![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 19, 2024, 2:39 PM IST
ಕಲಬುರಗಿ: “ನೋಡಿ, ನಾನು ರಾಮಭಕ್ತ… ಹಿಂದೆ ಬಿಜೆಪಿಯಲ್ಲಿದ್ದಾಗ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ ಈ ಭಾಗದಿಂದ ಎರಡು ಕೋಟಿ ರೂಪಾಯಿಗಳನ್ನು ಸಂಗ್ರಹ ಮಾಡಿ ಕೊಟ್ಟಿದ್ದೇವೆ. ಆದರೆ ನಮಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ. ಹೀಗಾಗಿ ಅಯೋಧ್ಯೆಗೆ ಹೋಗುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.
ನದರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ನಿಧಿ ಸಂಗ್ರಹಕ್ಕೆ ನಮಗೆ ಸೂಚಿಸಿತ್ತು. ಆದರೆ ಇವತ್ತು ಆಹ್ವಾನ ಬಂದಿಲ್ಲ. ಬಂದಾಗ ನೋಡೋಣ ಎಂದರು.
ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುತ್ತಾರಲ್ಲಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಒಂದು ವೇಳೆ ಕಾಂಗ್ರೆಸ್ ಹಿಂದು ವಿರೋಧಿಯೇ ಆಗಿದ್ದರೆ ಕರ್ನಾಟಕದಲ್ಲಿ ಕಳೆದ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆಲ್ಲಲು ಹೇಗೆ ಸಾಧ್ಯವಾಗುತ್ತಿತ್ತು ಎಂದರು. ಅದರಲ್ಲಿ ಹಿಂದೂಗಳು ಮತ ಹಾಕಿಲ್ಲವೇ ಎಂದು ಪ್ರಶ್ನಿಸಿದರು.
ಹಿಂದಿನಿಂದಲೂ ಒಂದು ಮಾತಿದೆ, ಧರ್ಮದಲ್ಲಿ ರಾಜಕಾರಣ ಬೇಡ ಆದರೆ ರಾಜಕಾರಣದಲ್ಲಿ ಧರ್ಮ ಒಪ್ಪಿತವಾದದ್ದು, ಅದರೆ ಚರ್ಚೆ ಅನಗತ್ಯ. ಆದರೆ ರಾಮ ಮಂದಿರದ ವಿಚಾರದಲ್ಲಿ ಬಿಜೆಪಿ ಲೋಕಸಭೆಯ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡುತ್ತಿರುವಂತಹ ಕಾರ್ಯ ಇದು ರಾಜಕಾರಣವಾಗುತ್ತದೆ ಎಂದರು.
ಕಾಂಗ್ರೆಸ್ ನಲ್ಲಿ ಅಮಾಧಾನದಿಂದ ಇದ್ದೇನೆ. ನಾನು ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಗೆ ಬಂದಿದ್ದೇನೆ. ಹಾಗೂ ಕಾಂಗ್ರೆಸ್ ನಲ್ಲಿ ಸಮಾಧಾನದಿಂದ ಇದ್ದೇನೆಲ್ಲ ಎಂದ ಶೆಟ್ಟರ್…ನೀವೂ ಕಾಂಗ್ರೆಸ್ ನಲ್ಲಿ ಸಂತೋಷದಿಂದ ಇದ್ದಿರಾ? ಎಂದು ಕೇಳಿದಾಗಲೂ ನಾನು ಸಮಾಧಾನದಿಂದ ಇದ್ದೇನಲ್ಲಾ ಎಂದು ಅರ್ಥಗರ್ಭಿತವಾಗಿ ನುಡಿದರು.
ಧಾರವಾಡ ಲೋಕಸಭೆಯಿಂದ ಕಣಕ್ಕಿಳಿಯುತ್ತಿರಾ ಎಂದ ಪ್ರಶ್ನೆಗೆ ನಾನು ಆಕಾಂಕ್ಷಿಯೂ ಅಲ್ಲ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ ಎಂದರು.
ಬಸವಣ್ಣನವರನ್ನು ಸಾಂಕ್ಕೃತಿಕ ನಾಯಕ ಮಾಡಿರುವುದು ಚುನಾವಣೆಯಲ್ಲಿ ಕಾಂಗ್ರೆಸ್ ಗಿಮಿಕ್ ಅಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಬಹಳ ದಿನಗಳಿಂದಲೂ ಬೇಡಿಕೆ ಇತ್ತು. ಹಿಂದೆ ಕಾಂಗ್ರಸ್ ಮತ್ತು ಬಿಜೆಪಿ ಘೋಷಣೆ ಮಾಡಿಲ್ಲ. ಈಗ ಸಿದ್ಧರಾಮಯ್ಯ ಸರಕಾರ ಘೋಷಣೆ ಮಾಡಿದೆ. ಅದನ್ನು ಸ್ವಾಗತಿಸೋಣ ಎಂದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.