಳಿಗೆ ನೀರು ಚಿಮ್ಮಿಸಲು ಉದ್ದೇಶಿಸಲಾಗಿದೆ. ದಿನಾಲು ಬಿಸಿಲನ್ನು ಅವಲೋಕಿಸಲಾಗುತ್ತಿದೆ. ಹೊಸದಾಗಿ ಮಾಡಲಾದ ರಸ್ತೆಗಳಿಗೆ ನೀರು ಚಿಮ್ಮಿಸಲಾಗುತ್ತಿದೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ರಕ್ಷಣಾತ್ಮಕ ಕ್ರಮಗಳನ್ನು ಅನುಸರಿಸಬೇಕು.
– ಪಿ. ಸುನೀಲಕುಮಾರ, ಆಯುಕ್ತರು,
ಮಹಾನಗರ ಪಾಲಿಕೆ, ಕಲಬುರಗಿ

– ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.