Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Team Udayavani, Oct 18, 2024, 7:20 AM IST
ಕಲಬುರಗಿ: ಗಾಂಜಾ ಸೇವನೆ, ಮೊಬೈಲ್ ಬಳಕೆ ಆರೋಪದಿಂದ ಸುದ್ದಿಯಾಗಿದ್ದ ಕಲಬುರಗಿ ಜೈಲಿನಲ್ಲಿ ಕೈದಿಯೊಬ್ಬ ತನ್ನ ಸಹ ಕೈದಿಗೆ ಹನಿಟ್ರ್ಯಾಪ್ ಮಾಡಿರುವ ಆರೋಪ ಕೇಳಿ ಬಂದಿದೆ.
ಕಲಬುರಗಿ ಜೈಲಿನಲ್ಲಿರುವ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಿವಮೊಗ್ಗ ಮೂಲದ ಕೈದಿ ಜತೆ ಸೇರಿಕೊಂಡು ತಮ್ಮ ಸಹ ಕೈದಿಗಳನ್ನು ಹನಿಟ್ರ್ಯಾಪ್ ಗೆ ಬೀಳಿಸಿ ಹಣ ಕೀಳುತ್ತಿರುವ ವಿಷಯ ಚರ್ಚೆಗೆ ಗ್ರಾಸವಾಗಿದೆ.
ಮಲ್ಲೇಶ್ವರಂ ಸ್ಫೋಟ ಪ್ರಕರಣದ ಕೈದಿ ತನ್ನ ಸೆಲ್ಗೆ ಸಾಗರ ಎಂಬಾತನನ್ನು ಕರೆಯಿಸಿಕೊಂಡು ಕುಟುಂಬಸ್ಥರ ಜತೆ ವೀಡಿಯೋ ಕಾಲ್ನಲ್ಲಿ ಮಾತನಾಡಿಸಿದ್ದಾನೆ. ಬಳಿಕ ನೀನು ಇನ್ನೊಂದು ಮಹಿಳೆಯೊಂದಿಗೆ ಬೆತ್ತಲಾಗಿ ಮಾತನಾಡಿದರೆ ಆಕೆಯೂ ಬೆತ್ತಲಾಗಿ ಮಾತನಾಡುತ್ತಾಳೆ ಎಂದು ಪುಸಲಾಯಿಸಿದ್ದಾನೆ. ಆ ಬಳಿಕ ಮಹಿಳೆ ಮತ್ತು ಸಾಗರ್ ಮಧ್ಯೆ ನಡೆಯುವ ಸಂಭಾಷಣೆಯ ಸ್ಕ್ರೀನ್ ಶಾಟ್ಗಳನ್ನು ತೆಗೆದುಕೊಂಡು ಬ್ಲ್ಯಾಕ್ ಮೇಲ್ ಮಾಡಿ 50 ಸಾವಿರ ರೂ. ಪಡೆದಿದ್ದಾನೆ. ಎಂದು ಖುದ್ದು ಸಾಗರ್ ತನ್ನ ಸಹೋದರನ ಜತೆ ಮಾತನಾಡಿರುವ ವೀಡಿಯೋ ಈಗ ವೈರಲ್ ಆಗಿದೆ. ಇದೇ ರೀತಿ ಹಲವು ಹನಿಟ್ರ್ಯಾಪ್ ಆರೋಪ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
Channapatna;ಯೋಗೇಶ್ವರ್,ನಿಖಿಲ್ ಪೈಪೋಟಿ ಮಧ್ಯೆ ದೋಸ್ತಿ ಅಭ್ಯರ್ಥಿಯಾಗಿ ಅನಿತಾ ಹೆಸರು
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.