![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 5, 2021, 5:33 PM IST
ವಾಡಿ (ಚಿತ್ತಾಪುರ): ಸಿಡಿಲು ಬಡಿದು ಇಬ್ಬರು ಕೃಷಿ ಕಾರ್ಮಿಕರು ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಸಂಭವಿಸಿದೆ.
ಬಳವಡಗಿ ಗ್ರಾಮದ ನಿವಾಸಿಗಳಾದ ರಾಜ್ ಅಹ್ಮದ್ (65) ಹಾಗೂ ಜಬ್ಬಾರ್ (32) ಮೃತ ದುರ್ದೈವಿಗಳು. ಮಂಗಳವಾರ ಸಂಜೆ 3:00 ಗಂಟೆಗೆ ಏಕಾಏಕಿ ಮೋಡಗಳ ಘರ್ಜನೆ ಶುರುವಾಗಿ ಸಿಡಿಲು ಅಪ್ಪಳಿಸಿದೆ.
ಮೃತರು ಗ್ರಾಮದ ವಿಶ್ವನಾಥ ರೆಡ್ಡಿ ಮಾಲಿ ಪಾಟೀಲ್ ಎಂಬುವವರ ಹೊಲದಲ್ಲಿ ಕೂಲಿಯಾಳುಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಸಿಡಿಲಬ್ಬರದ ಮಳೆಯ ಆರ್ಭಟಕ್ಕೆ ಹೆದರಿ ರಾಜ್ ಅಹ್ಮದ್ ಮತ್ತು ಜಬ್ಬಾರ್, ಸಮೀಪದ ಮರದ ಆಸರೆ ಪಡೆದಿದ್ದಾರೆ. ಈ ವೇಳೆ ದೊಡ್ಡ ಸದ್ದಿನ ಮೂಲಕ ಧರೆಗಪ್ಪಳಿಸಿದ ಸಿಡಿಲಿನ ಹೊಡೆತಕ್ಕೆ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತರ ಶವಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ:ಲಕ್ಷ್ಮೀಸಾಗರ ಕೆರೆಯ ಬಳಿ ತ್ಯಾಜ್ಯಕ್ಕೆ ಬೆಂಕಿ
ಘಟನೆಯಲ್ಲಿ ಗಾಯಗೊಂಡ ಕೃಷಿ ಕಾರ್ಮಿಕರಾದ ಮಲ್ಲಪ್ಪ (24) ಹಾಗೂ ಮಲ್ಲಿಕಾರ್ಜುನ (25) ಎಂಬುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಾಡಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.