
ಸೌಹಾರ್ದಯುತವಾಗಿ ಭಾರತ ಕಟ್ಟಿ
Team Udayavani, Jan 26, 2018, 12:45 PM IST

ಕಲಬುರಗಿ: ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಆಲೋಚನೆ ಮಾಡಿ ಸೌಹಾರ್ದ ಭಾರತವನ್ನು ಕಟ್ಟುವ ಅಗತ್ಯವಿದೆ ಎಂದು ಉಪನ್ಯಾಸಕ ಹಾಗೂ ಹೈದ್ರಾಬಾದ ಕರ್ನಾಟಕ ಸರಕಾರಿ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ ಪ್ರತಿಪಾದಿಸಿದರು.
ಇಲ್ಲಿನ ಕನ್ನಡ ಸಾಹಿತ್ಯ ಸಂಘದಲ್ಲಿ ಗುರುವಾರ ಎಸ್ಎಫ್ಐ ಹಮ್ಮಿಕೊಂಡಿದ್ದ ಜಿಲ್ಲಾ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಹಕ್ಕನ್ನು ತಳ ಸಮುದಾಯದಿಂದ ಕಸಿಯುವ ಮತ್ತು ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ನಡೆಯಬೇಕು.
ಏಕಂದರೆ ಎರಡೂ ಅಪಾಯದಲ್ಲಿವೆ. ಸಂವಿಧಾನವನ್ನು ಬದಲಿಸುವ ಮತ್ತು ಮೀಸಲಾತಿಯನ್ನು ತೆಗೆಯುವ ನಿಟ್ಟಿನಲ್ಲಿ
ಸಂಚುಗಳು ನಡೆದಿವೆ. ಇದನ್ನು ನಾವು ಈಗಲೇ ಹತ್ತಿಕ್ಕದಿದ್ದರೆ ಅಥವಾ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಅಪಾಯಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಸಂವಿಧಾನ ಉಳಿಸಿ ಭಾರತವನ್ನು ವೈಜ್ಞಾನಿಕವಾಗಿ ಕಟ್ಟಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎರಡು ಇಂದಿನ ವಿದ್ಯಾರ್ಥಿ ಸಮುದಾಯದ ಮುಂದೆ ಇದೆ
ಎಂದರು.
ಶಿಕ್ಷಕ ಎಚ್.ಎಂ. ತಳವಾರ ಮಾತನಾಡಿ, ಇಂದು ದೇಶದಲ್ಲಿ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಹಿಡಿತ ಸಾಧಿಸುವ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕಾಗಿ ವಿದ್ಯಾರ್ಥಿ ಸಮುದಾಯವನ್ನು ಬಳಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಇಲ್ಲದ ಆಲೋಚನೆಗಳನ್ನು ಹುಟ್ಟಿಸಲಾಗುತ್ತಿದೆ. ಕೋಮುವಾದಿ ಭಾವನೆಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬೇಡಿ. ಇದರಿಂದ ನಿಮ್ಮ ಭವಿಷ್ಯ ಹಾಳು ಮಾಡಲಾಗುತ್ತಿದೆ. ಈಗ ಏನಿದ್ದರೂ ಶಿಕ್ಷಣಕ್ಕೆ, ಕಲಿಕೆಗೆ ಒತ್ತು ನೀಡಿ. ಇದರಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದೆ ಹೋದರೆ ನೀವು ಮುಂದೆ ಸಮಾಜದ ಹಾಗೂ ದೇಶದ ಮುಂದೆ ಪ್ರಶ್ನೆಯಾಗಿ ನಿಲ್ಲುತ್ತಿರಿ ಎಂದರು.
ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಶಿಕ್ಷಣದ ಮಹತ್ವ ಹಾಳಾಗುತ್ತಿದೆ. ವಿದೇಶಿಗರಿಗೆ ಹಾಗೂ ಸಂಸ್ಥೆಗಳಿಗೆ ರತ್ನಗಂಬಳಿ ಹಾಸಿ ಕರೆಯಲಾಗುತ್ತಿದೆ. ಶಿಕ್ಷಣ ಹೆಸರಿನಲ್ಲಿ ವ್ಯಾಪಾರೀಕರಣ ನಡೆದಿದೆ. ನಮ್ಮ ಶಿಕ್ಷಣ ಅಭಿವೃದ್ಧಿ ಆಗಬೇಕಾದರೆ ಗುಲಾಮಗಿರಿ ತೊಲಗಬೇಕಾದರೆ ಕೋಠಾರಿ ಆಯೋಗದ ಶಿಫಾರಸುಗಳು ಜಾರಿಗೆ ಬರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸುನೀಲ ಮಾನ್ಪಡೆ ಮಾತನಾಡಿ, ಹೈಕ ಭಾಗಕ್ಕೆ 371 (ಜೆ)ನೇ ಕಲಂ ಜಾರಿ ಏನೋ ಮಾಡಲಾಗಿದೆ. ಇದು ಸರಿಯಾಗಿ ಜಾರಿಗೆ ಬರಬೇಕಾದರೆ ಸರಕಾರದ ಇಚ್ಛಾಶಕ್ತಿ ಕೊರತೆ ಇದೆ. ಅದನ್ನು ಮಾಡುವಲ್ಲಿ ಸರಕಾರ ಸೋತಿದೆ. ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವ ಧ್ವನಿ ಎತ್ತುವ ಯಾರೇ ಆಗಿರಲಿ ಅವರನ್ನು ಶಿಕ್ಷೆಗೆ ಗುರಿ ಮಾಡುವಂತಹ ಕಾನೂನಿನ ಅವಶ್ಯತೆ ಇದೆ. ಇಲ್ಲದೆ ಹೋದರೆಯುವ ಜನತೆ ಇದಕ್ಕೂ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ ಎಂದರು.
ಎಸ್ಎಫ್ಐ ಸಂಘಟಕರಾದ ಅಪೂರ್ವಲಾಲ್ ನದಾಫ್, ಶಂಕರ ಕವಲಗಿ ಸ್ವಾಗತಿಸಿದರು. ರಾಮಲಿಂಗ ಬಿರಾದಾರ
ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.