![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 30, 2021, 2:22 PM IST
ಕಲಬುರಗಿ: ಬಿಜೆಪಿ ಹೈಕಮಾಂಡ್ ರಾಜ್ಯದ ಸಚಿವರ ರಹಸ್ಯ ವರದಿ ತರಿಸಿರುವ ವಿಚಾರ ತಮಗೇನು ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಚಿವರ ಕಾರ್ಯವೈಖರಿ ಕುರಿತಾಗಿ ಹೈಕಮಾಂಡ್ ರಹಸ್ಯ ವರದಿ ತರಿಸಿಕೊಂಡಿಲ್ಕ. ಇದೆಲ್ಲ ಸುಳ್ಳು ಸುದ್ದಿ ಎಂದರು.
ನಿರಾಣಿ ಮುಂದಿನ ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪನವರು, ನಿರಾಣಿ ಆರಂಭದಲ್ಲಿ ಸಣ್ಣ ಉದ್ಯಮಿ. ಈಗ ವಿಶ್ವದಲ್ಲಿ ಹೆಚ್ಚು ಸಕ್ಕರೆ ಉತ್ಪಾದಿಸುವ ಉದ್ಯಮಿಗಳ ಸಾಲಿನಲ್ಲಿದ್ದಾರೆ. ನಾಳೆನೇ ಬೊಮ್ಮಾಯಿ ಅವರನ್ನು ತೆಗೆದು ನಿರಾಣಿಯವರನ್ನ ಸಿಎಂ ಮಾಡುತ್ತಾರೆಂದು ನಾನೆಲ್ಲೂ ಹೇಳಿಲ್ಲ. ಮುಂದೊಂದು ದಿನ ಆಗುತ್ತಾರೆಂದು ಹೇಳಿದ್ದೇನೆ. ಇದಕ್ಕೆ ಇಷ್ಟೊಂದು ಪ್ರಚಾರ ಸಿಗುತ್ತದೆ ಅಂದು ಕೊಂಡಿರಲಿಲ್ಲ. ಪ್ರಚಾರ ಸಿಕ್ಕಿದರೆ ಸಂತೋಷ. ನಾನೇನು ಮಾಡಲಾಗದು ಎಂದು ವಿವರಿಸಿದರು.
ಇದನ್ನೂ ಓದಿ:ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ
ಕಲಬುರಗಿಯಲ್ಲಿ ಶ್ರೀಮಂತರಿಗೆ ಬಿಜೆಪಿ ಟಿಕೆಟ್ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, 1734 ಕೋಟಿ ರೂ. ಆಸ್ತಿ ಇರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇಷ್ಟು ದುಡ್ಡು ಒಬ್ಬ ವ್ಯಕ್ತಿ ಬಳಿ ಇರುತ್ತದೆಂದು ನನಗೆ ಗೊತ್ತೇ ಇರಲಿಲ್ಲ. ಇಂತಹ ವಿಚಾರ ನಾ ಹೇಳಿದರೆ ಸಿದ್ರಾಮಯ್ಯ ತಮಗೆ ಪೆದ್ದ ಎನ್ನುತ್ತಾ. ಆದರೆ ಎಸ್.ಆರ್. ಪಾಟೀಲ್ ಒಬ್ಬ ಸಜ್ಜನ ರಾಜಕಾರಣಿ. ಸಿದ್ದರಾಮಯ್ಯನಂತೆ ಹತ್ತಾರು ಪಕ್ಷಕ್ಕೆ ಹೋದವರಲ್ಲ. ಅಂಥವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲ್ಲ. ಕರ್ನಾಟಕದಲ್ಲಿ ಸಿದ್ದರಾಮಯ್ಯನಷ್ಟು ಜಾತಿವಾದಿ ಇನ್ನೊಬ್ಬರಿಲ್ಲ. ವೀರಶೈವ ಲಿಂಗಾಯತ ಜಾತಿ ಒಡೆದಿದ್ದು ಇದೇ ಸಿದ್ರಾಮಯ್ಯ. ಗೋಹತ್ಯೆ ವಿರುದ್ದ ಹೋರಾಟ ಮಾಡಿದರೆ ಅಂತವರನ್ನೇ ಜೈಲಿಗೆ ಹಾಕಿದ ಮಹಾನುಭಾವ. ಸಿದ್ದರಾಮಯ್ಯ ಒಬ್ಬ ಹುಚ್ಚ. ಇಂತಹ ಹುಚ್ಚನನ್ನು ಕರ್ನಾಟಕ ಜನ ಯಾವತ್ತೂ ನೋಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಈಗ ಸಿದ್ರಾಮಯ್ಯ ಜೆಡಿಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಬರುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಗಿಂತ ಕಡಿಮೆ ಸೀಟು ಕಾಂಗ್ರೆಸ್ ಪಡೆಯುತ್ತದೆ ಎಂದು ಭವಿಷ್ಯ ನುಡಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.