ಕಡ್ಡಾಯವಾಗಿ ಜಾಬ್ಕಾರ್ಡ್ ಹೊಂದಿ: ಸಿಇಒ ಅನಿರುದ್ಧ
Team Udayavani, Feb 10, 2017, 3:04 PM IST
ಚಿಂಚೋಳಿ: ಪ್ರತಿಯೊಬ್ಬ ಕೂಲಿಕಾರರು ಉದ್ಯೋಗ ಕಾರ್ಡ್, ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆಯೊಂದಿಗೆ ಪಡಿತರ ಚೀಟಿ ಕಡ್ಡಾಯವಾಗಿ ಹೊಂದಿರಬೇಕು. ಪ್ರತಿಯೊಂದು ಕುಟುಂಬಕ್ಕೆ ಉದ್ಯೋಗ ಖಾತ್ರಿ ಯೋಜನೆ ಅಡಿ 100 ದಿನಗಳ ಕೆಲಸ ನೀಡಲಾಗುತ್ತಿದೆ ಎಂದು ಜಿಪಂ ಸಿಇಒ ಅನಿರುದ್ದ ಶ್ರವಣ ಹೇಳಿದರು.
ತಾಲೂಕಿನ ಕುಂಚಾವರಂ ಗ್ರಾಪಂ ಆವರಣದಲ್ಲಿ ಗುರುವಾರ ಕುಂಚಾವರಂನ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್, ಗ್ರಾಪಂ ಆಶ್ರಯದಲ್ಲಿ ನಡೆದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆ ತೆರೆಯುವ ಅಭಿಯಾನ, ಪಿಂಚಣಿ ಮತ್ತು ಆಹಾರ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪ್ರತಿ ದಿನಕ್ಕೆ 244 ರೂ. ನೀಡಲಾಗುತ್ತಿದೆ. ಕುಂಚಾವರಂ ತೆಲಂಗಾಣ ರಾಜ್ಯದ ಗಡಿಯಲ್ಲಿ ಇರುವುದರಿಂದ ಇಲ್ಲಿ ತೆಲಗು ಭಾಷೆ ಇದೆ. ಭಾಷೆ ತೊಂದರೆ ಮತ್ತು ದೂರವಾಣಿ ಸಂಪರ್ಕ ಸಮಸ್ಯೆ ಇರುವುದರಿಂದ ಸ್ಥಳದಲ್ಲಿಯೇ ಸಮಸ್ಯೆ ಇತ್ಯರ್ಥಗೊಳಿಸಲು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ತಹಶೀಲ್ದಾರ ಪ್ರಕಾಶ ಕುದುರೆ ಮಾತನಾಡಿ, ಕುಂಚಾವರಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ವೃದ್ಧರಿಗೆ ಸರಕಾರದಿಂದ ಪಿಂಚಣಿ ಸರಿಯಾಗಿ ದೊರೆಯುತ್ತಿಲ್ಲ. ಪಡಿತರ ಚೀಟಿ ಸಮಸ್ಯೆ ಇರುವುದರಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಆಧಾರ್ ಕಾರ್ಡು, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ಖಾತೆ ಹಾಗೂ ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಸರಕಾರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಿದೆ.
ಇದಕ್ಕಾಗಿ ಕಂದಾಯ ಇಲಾಖೆ ನೆಮ್ಮದಿ ಕೇಂದ್ರದಲ್ಲಿ ಹಾಗೂ ತಹಶೀಲ್ದಾರ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ್ ಉದ್ಯೋಗ ಖಾತ್ರಿ ಯೋಜನೆ ಕುರಿತು ಮಾತನಾಡಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕುಮಾರಸ್ವಾಮಿ, ಪದ್ಮಾಜಿ ಮಾತನಾಡಿದರು.
ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಗ್ರಾಪಂ ಅಧ್ಯಕ್ಷ ಗೋಪಾಲ ಬಿ., ತಾಪಂ ಸದಸ್ಯ ಚಿರಂಜೀವಿ ಶಿವರಾಂಪುರ, ನರಸಿಂಹಲೂ ಕುಂಬಾರ, ಆಹಾರ ನಿರೀಕ್ಷಕ ಮಂಜುನಾಥ ಕಲಬುರಗಿ, ಮಲ್ಲಿನಾಥ ಇನ್ನಿತರರಿದ್ದರು. ತಾಲೂಕು ಉದ್ಯೋಗ ಖಾತ್ರಿ ನೋಡಲ್ ಅಧಿಕಾರಿ ಸಂತೋಷಕುಮಾರ ಯಾಚೆ ಸ್ವಾಗತಿಸಿದರು. ಪಿಡಿಒ ತುಕ್ಕಪ್ಪ ಶಾದೀಪುರ ನಿರೂಪಿಸಿದರು. ಶ್ರೀಕಾಂತ ಪೋಲಕಪಳ್ಳಿ ವಂದಿಸಿದರು. ಇದೇ ಸಂದರ್ಭದಲ್ಲಿ ಪಿಂಚಣಿ ಆದೇಶ ಪತ್ರವನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.